ಪ್ರವಾಹದಿಂದ ಮನೆ ಕಳೆದುಕೊಂಡಿದ್ದವರಿಗೆ ಸಿದ್ಧವಾಯ್ತು ಮನೆ! HDK ಏನಂದ್ರು?

ಮಡಿಕೇರಿ: 2018ರಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಭೀಕರ ಪ್ರವಾಹ ಸ್ಥಿತಿ ಎದುರಾಗಿತ್ತು. ಆಗ ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನೆರೆ ಬಂದಿತ್ತು. ಅಂದು ಕೊಡಗಿನ ಪ್ರವಾಹ ಸಂತ್ರಸ್ತರಿಗೆ, ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದೀಗ ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಮೇ ತಿಂಗಳಾಂತ್ಯಕ್ಕೆ 463 ಮನೆಗಳ ಹಸ್ತಾಂತರಕ್ಕೆ ಸಿದ್ಧಗೊಂಡಿವೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆ, ಗಾಳಿಬೀಡು, ಜಂಬೂರಿನಲ್ಲಿ ಮನೆಗಳು ನಿರ್ಮಾಣಗೊಂಡಿವೆ. ಅಂದು ಪ್ರವಾಹ ಸಂತ್ರಸ್ತರ ನೋವನ್ನು ನಾನು ಕಂಡಿದ್ದೆ. ಈಗ […]

ಪ್ರವಾಹದಿಂದ ಮನೆ ಕಳೆದುಕೊಂಡಿದ್ದವರಿಗೆ ಸಿದ್ಧವಾಯ್ತು ಮನೆ! HDK ಏನಂದ್ರು?
ಸಾಧು ಶ್ರೀನಾಥ್​

Updated on: May 15, 2020 | 12:23 PM

ಮಡಿಕೇರಿ: 2018ರಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಭೀಕರ ಪ್ರವಾಹ ಸ್ಥಿತಿ ಎದುರಾಗಿತ್ತು. ಆಗ ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನೆರೆ ಬಂದಿತ್ತು. ಅಂದು ಕೊಡಗಿನ ಪ್ರವಾಹ ಸಂತ್ರಸ್ತರಿಗೆ, ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದೀಗ ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಮೇ ತಿಂಗಳಾಂತ್ಯಕ್ಕೆ 463 ಮನೆಗಳ ಹಸ್ತಾಂತರಕ್ಕೆ ಸಿದ್ಧಗೊಂಡಿವೆ.

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆ, ಗಾಳಿಬೀಡು, ಜಂಬೂರಿನಲ್ಲಿ ಮನೆಗಳು ನಿರ್ಮಾಣಗೊಂಡಿವೆ. ಅಂದು ಪ್ರವಾಹ ಸಂತ್ರಸ್ತರ ನೋವನ್ನು ನಾನು ಕಂಡಿದ್ದೆ. ಈಗ ಅವರಿಗೆ ಮನೆ ಸಿಗುತ್ತಿದೆ, ಅವರ ಖುಷಿ ನನ್ನದೂ ಕೂಡ. ನಮ್ಮ ಕೆಲಸಗಳು ಮಾತನಾಡಬೇಕು, ಮಾತನಾಡುತ್ತಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಿಎಂ ಹೆಚ್​ಡಿಕೆ ಸಂತಸ ಹಂಚಿಕೊಂಡಿದ್ದಾರೆ.

Published On - 12:06 pm, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us