AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್

ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್
ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ
Follow us
ಆಯೇಷಾ ಬಾನು
|

Updated on:Feb 02, 2021 | 1:39 PM

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಸ್ನೇಹಿತ ವಿರುದ್ಧ ಆನಂದ್ ಗುರೂಜಿ ಆಪ್ತ ಗಿರಿನಗರ ಠಾಣೆಗೆ ದೂರು ನೀಡಿದ್ದು ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಆನಂದ್ ಗುರೂಜಿಗೆ ಸ್ನೇಹಿತರೇ ಬ್ಲಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರಂತೆ. ಜೊತೆಗೆ ಆನಂದ್ ಗುರೂಜಿ ಹಾಗೂ ಅವರ ಸ್ನೇಹಿತ ಸುಧೀಂದ್ರ ಎಂಬುವವರಿಗೆ ಕೊಲೆ ಬೆದರಿಕೆ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ಜನವರಿ 28ರಂದು ಗುರೂಜಿ ಆಪ್ತ ನಾಗರಾಜ್ ಬಿ.ಆರ್ ಎಂಬುವವರು ಕೃಷ್ಣಮೂರ್ತಿ, ವೆಂಕಟೇಶ್, ವೇಲು ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ 50 ಲಕ್ಷ ಹಣ ಕೊಟ್ಟರೆ ಸುಮ್ಮನಾಗುತ್ತೇವೆ, ಇಲ್ಲದೆ ಹೋದ್ರೆ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ವೈರಲ್ ಮಾಡುವುದಾಗಿ ಆನಂದ್ ಗುರೂಜಿಗೆ ಸ್ನೇಹಿತರು ಎಚ್ಚರಿಕೆ ನೀಡಿದ್ದರು. ಜೊತೆಗೆ ಮಾಧ್ಯಮಗಳಲ್ಲಿ ಈ ಬಗ್ಗೆ ಪ್ರಕಟಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಉಲ್ಲೇಖಿಸಲಾಗಿದೆ.

ತಮ್ಮ ವಿರುದ್ಧ ದೂರು ನೀಡಿದ್ದರಿಂದ ಸಿಟ್ಟಿಗೆದ್ದ ಆರೋಪಿಗಳು ವಾಟ್ಸ್ ಗ್ರೂಪ್​ನಲ್ಲಿ ಗುರೂಜಿ ಹಾಗೂ ಸುಧೀಂದ್ರ ಕುರಿತು ಮಾನಹಾನಿ ಸಂದೇಶ ರವಾನಿಸಿ ಈಗಲಾದ್ರೂ ಕನಿಷ್ಠ 26ಲಕ್ಷ ಹಣ ಕೊಡಿ, ಇಲ್ಲವಾದ್ರೆ ಬೇರೆ ವೈಯಕ್ತಿಕ ವಿಷಯಗಳನ್ನ ಹಂತ ಹಂತವಾಗಿ ವೈರಲ್ ಮಾಡುವುದಾಗಿ ಹೇಳಿದ್ದರೂ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈಗ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ದಿನಭವಿಷ್ಯ : 01-02-2021 ಖ್ಯಾತ ಜ್ಯೋತಿಷಿ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಮಾಹಿತಿ

Published On - 1:34 pm, Tue, 2 February 21

ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ