Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ

G Somashekar Reddy: ಸಾಲಾ ಮಾಡಿಯಾದರೂ ಜನ ಬೈಕ್ ತೆಗೆದುಕೊಳ್ಳುತ್ತಾರೆ. ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ ಟಿವಿ ಬೇಕು. ಟಿವಿಯೇ ಇರಬಾರದು ಎನ್ನುವುದನ್ನು ನಾವು ವಿರೋಧಿಸುತ್ತೇವೆ. ನಿಜವಾದ ಬಡವರನ್ನು ಆರ್ಥಿಕ ಮಟ್ಟದಿಂದ ಗುರುತಿಸಬೇಕೆಂದರು.

BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ
ಸೋಮಶೇಖರ್ ರೆಡ್ಡಿ
Follow us
sandhya thejappa
|

Updated on:Feb 15, 2021 | 3:12 PM

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು ಬಿಪಿಎಲ್ ಕಾರ್ಡನ್ನು ರದ್ದು ಪಡಿಸಲಾಗುತ್ತದೆ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಬಿಜೆಪಿ ಸೋಮಶೇಖರ ರೆಡ್ಡಿ ಮನೆ ಮನೆ ಸಮೀಕ್ಷೆ ನಡೆಸಿದರೆ ನಕಲಿ ಬಿಪಿಎಲ್ ಕಾರ್ಡ್​ದಾರರನ್ನು ಪತ್ತೆ ಮಾಡಬಹುದು ಎಂದರು. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಯಾಗಿರುವುದು ಗೊತ್ತಿಲ್ಲ. ಇಂತಹ ನಿಯಮಗಳ ವಿರುದ್ಧ ಹೋರಾಟ ಮಾಡುತ್ತೇವೆ. ನಾವು ಬಿಜೆಪಿಯವರಾದರೂ ಸಹ ಹೋರಾಟ ಮಾಡುತ್ತೇವೆ. ಯಾರೇ ಆಗಲಿ ಸ್ವಂತ ನಿರ್ಧಾರ ಜನರ ಮೇಲೆ ಹೇರಬಾರದು. ಸ್ವಂತ ನಿರ್ಧಾರಗಳು ತೆಗೆದುಕೊಂಡರೆ ಈ ರೀತಿಯಾಗುತ್ತದೆ. ಸಿಎಂ ಗಮನಕ್ಕೆ ತರದೆ ನಿರ್ಧಾರ ಕೈಗೊಂಡರೆ ತಪ್ಪಾಗುತ್ತದೆ. ಸಚಿವರ ನಿರ್ಧಾರ ಬಡವರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಸಾಮಾನ್ಯವಾಗಿ ಟಿವಿ, ಫ್ರಿಡ್ಜ್ ಎಲ್ಲರ ಮನೆಯಲ್ಲೂ ಇರುತ್ತದೆ. ಸಾಲ ಮಾಡಿಯಾದರೂ ಜನ ಬೈಕ್ ತೆಗೆದುಕೊಳ್ಳುತ್ತಾರೆ. ಹೀಗಾಗಿ ಇಂತಹ ನಿಯಮಗಳನ್ನು ಮಾಡಿದರೆ ತಪ್ಪಾಗುತ್ತದೆ. ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ ಟಿವಿ ಬೇಕು. ಟಿವಿಯೇ ಇರಬಾರದು ಎನ್ನುವುದನ್ನು ನಾವು ವಿರೋಧಿಸುತ್ತೇವೆ. ನಿಜವಾದ ಬಡವರನ್ನು ಆರ್ಥಿಕ ಮಟ್ಟದಿಂದ ಗುರುತಿಸಬೇಕೆಂದರು.

ಆನಂದ್ ಸಿಂಗ್ ವಿರುದ್ಧ ಸೋಮಶೇಖರ್ ರೆಡ್ಡಿ ಕಿಡಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಬೇಕು. ಯಾವುದೇ ಕಾರಣಕ್ಕೂ ಆನಂದ್ ಸಿಂಗ್ ಬಳ್ಳಾರಿ ಉಸ್ತುವಾರಿ ಆಗುವುದಕ್ಕೆ ನಾವು ಬಿಡಲ್ಲ. ಈಗಾಗಲೇ ಎಲ್ಲ ಶಾಸಕರು ಸಿಎಂ ಗೆ ಪತ್ರ ಬರೆಯುತ್ತಿದ್ದೇವೆ. ಈಗಾಗಲೇ ಬಳ್ಳಾರಿ ವಿಭಜನೆ ವಿರೋಧಿಸಿ ಕೆಲವರು ಕೋರ್ಟ್​ಗೆ ಹೋಗಿದ್ದಾರೆ. ನಾವು ಕೂಡ ಬಳ್ಳಾರಿ ವಿಭಜನೆ ಆದೇಶ ವಾಪಸ್ಸು ಪಡೆಯುವಂತೆ ಶೀಘ್ರವೇ ಸಿಎಂ ಭೇಟಿ ಮಾಡುತ್ತೇವೆ. ಸಿಎಂ ಯಡಿಯೂರಪ್ಪ ಇದಕ್ಕೆ ಸ್ಪಂಧಿಸಿ ಬಳ್ಳಾರಿ ವಿಭಜನೆ ಆದೇಶ ವಾಪಸ್ಸು ಪಡೆಯುವ ವಿಶ್ವಾಸ ಇದೆ. ಆನಂದ್ ಸಿಂಗ್ ಬಳ್ಳಾರಿ ಉಸ್ತುವಾರಿ ಬಿಟ್ಟು, ವಿಜಯನಗರ ಉಸ್ತುವಾರಿಯಾಗಲಿ. ಜಿಲ್ಲೆ ವಿಭಜಿಸಿ ಬಳ್ಳಾರಿಯಲ್ಲಿ ಇರುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Raghavendra Sarvam Fraud Case ಯುವರಾಜನ ಹಾದಿಯಲ್ಲೇ ಮತ್ತೊಬ್ಬ ಸೆಲೆಬ್ರಿಟಿ ವಂಚಕನ ವಿರುದ್ಧ ಶಂಕರಪುರ ಠಾಣೆಯಲ್ಲಿ ಕೇಸ್ ದಾಖಲು

Published On - 1:33 pm, Mon, 15 February 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್