AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ಆರೋಪ, ಗ್ರಾಹಕರಿಂದ ಮುತ್ತಿಗೆ

ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಹಸಿಗಾಳ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗೆ ಗ್ರಾಹಕರು ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಕ್ಯಾಂಟರ್​ಗೆ ಡೀಸೆಲ್ ತುಂಬಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಂಟರ್ ವಾಹನದ ಡೀಸೆಲ್ ಟ್ಯಾಂಕ್ ಸಾಮರ್ಥ್ಯ 190 ಲೀಟರ್. ಆದರೆ ಕ್ಯಾಂಟರ್‌ನಲ್ಲಿ 25 ಲೀಟರ್ ಇದ್ದಾಗ ಚಾಲಕ ಡೀಸೆಲ್ ಹಾಕಿಸಿದ್ದ. ಈ ವೇಳೆ 25 ಲೀ. ಇದ್ದರೂ 189 […]

ಹೊಸಕೋಟೆ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ಆರೋಪ, ಗ್ರಾಹಕರಿಂದ ಮುತ್ತಿಗೆ
ಆಯೇಷಾ ಬಾನು
| Edited By: |

Updated on: Oct 23, 2020 | 3:44 PM

Share

ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಹಸಿಗಾಳ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗೆ ಗ್ರಾಹಕರು ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಕ್ಯಾಂಟರ್​ಗೆ ಡೀಸೆಲ್ ತುಂಬಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ.

ಕ್ಯಾಂಟರ್ ವಾಹನದ ಡೀಸೆಲ್ ಟ್ಯಾಂಕ್ ಸಾಮರ್ಥ್ಯ 190 ಲೀಟರ್. ಆದರೆ ಕ್ಯಾಂಟರ್‌ನಲ್ಲಿ 25 ಲೀಟರ್ ಇದ್ದಾಗ ಚಾಲಕ ಡೀಸೆಲ್ ಹಾಕಿಸಿದ್ದ. ಈ ವೇಳೆ 25 ಲೀ. ಇದ್ದರೂ 189 ಲೀ. ಡೀಸೆಲ್ ಹಾಕಿದ್ದಾನೆ ಎಂದು ಚಾಲಕ ಆರೋಪಿಸಿದ್ದಾನೆ. ಹಾಗೂ ಕ್ಯಾಂಟರ್​ಗೆ 190 ಲೀಟರ್ ಸಾಮರ್ಥ್ಯ ಇರುತ್ತೆ. ಆದರೆ ಹೇಗೆ 189 ಲೀಟರ್ ಹಾಕಲು ಸಾಧ್ಯವಾಯಿತು ಎಂದು ಪ್ರಶ್ನೆ ಮಾಡಿದ್ದಾನೆ.

ಚಾಲಕ ಹಾಗೂ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಜಮಾವಣೆಗೊಂಡಿದ್ದಾರೆ. ಹಲವರಿಗೆ ಇದೇ ರೀತಿ ಬಂಕ್ ಸಿಬ್ಬಂದಿ ವಂಚನೆ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸೂಲಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ