AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಟ್ಟಿಮೇಳ: ತಾಜ್ ಮಹಲ್ ಮುಂದೆ ಅಮೂಲ್ಯಾಗೆ ಪ್ರೇಮ ನಿವೇದನೆ ಮಾಡಲಿದ್ದಾರಾ ವೇದಾಂತ್?

Gattimela in Taj Mahal: ಅಮೂಲ್ಯ, ವೇದಾಂತ್ ಈ ಮೊದಲು ಶತ್ರುಗಳಾಗಿದ್ದರು. ನಂತರ ಅವರು ಪ್ರೇಮಿಗಳಾದರು. ಈಗ ತಾಜ್ ಮಹಲ್ ಬಳಿಗೆ ಬರುವವರೆಗೂ ಧಾರಾವಾಹಿ ಕುತೂಹಲಕಾರಿ ತಿರುವುಗಳನ್ನು ಕಾಯ್ದುಕೊಂಡಿದೆ.

ಗಟ್ಟಿಮೇಳ: ತಾಜ್ ಮಹಲ್ ಮುಂದೆ ಅಮೂಲ್ಯಾಗೆ ಪ್ರೇಮ ನಿವೇದನೆ ಮಾಡಲಿದ್ದಾರಾ ವೇದಾಂತ್?
ತಾಜ್ ಮಹಲ್ ಮುಂದೆ ಗಟ್ಟಿಮೇಳದ ನಾಯಕ ವೇದಾಂತ್, ನಾಯಕಿ ಅಮೂಲ್ಯಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 15, 2021 | 7:56 PM

Share

ಬೆಂಗಳೂರು: ಜೀ ಕನ್ನಡದ ಜನಪ್ರಿಯ ಧಾರಾವಾಹಿ ಈ ವ್ಯಾಲೆಂಟೈನ್ಸ್ ದಿನಕ್ಕೆ ವೀಕ್ಷಕರಿಗೆ ಪ್ರೀತಿಯನ್ನು ಸಂಭ್ರಮಿಸಲು ಒಂದು ಕುತೂಹಲಕಾರಿ ಸರ್ಪ್ರೈಸ್ ತರುತ್ತಿದೆ. ಪ್ರೇಮಿಗಳ ದಿನದಂದು “ಗಟ್ಟಿಮೇಳ”ದಲ್ಲಿ ಚಿತ್ರದ ನಾಯಕ ವೇದಾಂತ್, ನಾಯಕಿ ಅಮೂಲ್ಯಾಗೆ ತಾಜ್ ಮಹಲ್ ಬಳಿಯಲ್ಲಿ ತನ್ನ ಪ್ರೇಮ ನಿವೇದಿಸುತ್ತಾನೆ. ಕನ್ನಡ ಕಿರುತೆರೆಯಲ್ಲಿಯೇ ವಿನೂತನವಾದ ಈ ಪ್ರಯತ್ನ ವೀಕ್ಷಕರನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಧಾರಾವಾಹಿ ತಂಡ ವ್ಯಕ್ತಪಡಿಸಿದೆ.

ಈ ಯೋಜನೆಯ ಹಿಂದಿನ ಪ್ಲಾನ್ ವೇದಾಂತ್ ತಮ್ಮನದು. ಅವನು ವೇದಾಂತ್ ತಮ್ಮ ಬ್ಯುಸಿನೆಸ್ ಟ್ರಿಪ್ ಎಂದು ಪ್ಲಾನ್ ಮಾಡಿ ದೆಹಲಿಗೆ ಕರೆದುಕೊಂಡು ಹೋಗುತ್ತಾನೆ. ಪ್ರೇಮಿಗಳ ದಿನದಂದು ವೇದಾಂತ್ ತನ್ನ ಪ್ರೀತಿಯನ್ನು ಅಮೂಲ್ಯಾಗೆ ಪ್ರೇಮ ನಿವೇದಿಸುತ್ತಾನೆ.

ಕೋರಮಂಗಲ ಅನಿಲ್ ನಿರ್ದೇಶನದ ಈ ಧಾರಾವಾಹಿಯನ್ನು ಜೋನಿ ಹರ್ಷ ನಿರ್ಮಾಣ ಮಾಡಿದ್ದಾರೆ. ಗಟ್ಟಿಮೇಳ ಮೂರು ಕುಟುಂಬಗಳ ಕಥೆಯಾಗಿದೆ. ಶ್ರೀಧರ್ ಮತ್ತು ಸುಹಾಸಿನಿ ವಸಿಷ್ಠ ಕುಟುಂಬ, ಮಂಜುನಾಥ್ ಮತ್ತು ಪರಿಮಳಾ ಕುಟುಂಬ ಮತ್ತು ಅಶ್ವಥ್ ಮತ್ತು ಪದ್ಮಾ ಅಶ್ವಥ್ ಅವರ ಕುಟುಂಬಗಳ ಸುತ್ತಲೂ ಸುತ್ತುತ್ತದೆ.

ಇದನ್ನೂ ಓದಿ:  ಪ್ರೇಮಿಗಳ ದಿನ 2021; ಪ್ರೇಮದ ಪಾತ್ರ ಮಾಡುತ್ತಲೇ ಸಪ್ತಪದಿ ತುಳಿದ ಸ್ಯಾಂಡಲ್​ವುಡ್​ ಜೋಡಿಗಳು..

ಅಮೂಲ್ಯ, ವೇದಾಂತ್ ಈ ಮೊದಲು ಶತ್ರುಗಳಾಗಿದ್ದರು. ನಂತರ ಅವರು ಪ್ರೇಮಿಗಳಾದರು. ಈಗ ತಾಜ್ ಮಹಲ್ ಬಳಿಗೆ ಬರುವವರೆಗೂ ಧಾರಾವಾಹಿ ಕುತೂಹಲಕಾರಿ ತಿರುವುಗಳನ್ನು ಕಾಯ್ದುಕೊಂಡಿದೆ. ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ಗಟ್ಟಿಮೇಳ ಇದೀಗ ಕನ್ನಡ ಕಿರುತೆರೆಯಲ್ಲಿಯೇ ಮೊಟ್ಟಮೊದಲ ಬಾರಿಗೆ ತಾಜ್ ಮಹಲ್ ಬಳಿ ಚಿತ್ರೀಕರಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ವೇದಾಂತ್ ವಸಿಷ್ಠ ಆಗಿ ರಕ್ಷಿತ್ ಗೌಡ, ಅಮೂಲ್ಯ ಮಂಜುನಾಥ್ ಆಗಿ ನಿಷಿಕಾ ರವಿಕೃಷ್ಣನ್ ನಟಿಸಿದ್ದಾರೆ.

Published On - 7:48 pm, Mon, 15 February 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?