AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ

G Somashekar Reddy: ಸಾಲಾ ಮಾಡಿಯಾದರೂ ಜನ ಬೈಕ್ ತೆಗೆದುಕೊಳ್ಳುತ್ತಾರೆ. ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ ಟಿವಿ ಬೇಕು. ಟಿವಿಯೇ ಇರಬಾರದು ಎನ್ನುವುದನ್ನು ನಾವು ವಿರೋಧಿಸುತ್ತೇವೆ. ನಿಜವಾದ ಬಡವರನ್ನು ಆರ್ಥಿಕ ಮಟ್ಟದಿಂದ ಗುರುತಿಸಬೇಕೆಂದರು.

BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ
ಸೋಮಶೇಖರ್ ರೆಡ್ಡಿ
sandhya thejappa
|

Updated on:Feb 15, 2021 | 3:12 PM

Share

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು ಬಿಪಿಎಲ್ ಕಾರ್ಡನ್ನು ರದ್ದು ಪಡಿಸಲಾಗುತ್ತದೆ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಬಿಜೆಪಿ ಸೋಮಶೇಖರ ರೆಡ್ಡಿ ಮನೆ ಮನೆ ಸಮೀಕ್ಷೆ ನಡೆಸಿದರೆ ನಕಲಿ ಬಿಪಿಎಲ್ ಕಾರ್ಡ್​ದಾರರನ್ನು ಪತ್ತೆ ಮಾಡಬಹುದು ಎಂದರು. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಯಾಗಿರುವುದು ಗೊತ್ತಿಲ್ಲ. ಇಂತಹ ನಿಯಮಗಳ ವಿರುದ್ಧ ಹೋರಾಟ ಮಾಡುತ್ತೇವೆ. ನಾವು ಬಿಜೆಪಿಯವರಾದರೂ ಸಹ ಹೋರಾಟ ಮಾಡುತ್ತೇವೆ. ಯಾರೇ ಆಗಲಿ ಸ್ವಂತ ನಿರ್ಧಾರ ಜನರ ಮೇಲೆ ಹೇರಬಾರದು. ಸ್ವಂತ ನಿರ್ಧಾರಗಳು ತೆಗೆದುಕೊಂಡರೆ ಈ ರೀತಿಯಾಗುತ್ತದೆ. ಸಿಎಂ ಗಮನಕ್ಕೆ ತರದೆ ನಿರ್ಧಾರ ಕೈಗೊಂಡರೆ ತಪ್ಪಾಗುತ್ತದೆ. ಸಚಿವರ ನಿರ್ಧಾರ ಬಡವರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಸಾಮಾನ್ಯವಾಗಿ ಟಿವಿ, ಫ್ರಿಡ್ಜ್ ಎಲ್ಲರ ಮನೆಯಲ್ಲೂ ಇರುತ್ತದೆ. ಸಾಲ ಮಾಡಿಯಾದರೂ ಜನ ಬೈಕ್ ತೆಗೆದುಕೊಳ್ಳುತ್ತಾರೆ. ಹೀಗಾಗಿ ಇಂತಹ ನಿಯಮಗಳನ್ನು ಮಾಡಿದರೆ ತಪ್ಪಾಗುತ್ತದೆ. ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ ಟಿವಿ ಬೇಕು. ಟಿವಿಯೇ ಇರಬಾರದು ಎನ್ನುವುದನ್ನು ನಾವು ವಿರೋಧಿಸುತ್ತೇವೆ. ನಿಜವಾದ ಬಡವರನ್ನು ಆರ್ಥಿಕ ಮಟ್ಟದಿಂದ ಗುರುತಿಸಬೇಕೆಂದರು.

ಆನಂದ್ ಸಿಂಗ್ ವಿರುದ್ಧ ಸೋಮಶೇಖರ್ ರೆಡ್ಡಿ ಕಿಡಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಬೇಕು. ಯಾವುದೇ ಕಾರಣಕ್ಕೂ ಆನಂದ್ ಸಿಂಗ್ ಬಳ್ಳಾರಿ ಉಸ್ತುವಾರಿ ಆಗುವುದಕ್ಕೆ ನಾವು ಬಿಡಲ್ಲ. ಈಗಾಗಲೇ ಎಲ್ಲ ಶಾಸಕರು ಸಿಎಂ ಗೆ ಪತ್ರ ಬರೆಯುತ್ತಿದ್ದೇವೆ. ಈಗಾಗಲೇ ಬಳ್ಳಾರಿ ವಿಭಜನೆ ವಿರೋಧಿಸಿ ಕೆಲವರು ಕೋರ್ಟ್​ಗೆ ಹೋಗಿದ್ದಾರೆ. ನಾವು ಕೂಡ ಬಳ್ಳಾರಿ ವಿಭಜನೆ ಆದೇಶ ವಾಪಸ್ಸು ಪಡೆಯುವಂತೆ ಶೀಘ್ರವೇ ಸಿಎಂ ಭೇಟಿ ಮಾಡುತ್ತೇವೆ. ಸಿಎಂ ಯಡಿಯೂರಪ್ಪ ಇದಕ್ಕೆ ಸ್ಪಂಧಿಸಿ ಬಳ್ಳಾರಿ ವಿಭಜನೆ ಆದೇಶ ವಾಪಸ್ಸು ಪಡೆಯುವ ವಿಶ್ವಾಸ ಇದೆ. ಆನಂದ್ ಸಿಂಗ್ ಬಳ್ಳಾರಿ ಉಸ್ತುವಾರಿ ಬಿಟ್ಟು, ವಿಜಯನಗರ ಉಸ್ತುವಾರಿಯಾಗಲಿ. ಜಿಲ್ಲೆ ವಿಭಜಿಸಿ ಬಳ್ಳಾರಿಯಲ್ಲಿ ಇರುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Raghavendra Sarvam Fraud Case ಯುವರಾಜನ ಹಾದಿಯಲ್ಲೇ ಮತ್ತೊಬ್ಬ ಸೆಲೆಬ್ರಿಟಿ ವಂಚಕನ ವಿರುದ್ಧ ಶಂಕರಪುರ ಠಾಣೆಯಲ್ಲಿ ಕೇಸ್ ದಾಖಲು

Published On - 1:33 pm, Mon, 15 February 21

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್