UT Khader; ಕೋಮು ದಳ್ಳುರಿಗೆ ಹೆಸರಾದ ಕರಾವಳಿ ಪ್ರದೇಶದಲ್ಲಿ ಯುಟಿ ಖಾದರ್ ಶಾಸಕನಾಗಿ ನಿರ್ವಹಿಸಿದ ಕೆಲಸ ಶ್ಲಾಘನೀಯ: ಗಾಲಿ ಜನಾರ್ಧನ ರೆಡ್ಡಿ

Updated on: May 24, 2023 | 4:06 PM

ಬಹಳ ವರ್ಷಗಳ ನಂತರ ಜನಾರ್ಧನ ರೆಡ್ಡಿ ಒಬ್ಬ ಜನ ಪ್ರತಿನಿಧಿಯಾಗಿ ವಿಧಾನ ಸಭೆಯನ್ನು ಪ್ರವೇಶಿಸಿದ್ದಾರೆ.

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದಿಂದ (Kalyana Karnataka Pragati Paksha) ಏಕೈಕ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಇಂದು ಸದನದಲ್ಲಿ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಯುಟಿ ಖಾದರ್ (UT Khader) ಅವರನ್ನು ತಮ್ಮ ಪಕ್ಷದ ವತಿಯಿಂದ ಅಭಿನಂದಿಸಿದರು. ಭಾಷಣದಲ್ಲಿ ಅವರು ಖಾದರ್ ಅವರ ಸರಳ ಮತ್ತು ಸಜ್ಜನಿಕೆ ಸ್ವಭಾವವನ್ನು ಕೊಂಡಾಡಿದರು. ಕರಾವಳಿ ಭಾಗ ಮತೀಯ ಗಲಭೆಗಳಿಗೆ ಕುಖ್ಯಾತಿ ಪಡೆದಾಗ್ಯೂ ಒಬ್ಬ ಶಾಸಕರಾಗಿ ಖಾದರ್ ಅವರು ನಡೆದುಕೊಂಡ ರೀತಿ ಮತ್ತು ಅತ್ಯಂತ ಸಂವೇದನಾಶೀಲತೆಯಿಂದ ನೀಡುತ್ತಿದ್ದ ಹೇಳಿಕೆಗಳನ್ನು ರೆಡ್ಡಿ ಶ್ಲಾಘಿಸಿದರು. ಬಹಳ ವರ್ಷಗಳ ನಂತರ ಜನಾರ್ಧನ ರೆಡ್ಡಿ ಒಬ್ಬ ಜನ ಪ್ರತಿನಿಧಿಯಾಗಿ ವಿಧಾನ ಸಭೆಯನ್ನು ಪ್ರವೇಶಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More