AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಹೋಗಿದ್ದ ಮೂವರು ಯುವಕರು, ಓರ್ವ ಯುವತಿ ಜಲಸಮಾಧಿ..

ಹದಿಹರೆಯದ ನಾಲ್ವರು ಮದುವೆಗೆ ಅಂತಾ ಹಳ್ಳಿಗೆ ಹೋಗಿದ್ದರು. ನಿನ್ನೆ ಸಂಜೆಯಾಗುತ್ತಲೇ ಹಳ್ಳಿಯ ಸೊಗಡು ಸವಿಯುತ್ತಾ, ಆಟವಾಡಲು ನೀರಿಗೆ ತೆರಳಿದ್ದರು. ಆದ್ರೆ ಮದುವೆಯ ಖುಷಿಯೆಲ್ಲಾ ಆ ನಾಲ್ವರೊಂದಿಗೆ ಜಲಸಮಾಧಿಯಾಗಿದೆ.

ಮದುವೆಗೆ ಹೋಗಿದ್ದ ಮೂವರು ಯುವಕರು, ಓರ್ವ ಯುವತಿ ಜಲಸಮಾಧಿ..
ಮದುವೆಗೆ ಹೋಗಿದ್ದ ನಾಲ್ವರು ಜಲಸಮಾಧಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 25, 2020 | 3:54 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಪಾಲಾಡ್ಕ ಗ್ರಾಮದ ಶಾಂಭವಿ ನದಿಯ ಪಟ್ಲಗುಂಡಿ ಎಂಬ ಪ್ರದೇಶದಲ್ಲಿ ದೊಡ್ಡ ಅನಾಹುತ ನಡೆದು ಹೋಗಿದೆ. ಗ್ರಾಮದ ಕಡಂದಲೆ ಶ್ರೀಧರ ಆಚಾರ್ಯ ಎಂಬುವವರ ಮನೆಯಲ್ಲಿ ಮದುವೆಯ ಸಂಭ್ರಮವಿತ್ತು.

ಮದುವೆಗೆ ಎಲ್ಲಾ ಸಂಬಂಧಿಕರು ಮನೆಗೆ ಆಗಮಿಸಿದ್ರು. ಹಾಗೇ ಮೂಡುಶೆಡ್ಡೆ ನಿವಾಸಿ 18 ವರ್ಷದ ನಿಖಿಲ್, 20 ವರ್ಷದ ಹರ್ಷಿತಾ, ವೇಣೂರು ನಿವಾಸಿ 19 ವರ್ಷದ ಸುಭಾಷ್ ಮತ್ತು ಬಜ್ಪೆ ನಿವಾಸಿ 30 ವರ್ಷದ ರವಿ ಕೂಡ ಮದುವೆಗೆ ಆಗಮಿಸಿದ್ದರು. ಶಾಂಭವಿ ನದಿಯ ಪಟ್ಲಗುಂಡಿ ಬಳಿ ನಿನ್ನೆ ಸಂಜೆ ಆಟವಾಡಲು ಹೋಗಿದ್ದರು.

ಈಜು ಬರದಿದ್ದರು ಕೂಡ ಮೊನ್ನೆ ಆಟವಾಡಿ ಮದುವೆ ಮನೆಗೆ ವಾಪಾಸ್ ಆಗಿದ್ರು. ನಿನ್ನೆ ಕೂಡ ಈ ನಾಲ್ವರು ನೀರಿನಲ್ಲಿ ಆಟವಾಡುತ್ತಾ ಈಜಾಡಲು ಅಲ್ಲಿಗೆ ಹೋಗಿದ್ದಾರೆ. ಆದ್ರೆ ನಾಲ್ವರದಲ್ಲಿ ಹರ್ಷಿತಾ ಆಟವಾಡುತ್ತಾ ನೀರಿನಲ್ಲಿ ಮುಳುಗಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಒಬ್ಬಬ್ಬರೂ ಕೂಡ ಮುಳುಗುತ್ತಾ , ನಾಲ್ಕು ಜನ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ವಿಷ್ಯ ತಿಳಿದ ತಕ್ಷಣ ನದಿ ತೀರದಲ್ಲಿ ಇಡೀ ಗ್ರಾಮದ ಜನ ಸೇರಿದ್ರು. ಅಗ್ನಿಶಾಮಕದಳ ಸಿಬ್ಬಂದಿ, ಈಜಾಗಾರರು ಮತ್ತು ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ರು. ನಂತ್ರ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ನಾಲ್ವರ ಶವಗಳನ್ನು ಹೊರತೆಗೆದರು. ಈ ದುರ್ಘಟನೆಯಿಂದಾಗಿ ಇಡೀ ಮದುವೆ ಮನೆಯಲ್ಲಿ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.

ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೂಡಬಿದ್ರೆ ಆಸ್ಪತ್ರೆಗೆ ರವಾನಿಸಲಾಗಿದೆ. ಮದುವೆಯ ಸಂಭ್ರಮಕ್ಕೆ ಬಂದವರು ಮಸಣ ಸೇರಿದ್ದು ನಿಜಕ್ಕೂ ದುರಂತ.

Published On - 7:59 am, Wed, 25 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ