AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಿಂದ ಮನೆ ಕಳೆದುಕೊಂಡಿದ್ದವರಿಗೆ ಸಿದ್ಧವಾಯ್ತು ಮನೆ! HDK ಏನಂದ್ರು?

ಮಡಿಕೇರಿ: 2018ರಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಭೀಕರ ಪ್ರವಾಹ ಸ್ಥಿತಿ ಎದುರಾಗಿತ್ತು. ಆಗ ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನೆರೆ ಬಂದಿತ್ತು. ಅಂದು ಕೊಡಗಿನ ಪ್ರವಾಹ ಸಂತ್ರಸ್ತರಿಗೆ, ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದೀಗ ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಮೇ ತಿಂಗಳಾಂತ್ಯಕ್ಕೆ 463 ಮನೆಗಳ ಹಸ್ತಾಂತರಕ್ಕೆ ಸಿದ್ಧಗೊಂಡಿವೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆ, ಗಾಳಿಬೀಡು, ಜಂಬೂರಿನಲ್ಲಿ ಮನೆಗಳು ನಿರ್ಮಾಣಗೊಂಡಿವೆ. ಅಂದು ಪ್ರವಾಹ ಸಂತ್ರಸ್ತರ ನೋವನ್ನು ನಾನು ಕಂಡಿದ್ದೆ. ಈಗ […]

ಪ್ರವಾಹದಿಂದ ಮನೆ ಕಳೆದುಕೊಂಡಿದ್ದವರಿಗೆ ಸಿದ್ಧವಾಯ್ತು ಮನೆ! HDK ಏನಂದ್ರು?
ಸಾಧು ಶ್ರೀನಾಥ್​
|

Updated on:May 15, 2020 | 12:23 PM

Share

ಮಡಿಕೇರಿ: 2018ರಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಭೀಕರ ಪ್ರವಾಹ ಸ್ಥಿತಿ ಎದುರಾಗಿತ್ತು. ಆಗ ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನೆರೆ ಬಂದಿತ್ತು. ಅಂದು ಕೊಡಗಿನ ಪ್ರವಾಹ ಸಂತ್ರಸ್ತರಿಗೆ, ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದೀಗ ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಮೇ ತಿಂಗಳಾಂತ್ಯಕ್ಕೆ 463 ಮನೆಗಳ ಹಸ್ತಾಂತರಕ್ಕೆ ಸಿದ್ಧಗೊಂಡಿವೆ.

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆ, ಗಾಳಿಬೀಡು, ಜಂಬೂರಿನಲ್ಲಿ ಮನೆಗಳು ನಿರ್ಮಾಣಗೊಂಡಿವೆ. ಅಂದು ಪ್ರವಾಹ ಸಂತ್ರಸ್ತರ ನೋವನ್ನು ನಾನು ಕಂಡಿದ್ದೆ. ಈಗ ಅವರಿಗೆ ಮನೆ ಸಿಗುತ್ತಿದೆ, ಅವರ ಖುಷಿ ನನ್ನದೂ ಕೂಡ. ನಮ್ಮ ಕೆಲಸಗಳು ಮಾತನಾಡಬೇಕು, ಮಾತನಾಡುತ್ತಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಿಎಂ ಹೆಚ್​ಡಿಕೆ ಸಂತಸ ಹಂಚಿಕೊಂಡಿದ್ದಾರೆ.

https://www.facebook.com/hdkumaraswamy/posts/2571510116446123

Published On - 12:06 pm, Fri, 15 May 20