AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಹೋಗಿದ್ದ ಮೂವರು ಯುವಕರು, ಓರ್ವ ಯುವತಿ ಜಲಸಮಾಧಿ..

ಹದಿಹರೆಯದ ನಾಲ್ವರು ಮದುವೆಗೆ ಅಂತಾ ಹಳ್ಳಿಗೆ ಹೋಗಿದ್ದರು. ನಿನ್ನೆ ಸಂಜೆಯಾಗುತ್ತಲೇ ಹಳ್ಳಿಯ ಸೊಗಡು ಸವಿಯುತ್ತಾ, ಆಟವಾಡಲು ನೀರಿಗೆ ತೆರಳಿದ್ದರು. ಆದ್ರೆ ಮದುವೆಯ ಖುಷಿಯೆಲ್ಲಾ ಆ ನಾಲ್ವರೊಂದಿಗೆ ಜಲಸಮಾಧಿಯಾಗಿದೆ.

ಮದುವೆಗೆ ಹೋಗಿದ್ದ ಮೂವರು ಯುವಕರು, ಓರ್ವ ಯುವತಿ ಜಲಸಮಾಧಿ..
ಮದುವೆಗೆ ಹೋಗಿದ್ದ ನಾಲ್ವರು ಜಲಸಮಾಧಿ
ಆಯೇಷಾ ಬಾನು
| Edited By: |

Updated on:Nov 25, 2020 | 3:54 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಪಾಲಾಡ್ಕ ಗ್ರಾಮದ ಶಾಂಭವಿ ನದಿಯ ಪಟ್ಲಗುಂಡಿ ಎಂಬ ಪ್ರದೇಶದಲ್ಲಿ ದೊಡ್ಡ ಅನಾಹುತ ನಡೆದು ಹೋಗಿದೆ. ಗ್ರಾಮದ ಕಡಂದಲೆ ಶ್ರೀಧರ ಆಚಾರ್ಯ ಎಂಬುವವರ ಮನೆಯಲ್ಲಿ ಮದುವೆಯ ಸಂಭ್ರಮವಿತ್ತು.

ಮದುವೆಗೆ ಎಲ್ಲಾ ಸಂಬಂಧಿಕರು ಮನೆಗೆ ಆಗಮಿಸಿದ್ರು. ಹಾಗೇ ಮೂಡುಶೆಡ್ಡೆ ನಿವಾಸಿ 18 ವರ್ಷದ ನಿಖಿಲ್, 20 ವರ್ಷದ ಹರ್ಷಿತಾ, ವೇಣೂರು ನಿವಾಸಿ 19 ವರ್ಷದ ಸುಭಾಷ್ ಮತ್ತು ಬಜ್ಪೆ ನಿವಾಸಿ 30 ವರ್ಷದ ರವಿ ಕೂಡ ಮದುವೆಗೆ ಆಗಮಿಸಿದ್ದರು. ಶಾಂಭವಿ ನದಿಯ ಪಟ್ಲಗುಂಡಿ ಬಳಿ ನಿನ್ನೆ ಸಂಜೆ ಆಟವಾಡಲು ಹೋಗಿದ್ದರು.

ಈಜು ಬರದಿದ್ದರು ಕೂಡ ಮೊನ್ನೆ ಆಟವಾಡಿ ಮದುವೆ ಮನೆಗೆ ವಾಪಾಸ್ ಆಗಿದ್ರು. ನಿನ್ನೆ ಕೂಡ ಈ ನಾಲ್ವರು ನೀರಿನಲ್ಲಿ ಆಟವಾಡುತ್ತಾ ಈಜಾಡಲು ಅಲ್ಲಿಗೆ ಹೋಗಿದ್ದಾರೆ. ಆದ್ರೆ ನಾಲ್ವರದಲ್ಲಿ ಹರ್ಷಿತಾ ಆಟವಾಡುತ್ತಾ ನೀರಿನಲ್ಲಿ ಮುಳುಗಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಒಬ್ಬಬ್ಬರೂ ಕೂಡ ಮುಳುಗುತ್ತಾ , ನಾಲ್ಕು ಜನ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ವಿಷ್ಯ ತಿಳಿದ ತಕ್ಷಣ ನದಿ ತೀರದಲ್ಲಿ ಇಡೀ ಗ್ರಾಮದ ಜನ ಸೇರಿದ್ರು. ಅಗ್ನಿಶಾಮಕದಳ ಸಿಬ್ಬಂದಿ, ಈಜಾಗಾರರು ಮತ್ತು ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ರು. ನಂತ್ರ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ನಾಲ್ವರ ಶವಗಳನ್ನು ಹೊರತೆಗೆದರು. ಈ ದುರ್ಘಟನೆಯಿಂದಾಗಿ ಇಡೀ ಮದುವೆ ಮನೆಯಲ್ಲಿ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.

ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೂಡಬಿದ್ರೆ ಆಸ್ಪತ್ರೆಗೆ ರವಾನಿಸಲಾಗಿದೆ. ಮದುವೆಯ ಸಂಭ್ರಮಕ್ಕೆ ಬಂದವರು ಮಸಣ ಸೇರಿದ್ದು ನಿಜಕ್ಕೂ ದುರಂತ.

Published On - 7:59 am, Wed, 25 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್