AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy | ‘ಹಳ್ಳಿಗಳಲ್ಲಿ ಇತ್ತೀಚೆಗೆ ಒಂದು ಹೊಸ ಸ್ಟೈಲ್ ಶುರುವಾಗಿದೆ.. ಕೇಸರಿ ಟವಲ್ ಹಾಕಿಕೊಂಡು ಓಡಾಡೋದು’

ಹಳ್ಳಿಗಳಲ್ಲಿ ಇತ್ತೀಚೆಗೆ ಒಂದು ಹೊಸ ಸ್ಟೈಲ್ ಶುರುವಾಗಿದೆ. ಜನರು ಇದೀಗ ಕೇಸರಿ ಟವಲ್ ಹಾಕಿಕೊಂಡು ಓಡಾಡುತ್ತಾರೆ ಎಂದು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೀಗೇಹಳ್ಳಿಯಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದ್ದಾರೆ.

HD Kumaraswamy | ‘ಹಳ್ಳಿಗಳಲ್ಲಿ ಇತ್ತೀಚೆಗೆ ಒಂದು ಹೊಸ ಸ್ಟೈಲ್ ಶುರುವಾಗಿದೆ.. ಕೇಸರಿ ಟವಲ್ ಹಾಕಿಕೊಂಡು ಓಡಾಡೋದು’
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
KUSHAL V
|

Updated on:Feb 22, 2021 | 7:27 PM

Share

ತುಮಕೂರು: ಹಳ್ಳಿಗಳಲ್ಲಿ ಇತ್ತೀಚೆಗೆ ಒಂದು ಹೊಸ ಸ್ಟೈಲ್ ಶುರುವಾಗಿದೆ. ಜನರು ಇದೀಗ ಕೇಸರಿ ಟವಲ್ ಹಾಕಿಕೊಂಡು ಓಡಾಡುತ್ತಾರೆ ಎಂದು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೀಗೇಹಳ್ಳಿಯಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದ್ದಾರೆ. ದೇವರ ಮೇಲೆ ಭಕ್ತಿಯಿಂದ ಕೇಸರಿ ಟವಲ್ ಹಾಕಿಕೊಳ್ಳಿ, ತಪ್ಪಿಲ್ಲ. ಆದರೆ, ಬಿಜೆಪಿಯವರು ಕೊಡುವ ಹಣ ಹಂಚಿದರೆ ಒಳ್ಳೆಯದಾಗಲ್ಲ ಎಂದು ಕೇಸರಿ ಟವಲ್ ಹಾಕಿಕೊಂಡು ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿರುವವರ ಬಗ್ಗೆ ಕುಮಾರಸ್ವಾಮಿ ಮಾತನಾಡಿದರು. ಬಿಜೆಪಿಯವರು ಕೊಡುವ 2-3ಸಾವಿರ ಹಣ ಹಂಚಿಕೆಗೆ ಕೇಸರಿ ಟವಲ್ ಬಳಸಿದರೆ ದೇವರು ಒಳ್ಳೇದು ಮಾಡಲ್ಲ ಎಂದು ಸೀಗೇಹಳ್ಳಿಯಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

‘ಸಮ್ಮಿಶ್ರ ಸರ್ಕಾರದಲ್ಲಿ ನಾನು ಹಣ ಮಾಡಲಿಕ್ಕೆ ಹೋಗಿಲ್ಲ’ ಮೈತ್ರಿ ಸರ್ಕಾರದಲ್ಲಿ ಕೆಲಸ ಮಾಡಲು ನೆಮ್ಮದಿ ಇರಲಿಲ್ಲ. ಒಂದು ದಿನ ನೆಮ್ಮದಿಯಿಂದ ಕೆಲಸ ಮಾಡುವುದಕ್ಕೆ ಆಗಿಲ್ಲ ಎಂದು ಸೀಗೇಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ನಾನು ಹಣ ಮಾಡಲಿಕ್ಕೆ ಹೋಗಿಲ್ಲ. ದೇವರು ಕೊಟ್ಟಿದ್ದ ಅಧಿಕಾರವನ್ನು ದೇವರಿಗೆ ಕೊಟ್ಟಿದ್ದೇನೆ ಎಂದು ಕುಮಾರಸ್ವಾಮಿ ಮತ್ತೆ ಮೈತ್ರಿ ಸರ್ಕಾರದ ಅನುಭವ ಬಿಚ್ಚಿಟ್ಟರು.

‘ಮೋದಿಯವರು ಹಾಗೇ ಹೇಳಿದ್ದಾರೆಂದರೆ ತಮಾಷೆ ಮಾತಲ್ಲ’ ರಾಜ್ಯಸಭೆಯಲ್ಲಿ ದೇವೇಗೌಡರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ರು. ರೈತರಿಗೆ ಜೀವನ ಮುಡುಪಿಟ್ಟವರಿದ್ರೆ ಅದು ದೇವೇಗೌಡರು. ಮೋದಿಯವರು ಹಾಗೇ ಹೇಳಿದ್ದಾರೆಂದರೆ ತಮಾಷೆ ಮಾತಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ತುಮಕೂರು ಜಿಲ್ಲೆಗೆ ನೀರು ತರುವ ಪ್ರಮುಖ ರೂವಾರಿ HDD. ದೇವೇಗೌಡ, ಹೆಚ್​.ಡಿ.ರೇವಣ್ಣ ಬಗ್ಗೆ ಅಪಪ್ರಚಾರ ಮಾಡಿದ್ದರು. HDD ಹೋರಾಟದಿಂದಲೇ ಹೇಮಾವತಿ ಡ್ಯಾಂ ನಿರ್ಮಾಣವಾಯ್ತು. ಜಲಾಶಯ ಇಲ್ಲದಿದ್ದರೆ ತುಮಕೂರಿಗೆ ಹೇಗೆ ನೀರು ಬರುತ್ತಿತ್ತು? ಕ್ರಿಯೆ ಇಲ್ಲದ ರಾಜಕಾರಣಿಗಳು HDD ವಿರುದ್ಧ ಮಾತಾಡ್ತಾರೆ. ಹೇಮಾವತಿ ನಾಲೆ ಸ್ವಚ್ಛಗೊಳಿಸಲು ₹200 ಕೋಟಿ ನೀಡಿದೆ ಎಂದು ಸೀಗೇಹಳ್ಳಿಯಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ಕುರುಬ ಸಮಾಜದ ಬಂಧುಗಳು 2A ಮೀಸಲಾತಿ ಬಿಟ್ಟು ST ಕೇಳ್ತಿದ್ದಾರೆ. 15% ಮೀಸಲಾತಿ ದೊಡ್ಡದಾ ಅಥವಾ  3% ದೊಡ್ಡದಾ? 15 ರೂಪಾಯಿ ದೊಡ್ಡದಾ ಅಥವಾ 3 ರೂಪಾಯಿ ದೊಡ್ಡದಾ ಎಂಬುದರ ಬಗ್ಗೆ ನನಗೆ ಅರ್ಥವಾಗ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. 15% ನಲ್ಲಿ ಕುರುಬ ಸಮಾಜಕ್ಕೆ ಸಿಂಹಪಾಲು ಇದೆ ಎಂದು ಹೇಳಿದರು.

ನಿನ್ನೆ ಪಂಚಮಸಾಲಿ ಸಮುದಾಯ ಕೂಡ ಹೋರಾಟ ಮಾಡಿದ್ದಾರೆ. ಮೊನ್ನೆ ನಮ್ಮ ಸಮುದಾಯದ ಸ್ವಾಮೀಜಿಗಳು ಕೂಡ ಮೀಸಲಾತಿ ಮಾಡಲು ಸಭೆ ನಡೆಸಿದ್ದಾರೆ. ಮೀಸಲಾತಿಗಾಗಿ ಧಾರ್ಮಿಕ ಗುರುಗಳನ್ನು ನಡೆಸುವ ಕೆಲಸ ಮಾಡಬಾರದು. ಸರ್ಕಾರ ಎಲ್ಲಾದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

‘ಇಂದು ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ’ ಇಂದು ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಅಧಿಕಾರಿಗಳು ₹20 ಲಕ್ಷ, 30 ಲಕ್ಷ ನೀಡಿ ಬರುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ನಮ್ಮ ಕಾಲದಲ್ಲಿ ಹೀಗೆ ಇರಲಿಲ್ಲ ಎಂದರು.

ಇದನ್ನೂ ಓದಿ: ವಾಜಪೇಯಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ ಎಂದಿದ್ದರು! ಇಂಥವರಿಂದ ನಮಗೆ ದೇಶಪ್ರೇಮದ ಬಗ್ಗೆ ಪಾಠ ಸರಿಯಲ್ಲ- ಬಿ.ಕೆ.ಹರಿಪ್ರಸಾದ್

Published On - 7:15 pm, Mon, 22 February 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ