
ಕೋಲಾರ: ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಮಾನವೀಯತೆ ಹೋಗಿ, ರಾಕ್ಷಸರಾಗುತ್ತಿದ್ದೇವೆೇ. ಇದು ಕೊರೊನಾದ ಕ್ರೌರ್ಯಕ್ಕಿಂತ ಘೋರವಾಗಿದೆ ಎಂದು ಮಾಜಿ ಸ್ಪೀಕರ್ ರಮೇಶ್ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ರಮೇಶ್ ಕುಮಾರ್, ಕೆಲವೆಡೆ ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗುತ್ತಿದೆ. ಕೊರೊನಾ ಕಾಯಿಲೆಗಿಂತ ಮನುಷ್ಯರಲ್ಲಿ ಕ್ರೌರ್ಯ ಹೆಚ್ಚಾಗಿದೆ. ಪ್ರೀತಿ, ವಿಶ್ವಾಸ, ಮಾನವೀಯತೆ ಕಳೆದುಕೊಳ್ಳುತ್ತಿದ್ದೇವೆ ಎಂದು ಇತ್ತೀಚಿನ ಕೆಲ ಘಟನೆಗಳನ್ನು ಉಲ್ಲೇಖಿಸಿದರು.