AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ಜಿಲ್ಲಾ 3ನೇ ಸತ್ರ ಮತ್ತು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. 2017ರ ಫೆಬ್ರವರಿ 15 ರಂದು ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಮುತ್ಯಾನಟ್ಟಿ ಗ್ರಾಮದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಸುನೀಲ್ ಡುಮ್ಮಗೋಳ, ಮನಗುತ್ತಿಯ […]

ಬೆಳಗಾವಿ ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: ಐವರಿಗೆ ಜೀವಾವಧಿ ಶಿಕ್ಷೆ
Follow us
ಪೃಥ್ವಿಶಂಕರ
|

Updated on:Nov 13, 2020 | 2:05 PM

ಬೆಳಗಾವಿ: ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ಜಿಲ್ಲಾ 3ನೇ ಸತ್ರ ಮತ್ತು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.

2017ರ ಫೆಬ್ರವರಿ 15 ರಂದು ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಮುತ್ಯಾನಟ್ಟಿ ಗ್ರಾಮದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಸುನೀಲ್ ಡುಮ್ಮಗೋಳ, ಮನಗುತ್ತಿಯ ಮಹೇಶ್ ಶಿವನ್ನಗೋಳ ಹಾಗೂ ಬೈಲಹೊಂಗಲದ ಸೋಮಶೇಖರ್ ಶಹಾಪೂರ್ ಎಂಬುವವರು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಮಾಡಿರುವುದು ಸಾಬೀತಾಗಿತ್ತು.

ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ಹೋಗಿದ್ದ ಯುವತಿ.. ಹೀಗಾಗಿ, ಈ 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ. ನ್ಯಾ.ಎಲ್.ವ್ಹಿ.ಪಾಟೀಲ್ ಸರ್ಕಾರಿ ವಿಶೇಷ ಅಭಿಯೋಜಕರಾಗಿ ವಾದ ಮಂಡಿಸಿದ್ದರು. ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ಯುವತಿ ಹೋಗಿದ್ದ ವೇಳೆ ಯುವತಿಯ ಸ್ನೇಹಿತನ ಮೇಲೆ ಹಲ್ಲೆಗೈದಿದ್ದ ಯುವಕರ ಗುಂಪು ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ದುರುಳರ ಮೇಲೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.

Published On - 1:43 pm, Fri, 13 November 20

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?