AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧೀ ತತ್ವವೇ ಕಾಂಗ್ರೆಸ್ ತತ್ವ, ಅದನ್ನ ನಾವೆಲ್ಲಾ ಅಳವಡಿಸಿಕೊಂಡಿದ್ದೇವೆ -ಡಿ.ಕೆ. ಶಿವಕುಮಾರ್

ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೊದಲ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇಂದು ಗಾಂಧೀ ಜಯಂತಿ ಕಾರಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಂಬರುವ ಬೆಳಗಾವಿ ಉಪ ಚುನಾವಣೆ ತರಾರಿಗೆ ಸಿದ್ಧರಾಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡ ಮೇಲೆ ಬೆಂಗಳೂರು ಹೊರತುಪಡಿಸಿ ಇದೇ ಮೊದಲ ಸಭೆಯಾಗಿದೆ. ಈ ವೇಳೆ ಮಾತನಾಡಿ ಅವರು ಗಾಂಧೀಜಿಯವರ ತತ್ವವೇ ಕಾಂಗ್ರೆಸ್​ನ ತತ್ವ. ಇದನ್ನ ನಾವೆಲ್ಲರೂ ಅಳವಡಿಸಿಕೊಂಡಿದ್ದೇವೆ. ಸಂವಿಧಾನ ಪೀಠಿಕೆ ಓದಿ ನಾನು ಅಧಿಕಾರ ತೆಗೆದುಕೊಂಡಿದ್ದೇನೆ. ಪದಗ್ರಹಣ ಕಾರ್ಯಕ್ರಮ ಒಂದು […]

ಗಾಂಧೀ ತತ್ವವೇ ಕಾಂಗ್ರೆಸ್ ತತ್ವ, ಅದನ್ನ ನಾವೆಲ್ಲಾ ಅಳವಡಿಸಿಕೊಂಡಿದ್ದೇವೆ -ಡಿ.ಕೆ. ಶಿವಕುಮಾರ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 02, 2020 | 3:23 PM

ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೊದಲ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇಂದು ಗಾಂಧೀ ಜಯಂತಿ ಕಾರಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಂಬರುವ ಬೆಳಗಾವಿ ಉಪ ಚುನಾವಣೆ ತರಾರಿಗೆ ಸಿದ್ಧರಾಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡ ಮೇಲೆ ಬೆಂಗಳೂರು ಹೊರತುಪಡಿಸಿ ಇದೇ ಮೊದಲ ಸಭೆಯಾಗಿದೆ.

ಈ ವೇಳೆ ಮಾತನಾಡಿ ಅವರು ಗಾಂಧೀಜಿಯವರ ತತ್ವವೇ ಕಾಂಗ್ರೆಸ್​ನ ತತ್ವ. ಇದನ್ನ ನಾವೆಲ್ಲರೂ ಅಳವಡಿಸಿಕೊಂಡಿದ್ದೇವೆ. ಸಂವಿಧಾನ ಪೀಠಿಕೆ ಓದಿ ನಾನು ಅಧಿಕಾರ ತೆಗೆದುಕೊಂಡಿದ್ದೇನೆ. ಪದಗ್ರಹಣ ಕಾರ್ಯಕ್ರಮ ಒಂದು ಕೋಟಿ ನಲವತ್ತು ಲಕ್ಷ ಜನ ವೀಕ್ಷಣೆ ಮಾಡಿದ್ದಾರೆ. ಇದರ ಬಗ್ಗೆ ದಾಖಲೆಗಳಿದ್ದು ಇದನ್ನ ನನ್ನ ಬಗ್ಗೆ ಹೇಳಿಕೊಳ್ಳುತ್ತಿಲ್ಲ. ಕಾಂಗ್ರೆಸ್ ತತ್ವ ಸಿದ್ದಾಂತ ಜನ ಬೆಂಬಲದ ಬಗ್ಗೆ ಹೇಳುತ್ತಿದ್ದೇನೆ.

ಬಿಜೆಪಿ ಜಾತಿ, ಮತ ಧರ್ಮದ ಹೆಸರಿನಲ್ಲಿ ವ್ಯವಸ್ಥೆಯನ್ನ ಹಾಳು ಮಾಡುತ್ತಿದ್ದಾರೆ. ರೈತ ವಿರೋಧಿ ಕಾನೂನು ಬಗ್ಗೆ ಸೋನಿಯಾ ಗಾಂಧಿ ಸಹಿ ಸಂಗ್ರಹ ಮಾಡುವಂತೆ ಸೂಚಿಸಿದ್ದಾರೆ. ಬೆಳಗಾವಿಯಿಂದ ಸಹಿ ಸಂಗ್ರಹದಲ್ಲಿ ಅತೀ ಹೆಚ್ಚು ಸಹಿ ಮಾಡಿ ಕಳುಹಿಸಿ. ಸೋನಿಯಾ ಗಾಂಧಿ ಎಲ್ಲಾ ಸಹಿ ಸಂಗ್ರಹಗಳನ್ನ ರಾಷ್ಟ್ರಪತಿ ಬಳಿ ತೆಗೆದುಕೊಂಡು ಹೋಗಲಿದ್ದಾರೆ.

ಸತೀಶ್ ಜಾರಕಿಹೊಳಿ‌ಯನ್ನ ಸಾಹುಕಾರ್ ಅಂದ ಡಿಕೆಶಿ: ಕೆಪಿಸಿಸಿ ಬೆಳಗಾವಿ ಕಚೇರಿಯನ್ನ ಸಾಹುಕಾರ್ ಸೇರಿಕೊಂಡು ಕಟ್ಟಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಚರ್ಚೆ ಮಾಡಿ ಘಟಪ್ರಭಾ ಸೇವಾದಳ ತರಬೇತಿ ಕೇಂದ್ರಕ್ಕೆ ಮೂರು ಕೋಟಿ ಕೊಡಿಸುತ್ತೇನೆ. ಸತೀಶ್ ಜಾರಕಿಹೊಳಿ‌ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮೇಲೆ ಏನು ಜವಾಬ್ದಾರಿ ಬೇಕು ಅಂತಾ ಕೇಳಿದ್ದೆ.

ಆಗ ತರಬೇತಿ ನೀಡುವ ಜವಾಬ್ದಾರಿಯನ್ನ ಕೊಡಿ ಅಂತಾ ಕೇಳಿದ್ದರು. ಉತ್ತರ ಕರ್ನಾಟಕ, ಉಡುಪಿಯಲ್ಲಿ ಮತ್ತು ಬೆಂಗಳೂರಿನಲ್ಲಿ ಒಂದು ತರಬೇತಿ ಕೇಂದ್ರ ಇದ್ದು. ಇನ್ನು ಒಂದು ಸೇವಾದಳ ತರಬೇತಿ ಕೇಂದ್ರ ಮಾಡುವ ಚಿಂತನೆ ನಡೆದಿದೆ ಎಂದು ಘಟಪ್ರಭಾ ಪಟ್ಟಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ರು.

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ