AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮ ಫಲಕ ಬಿದ್ದ ಪರಿಣಾಮ ನಾಲ್ವರು ಮಕ್ಕಳಿಗೆ ಗಂಭೀರ ಗಾಯ

ಬೀದರ್: ಆಟವಾಡುತ್ತಿದ್ದ ಮಕ್ಕಳ ಮೇಲೆ ಸಹಕಾರಿ ಸಂಘವೊಂದರ ನಾಮಫಲಕ ಬಿದ್ದ ಪರಿಣಾಮ ನಾಲ್ವರೂ ಮಕ್ಕಳು ಗಾಯಗೊಂಡ ದುರ್ಘಟನೆ ಬೀದರ್ ಜಿಲ್ಲೆಯಲ್ಲಿ ಸಂಭವಿಸಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಂಠಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ನಾಲ್ವರು ಚಿಕ್ಕ ಮಕ್ಕಳು ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಆಟವಾಡುತ್ತಾ ಕುಳಿತಿದ್ದರು. ಆಗ ಈ ಮಕ್ಕಳ ಮೇಲೆ ಸಹಕಾರಿ ಸಂಘದ ನಾಮಫಲಕ ಕುಸಿದು ಬಿದ್ದಿದೆ. ಪರಿಣಾಮ ನಾಲ್ವರೂ ಮಕ್ಕಳು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಗೊಂಡ ಈ ಮಕ್ಕಳನ್ನು ಚಿಕಿತ್ಸೆಗಾಗಿ ಬಸವಕಲ್ಯಾಣ ತಾಲೂಕು […]

ನಾಮ ಫಲಕ ಬಿದ್ದ ಪರಿಣಾಮ ನಾಲ್ವರು ಮಕ್ಕಳಿಗೆ ಗಂಭೀರ ಗಾಯ
Guru
Guru|

Updated on: Aug 09, 2020 | 3:35 PM

Share

ಬೀದರ್: ಆಟವಾಡುತ್ತಿದ್ದ ಮಕ್ಕಳ ಮೇಲೆ ಸಹಕಾರಿ ಸಂಘವೊಂದರ ನಾಮಫಲಕ ಬಿದ್ದ ಪರಿಣಾಮ ನಾಲ್ವರೂ ಮಕ್ಕಳು ಗಾಯಗೊಂಡ ದುರ್ಘಟನೆ ಬೀದರ್ ಜಿಲ್ಲೆಯಲ್ಲಿ ಸಂಭವಿಸಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಂಠಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ನಾಲ್ವರು ಚಿಕ್ಕ ಮಕ್ಕಳು ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಆಟವಾಡುತ್ತಾ ಕುಳಿತಿದ್ದರು. ಆಗ ಈ ಮಕ್ಕಳ ಮೇಲೆ ಸಹಕಾರಿ ಸಂಘದ ನಾಮಫಲಕ ಕುಸಿದು ಬಿದ್ದಿದೆ. ಪರಿಣಾಮ ನಾಲ್ವರೂ ಮಕ್ಕಳು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಗೊಂಡ ಈ ಮಕ್ಕಳನ್ನು ಚಿಕಿತ್ಸೆಗಾಗಿ ಬಸವಕಲ್ಯಾಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರನ್ನು 12 ವರ್ಷದ ಪ್ರಜ್ವಲ್, 10ವರ್ಷದ ಆಕಾಶ್, 12 ವರ್ಷದ ದಿನೇಶ್ ಹಾಗೂ 10 ವರ್ಷದ ಶರಣ್ ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ವರು ಮಕ್ಕಳಲ್ಲಿ ಒರ್ವನ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆಯಂದು ತಿಳಿದು ಬಂದಿದೆ. ಘಟನೆ ಸಂಬಂಧ ಮುಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ