ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ತಡವಾಗಿ ಬಂದ DC ರೋಹಿಣಿ

ಮೈಸೂರು: ಇಂದು ಗಾಂಧಿ ಜಯಂತಿ ಕಾರ್ಯಕ್ರಮ. ಹಾಗಾಗಿ ನಗರದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾಧಿಕಾರಿ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸುವ ಕಾರ್ಯಕ್ರಮವಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿಯ ಮೊದಲ ಕಾರ್ಯಕ್ರಮಕ್ಕೆ ಡಿಸಿ ರೋಹಿಣಿ ಸಿಂಧೂರಿ ಅವರು ತಡವಾಗಿ ಬಂದರು. ಡಿಸಿ ರೋಹಿಣಿ ಸಿಂಧೂರಿ ಅವರು 10 ನಿಮಿಷ ತಡವಾಗಿ ಬಂದ ಬಳಿಕವಷ್ಟೇ ಸಚಿವರು ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದ ಉಸ್ತುವಾರಿ ಸಚಿವ ಚಿವ ಎಸ್.ಟಿ. […]

ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ತಡವಾಗಿ ಬಂದ DC ರೋಹಿಣಿ
Updated By: ಆಯೇಷಾ ಬಾನು

Updated on: Oct 02, 2020 | 9:18 AM

ಮೈಸೂರು: ಇಂದು ಗಾಂಧಿ ಜಯಂತಿ ಕಾರ್ಯಕ್ರಮ. ಹಾಗಾಗಿ ನಗರದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾಧಿಕಾರಿ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸುವ ಕಾರ್ಯಕ್ರಮವಿತ್ತು.

ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿಯ ಮೊದಲ ಕಾರ್ಯಕ್ರಮಕ್ಕೆ ಡಿಸಿ ರೋಹಿಣಿ ಸಿಂಧೂರಿ ಅವರು ತಡವಾಗಿ ಬಂದರು. ಡಿಸಿ ರೋಹಿಣಿ ಸಿಂಧೂರಿ ಅವರು 10 ನಿಮಿಷ ತಡವಾಗಿ ಬಂದ ಬಳಿಕವಷ್ಟೇ ಸಚಿವರು ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದ ಉಸ್ತುವಾರಿ ಸಚಿವ ಚಿವ ಎಸ್.ಟಿ. ಸೋಮಶೇಖರ್ ಹಾಗೂ ಶಾಸಕರು, ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿಗಾಗಿ 10 ನಿಮಿಷ ಕಾದು ನಿಂತಿದ್ದರು.