AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ಜಿಲ್ಲಾ 3ನೇ ಸತ್ರ ಮತ್ತು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. 2017ರ ಫೆಬ್ರವರಿ 15 ರಂದು ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಮುತ್ಯಾನಟ್ಟಿ ಗ್ರಾಮದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಸುನೀಲ್ ಡುಮ್ಮಗೋಳ, ಮನಗುತ್ತಿಯ […]

ಬೆಳಗಾವಿ ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: ಐವರಿಗೆ ಜೀವಾವಧಿ ಶಿಕ್ಷೆ
ಪೃಥ್ವಿಶಂಕರ
|

Updated on:Nov 13, 2020 | 2:05 PM

Share

ಬೆಳಗಾವಿ: ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ಜಿಲ್ಲಾ 3ನೇ ಸತ್ರ ಮತ್ತು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.

2017ರ ಫೆಬ್ರವರಿ 15 ರಂದು ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಮುತ್ಯಾನಟ್ಟಿ ಗ್ರಾಮದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಸುನೀಲ್ ಡುಮ್ಮಗೋಳ, ಮನಗುತ್ತಿಯ ಮಹೇಶ್ ಶಿವನ್ನಗೋಳ ಹಾಗೂ ಬೈಲಹೊಂಗಲದ ಸೋಮಶೇಖರ್ ಶಹಾಪೂರ್ ಎಂಬುವವರು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಮಾಡಿರುವುದು ಸಾಬೀತಾಗಿತ್ತು.

ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ಹೋಗಿದ್ದ ಯುವತಿ.. ಹೀಗಾಗಿ, ಈ 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ. ನ್ಯಾ.ಎಲ್.ವ್ಹಿ.ಪಾಟೀಲ್ ಸರ್ಕಾರಿ ವಿಶೇಷ ಅಭಿಯೋಜಕರಾಗಿ ವಾದ ಮಂಡಿಸಿದ್ದರು. ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ಯುವತಿ ಹೋಗಿದ್ದ ವೇಳೆ ಯುವತಿಯ ಸ್ನೇಹಿತನ ಮೇಲೆ ಹಲ್ಲೆಗೈದಿದ್ದ ಯುವಕರ ಗುಂಪು ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ದುರುಳರ ಮೇಲೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.

Published On - 1:43 pm, Fri, 13 November 20

Follow Us
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್
ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್
ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಶ್ರೀಶ್ರೀ ರವಿಶಂಕರ್ ಗುರೂಜಿ ಮಾತು
ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಶ್ರೀಶ್ರೀ ರವಿಶಂಕರ್ ಗುರೂಜಿ ಮಾತು
ಇಂಧನ ಹಾಗೂ ಮೂಲಸೌಕರ್ಯ ವಲಯದಲ್ಲಿ ದಾಖಲೆ ಪ್ರಗತಿ
ಇಂಧನ ಹಾಗೂ ಮೂಲಸೌಕರ್ಯ ವಲಯದಲ್ಲಿ ದಾಖಲೆ ಪ್ರಗತಿ
ವೈಚಾರಿಕ ನಕ್ಸಲರನ್ನು ಗುರುತಿಸಿ, ಬಹಿಷ್ಕರಿಸಬೇಕು; ಪ್ರಧಾನಿ ಮೋದಿ ವಾಗ್ದಾಳಿ
ವೈಚಾರಿಕ ನಕ್ಸಲರನ್ನು ಗುರುತಿಸಿ, ಬಹಿಷ್ಕರಿಸಬೇಕು; ಪ್ರಧಾನಿ ಮೋದಿ ವಾಗ್ದಾಳಿ