AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸುದ್ದಿಗೋಷ್ಠಿ ಕರೆದಿರುವ ರಮೇಶ್ ಜಾರಕಿಹೊಳಿ

ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಳೆ ಮೊದಲ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ. ರಮೇಶ್ ಜಾರಕಿಹೊಳಿ ನಾಳೆ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.

ನಾಳೆ ಸುದ್ದಿಗೋಷ್ಠಿ ಕರೆದಿರುವ ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ
KUSHAL V
|

Updated on:Mar 08, 2021 | 8:18 PM

Share

ಬೆಂಗಳೂರು: ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಳೆ ಮೊದಲ ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಮೇಶ್ ಜಾರಕಿಹೊಳಿ ನಾಳೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.  ಸದ್ಯ, ಸಿಡಿ ಪ್ರಕರಣದ ನಂತರ ಮೊದಲ ಬಾರಿ ಮಾಧ್ಯಮಗಳ ಮುಂದೆ ಕಾಣಿಸಲಿರುವ ಮಾಜಿ ಸಚಿವರ ಸುದ್ದಿಗೋಷ್ಠಿ ಸಾಕಷ್ಟು ಕುತೂಹಲ ಕೆರಳಿಸಿದೆ. ರಮೇಶ್ ಜಾರಕಿಹೊಳಿ ತಮ್ಮ ಸದಾಶಿವನಗರ ನಿವಾಸದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಸಿಡಿ ಬಹಿರಂಗವಾದ ಬಳಿಕ ರಾಜೀನಾಮೆ ನೀಡಿದ್ದ ರಮೇಶ್‌ ನಂತರ ಮಾಧ್ಯಮಗಳಿಂದ ದೂರ ಉಳಿದಿದ್ದರು. ನಿನ್ನೆ ರಮೇಶ್ ಸೋದರ ಬಾಲಚಂದ್ರ ಸುದ್ದಿಗೋಷ್ಠಿ ನಡೆಸಿದ್ರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಕರೆದಿದ್ದಾರೆ.

ಈ ಹಿಂದೆ ಮಾತನಾಡಿದ್ದ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ವಿರುದ್ಧದ ವಿಡಿಯೋವನ್ನು ಪೊಲೀಸರಿಗೆ ತಿಳಿಸುವ ಮೊದಲೇ ರಷ್ಯಾದಲ್ಲಿ ಯುಟ್ಯೂಬ್​ಗೆ ಅಪ್​ಲೋಡ್ ಆಗಿತ್ತು. 17 ಸರ್ವರ್ ಬುಕ್ ಮಾಡಿದ್ದರು. ಅದಕ್ಕಾಗಿ 10 ರಿಂದ 15 ಕೋಟಿ ಖರ್ಚು ಮಾಡಿದ್ದರು. ಗಂಭೀರ ಷಡ್ಯಂತ್ರವನ್ನು ನನ್ನ ಅಣ್ಣನ ವಿರುದ್ಧ ನಡೆಸಲಾಗಿತ್ತು. ದಯವಿಟ್ಟು ಮಾಧ್ಯಮಗಳಲ್ಲಿ ಆ ಮಹಿಳೆಗೆ ಸಂತ್ರಸ್ತ ಮಹಿಳೆ ಎಂಬ ಪದ ಬಳಸಬೇಡಿ. 15 ಕೋಟಿ ಖರ್ಚು ಮಾಡಿ ರಮೇಶ್ ಜಾರಕಿಹೊಳಿ ಮಂತ್ರಿಗಿರಿ ತಪ್ಪಿಸಲು ಈ ಕೆಲಸ ಮಾಡಿದ್ದಾರೆ. ಸಿಡಿ ಕಟ್​ ಮಾಡಿ ಎಡಿಟ್ ಮಾಡಿ ಹಾಕಿದ್ದಾರೆ. ಷಡ್ಯಂತ್ರ ಹೊರಗೆ ಬರಲು ಸಮಗ್ರ ತನಿಖೆ ಆಗಬೇಕು. ರಮೇಶ್ ಜಾರಕಿಹೊಳಿ ಮನೆಯಿಂದ ಹೊರಗೆ ಬಂದು ದೂರು ಕೊಡಬೇಕು ಎಂದು ಹೇಳಿದ್ದರು.

ಮಹಿಳೆಗೆ ‘ನೀನು ಹೆದರಬೇಡ, 50 ಲಕ್ಷ ಹಣ, ದುಬೈನಲ್ಲಿ ಕೆಲಸ ಕೊಡಿಸ್ತೀವಿ’ ಅಂತ ಆಕೆಗೆ ಭರವಸೆ ಕೊಟ್ಟು ಈ ಕೆಲಸ ಮಾಡಿಸಿದ್ದಾರೆ ಆಂತ ನಮ್ಮ ಸೋರ್ಸ್​ ಹೇಳುತ್ತದೆ. ನಾಳೆ ಒಂದು ದಿನ ಬಿಟ್ಟು ನಮ್ಮ ಸೋರ್ಸ್​ ಮೂಲಕ ನಾವು ಕೆಲಸ ಮಾಡ್ತೀವಿ. ಮರ್ಯಾದೆ ಗೌರವ ಹೋದರೆ ಕಷ್ಟವಾಗುತ್ತೆ. ನಾವೂ ಈ ಕೇಸ್​ ಫಾಲೊ ಮಾಡ್ತೀವಿ. ನಮ್ಮ ಸೋರ್ಸ್ ಮೂಲಕ ಕೆಲಸ ಮಾಡುತ್ತೇವೆ. ಇದು ಹನಿಟ್ರ್ಯಾಪ್ ಆಗಿದೆ. ಪ್ರಶ್ನೆಗಳನ್ನು ಯಾರೋ ಬರೆದುಕೊಟ್ಟಿದ್ದಾರೆ. ಅದನ್ನು ಆಕೆ ಕೇಳಿದ್ದಾಳೆ. ಐದು ರಾಜ್ಯಗಳಲ್ಲಿ ಚುನಾವಣೆ ನಡೀತಿದೆ. ನಮ್ಮ ಪಕ್ಷಕ್ಕೆ ಕೆಟ್ಟ ಹೆಸರು ತರಲು ಈ ಕೆಲಸ ಮಾಡಿದ್ದಾರೆ’ ಎಂದು ಅವರು ಆರೋಪಿಸಿದ್ದರು.

ಇವತ್ತು ನಾನೇ ರಮೇಶ್​ ಜಾರಕಿಹೊಳಿಯನ್ನು ಭೇಟಿ ಮಾಡ್ತೀನಿ. ಧೈರ್ಯವಾಗಿ ಹೊರಗೆ ಬರಲು ಮನವೊಲಿಸ್ತೀನಿ. ದಿನೇಶ್ ಕಲ್ಲಹಳ್ಳಿ ವಿರುದ್ಧ ಕಾನೂನು ಹೋರಾಟ ನಡೆಸುವ ಬಗ್ಗೆ ನಂತರ ಯೋಚಿಸ್ತೀವಿ. ಲಾಯರ್ ಜೊತೆಗೆ ಚರ್ಚೆ ಮಾಡಿ ಮುಂದಿನ ನಿರ್ಧಾರ ತಗೊಳ್ತೀವಿ ಎಂದು ಬಾಲಚಂದ್ರ ಜಾರಕಿಹೊಳಿ ಮುಂದಿನ ತಮ್ಮ ನಡೆಗಳ ಬಗ್ಗೆ ಸುಳಿವು ನೀಡಿದ್ದರು.

‘ನಾನು ವಿಡಿಯೋ ನೋಡಿಲ್ಲ’ ವಿಡಿಯೊ ನಾನು ಈವರೆಗೆ ನೋಡಿಲ್ಲ. ಇದು ಹನಿಟ್ರ್ಯಾಪ್ ಇರಬಹುದು ಅಥವಾ ಫೇಕ್ ಇರಬಹುದು. ನನ್ನ ಪ್ರಕಾರ ಇದು ಫೇಕ್ ವಿಡಿಯೊ. ಹನಿಟ್ರ್ಯಾಪ್​ಗೆ ಪ್ರಯತ್ನ ಪಟ್ಟಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

‘ದಿನೇಶ್ ಕಲ್ಲಹಳ್ಳಿ ಮಿಸ್​ಗೈಡ್ ಆಗಿರಬಹುದು’ ದಿನೇಶ್ ಕಲ್ಲಹಳ್ಳಿಯೂ ಇದರಲ್ಲಿ ಮಿಸ್​ಗೈಡ್ ಆಗಿರಬಹುದು. ಅವರಿಗೆ ಸಂಪೂರ್ಣ ಮಾಹಿತಿ ಕೊಡದೇ ದಾರಿತಪ್ಪಿಸಿದ್ದಾರೆ ಆಂತ ನನಗೆ ಅನ್ನಿಸುತ್ತೆ. ದಿನೇಶ್ ಕಲ್ಲಹಳ್ಳಿಯನ್ನು ತಮ್ಮ ಉದ್ದೇಶಕ್ಕೆ ಬಳಸಿಕೊಂಡಿರಬಹುದು.

ರಮೇಶ್ ಜಾರಕಿಹೊಳಿ ಅವರು ದೂರು ಕೊಡೋಕೆ ಆಗದಿದ್ದರೆ ನಮಗೆ ಹೇಳಲಿ. ನಾವು ದೂರು ಕೊಡ್ತೀವಿ. ಮುಖ್ಯಮಂತ್ರಿಗಳು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು.ಸಿಬಿಐ ತನಿಖೆ ಆಗಬೇಕು. ಕಾಣದ ಕೈಗಳು ಹೊರಗೆಬರಬೇಕು. ಸಂತ್ರಸ್ತೆ ಮಹಿಳೆ ಅಂತ ನೀವು ಹೇಳ್ತಿದ್ದೀರಿ. ಬಹಳ ದಿನಗಳಿಂದ ಈ ಬಗ್ಗೆ ಚರ್ಚೆ ಆಗಿದೆ. ನನ್ನ ಸೋರ್ಸ್​ ಮೂಲಕ ನಾನೂ ಪರಿಶೀಲಿಸಿದೆ.ನಮ್ಮ ಸೋರ್ಸ್​ ಮೂಲಕ ತಿಳಿದ ಮಾಹಿತಿಯಿದು’ ಎಂದು ಅವರು ಹೇಳಿದರು. ನಮ್ಮ ಕುಟುಂಬ, ಬಿಜೆಪಿಗೆ ಮುಜುಗರ ತರಲೆಂದು ಈ ಕೆಲಸ ಮಾಡಿದ್ದಾರೆ. ರಾಜಕೀಯ ಪಕ್ಷದವರು ಮಾತ್ರವೇ ಅಲ್ಲ, ಬೇರೆಯವರೂ ಇದರಲ್ಲಿ ಇದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ಹಲವರು ಸಿಲುಕಿರುವ ಶಂಕೆ

Published On - 8:06 pm, Mon, 8 March 21

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್