AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್

ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್
ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ
ಆಯೇಷಾ ಬಾನು
|

Updated on:Feb 02, 2021 | 1:39 PM

Share

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಸ್ನೇಹಿತ ವಿರುದ್ಧ ಆನಂದ್ ಗುರೂಜಿ ಆಪ್ತ ಗಿರಿನಗರ ಠಾಣೆಗೆ ದೂರು ನೀಡಿದ್ದು ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಆನಂದ್ ಗುರೂಜಿಗೆ ಸ್ನೇಹಿತರೇ ಬ್ಲಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರಂತೆ. ಜೊತೆಗೆ ಆನಂದ್ ಗುರೂಜಿ ಹಾಗೂ ಅವರ ಸ್ನೇಹಿತ ಸುಧೀಂದ್ರ ಎಂಬುವವರಿಗೆ ಕೊಲೆ ಬೆದರಿಕೆ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ಜನವರಿ 28ರಂದು ಗುರೂಜಿ ಆಪ್ತ ನಾಗರಾಜ್ ಬಿ.ಆರ್ ಎಂಬುವವರು ಕೃಷ್ಣಮೂರ್ತಿ, ವೆಂಕಟೇಶ್, ವೇಲು ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ 50 ಲಕ್ಷ ಹಣ ಕೊಟ್ಟರೆ ಸುಮ್ಮನಾಗುತ್ತೇವೆ, ಇಲ್ಲದೆ ಹೋದ್ರೆ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ವೈರಲ್ ಮಾಡುವುದಾಗಿ ಆನಂದ್ ಗುರೂಜಿಗೆ ಸ್ನೇಹಿತರು ಎಚ್ಚರಿಕೆ ನೀಡಿದ್ದರು. ಜೊತೆಗೆ ಮಾಧ್ಯಮಗಳಲ್ಲಿ ಈ ಬಗ್ಗೆ ಪ್ರಕಟಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಉಲ್ಲೇಖಿಸಲಾಗಿದೆ.

ತಮ್ಮ ವಿರುದ್ಧ ದೂರು ನೀಡಿದ್ದರಿಂದ ಸಿಟ್ಟಿಗೆದ್ದ ಆರೋಪಿಗಳು ವಾಟ್ಸ್ ಗ್ರೂಪ್​ನಲ್ಲಿ ಗುರೂಜಿ ಹಾಗೂ ಸುಧೀಂದ್ರ ಕುರಿತು ಮಾನಹಾನಿ ಸಂದೇಶ ರವಾನಿಸಿ ಈಗಲಾದ್ರೂ ಕನಿಷ್ಠ 26ಲಕ್ಷ ಹಣ ಕೊಡಿ, ಇಲ್ಲವಾದ್ರೆ ಬೇರೆ ವೈಯಕ್ತಿಕ ವಿಷಯಗಳನ್ನ ಹಂತ ಹಂತವಾಗಿ ವೈರಲ್ ಮಾಡುವುದಾಗಿ ಹೇಳಿದ್ದರೂ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈಗ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ದಿನಭವಿಷ್ಯ : 01-02-2021 ಖ್ಯಾತ ಜ್ಯೋತಿಷಿ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಮಾಹಿತಿ

Published On - 1:34 pm, Tue, 2 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ