AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಅಳಲು ತೋಡಿಕೊಂಡ ಸಿದ್ದರಾಮಯ್ಯ, ಇಂದು ‘ಆ 12 ಸ್ಥಾನ’ ಗೆದ್ದು ಮುಖ್ಯಮಂತ್ರಿ ಆಗುವ ಪಣ ತೊಟ್ಟರು

ಮೈಸೂರು, ಚಾಮರಾಜನಗರದಿಂದ 12 ಸ್ಥಾನ ಗೆದ್ದರಷ್ಟೇ ನಾವು ಮತ್ತೆ ಮುಖ್ಯಮಂತ್ರಿ ಸ್ಥಾನ ಕೇಳಲು ಸಾಧ್ಯ ಆದ್ದರಿಂದ ಚುನಾವಣೆಗೆ ಎಚ್ಚರಿಕೆಯಿಂದ ಸಿದ್ದರಾಗಬೇಕು ನಿಗದಿತ ಸಮಯಕ್ಕಿಂತ ಮೊದಲೇ ಚುನಾವಣೆ ಬರಬಹುದು. ಯಾವುದೇ ಕಾರಣಕ್ಕೂ ಯಾರೂ ಮೈಮರೆಯಬಾರದು ಎಂದು ಕರೆ ನೀಡಿದ್ದಾರೆ.

ನಿನ್ನೆ ಅಳಲು ತೋಡಿಕೊಂಡ ಸಿದ್ದರಾಮಯ್ಯ, ಇಂದು ‘ಆ 12 ಸ್ಥಾನ’ ಗೆದ್ದು ಮುಖ್ಯಮಂತ್ರಿ ಆಗುವ ಪಣ ತೊಟ್ಟರು
ಮೈಸೂರಿನಲ್ಲಿ ಸಭೆ ನಡೆಸಿದ ಸಿದ್ದರಾಮಯ್ಯ
Skanda
| Edited By: |

Updated on: Dec 19, 2020 | 5:29 PM

Share

ಮೈಸೂರು: ನಿನ್ನೆಯಷ್ಟೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಸ್ವಪಕ್ಷೀಯರೇ ಕಾರಣ ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಮತ್ತೆ ಮುಖ್ಯಮಂತ್ರಿ ಆಗುವ ಆಸೆಯನ್ನು ಹಂಚಿಕೊಂಡಿದ್ದಾರೆ. ಮೈಸೂರಿನ ಖಾಸಗಿ ಹೊಟೇಲಿನಲ್ಲಿ ಕಾಂಗ್ರೆಸ್​ನ ಶಾಸಕರು, ಮಾಜಿ ಶಾಕರೊಂದಿಗೆ ನಡೆಸಿದ ಸಭೆಯಲ್ಲಿ ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಿಂದ 12 ಸ್ಥಾನ ಗೆದ್ದರಷ್ಟೇ ನಾವು ಮತ್ತೆ ಮುಖ್ಯಮಂತ್ರಿ ಸ್ಥಾನ ಕೇಳಲು ಸಾಧ್ಯ ಆದ್ದರಿಂದ ಚುನಾವಣೆಗೆ ಎಚ್ಚರಿಕೆಯಿಂದ ಸಿದ್ದರಾಗಬೇಕು ಎಂದು ಕರೆ ನೀಡಿದ್ದಾರೆ. ನಿಗದಿತ ಸಮಯಕ್ಕಿಂತ ಮೊದಲೇ ಚುನಾವಣೆ ಬರಬಹುದು. ಯಾವುದೇ ಕಾರಣಕ್ಕೂ ಯಾರೂ ಮೈಮರೆಯಬಾರದು ಎಂದು ಸೂಚನೆ ನೀಡುವ ಮೂಲಕ ಚುನಾವಣೆಗೆ ಈಗಿಂದಲೇ ಸಿದ್ಧರಾಗುವ ಸೂಚನೆ ನೀಡಿದ್ದಾರೆ.

ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಯಾವ ಕಾರಣಕ್ಕೂ ಮೈಸೂರು ಭಾಗದಲ್ಲಿ ಜೆಡಿಎಸ್​ ಪಕ್ಷವನ್ನು ಕಡೆಗಣಿಸಬೇಡಿ. ಅವರ ಕುರಿತು ಬಹಳ ಎಚ್ಚರಿಕೆಯಿಂದ ಇರಿ ಎಂದು ಕಾಂಗ್ರೆಸ್​ನ ಶಾಸಕರು ಹಾಗೂ ಮಾಜಿ ಶಾಸಕರಿಗೆ ಹೇಳಿದ್ದಾರೆ ಎನ್ನಲಾಗಿದೆ. ಈ ಮೂಲಕ ಮೈಸೂರು ಭಾಗದಲ್ಲಿ ಸಂಪೂರ್ಣ ಹಿಡಿತ ಸಾಧಿಸಲು ಸಿದ್ದರಾಮಯ್ಯ ಸಿದ್ದತೆ ಮಾಡಿಕೊಳ್ಳುತ್ತಿರುವಂತೆ ಕಾಣುತ್ತಿದೆ.

ಸೋಲಿಗೆ ಸ್ಥಳೀಯ ಸ್ವಪಕ್ಷೀಯರು ಕಾರಣ.. ರಾಜ್ಯ ನಾಯಕರಲ್ಲ ನನ್ನ ಸೋಲಿಗೆ ಕಾಂಗ್ರೆಸ್ ಪಕ್ಷದವರೇ ಕಾರಣ ಎಂದು ನಿನ್ನೆ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಇಂದು ಆ ಕುರಿತು ಸ್ಪಷ್ಟನೆ ನೀಡಿದ್ದಾರೆ.ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ಹೇಳಿಕೆಗೆ ವಿಪರೀತಾರ್ಥ ಕಲ್ಪಿಸುವುದು ಬೇಡ ಎನ್ನುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

‘ನಮ್ಮವರೇ ಕೆಲವರಿಗೆ ನಾನು ಮತ್ತೆ CM ಆಗೋದು ಬೇಕಿರಲಿಲ್ಲ..ಸಹಿಸದೇ ನನ್ನನ್ನ ಸೋಲುವಂತೆ ಮಾಡಿದ್ರು’

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?