ದೇವಸ್ಥಾನದ 6 ಸಿಬ್ಬಂದಿಗೆ ಕೊರೊನಾ, ಘಾಟಿ ಸುಬ್ರಹ್ಮಣ್ಯನಿಗೂ 48 ಗಂಟೆಗಳ ದಿಗ್ಬಂಧನ
ದೇವನಹಳ್ಳಿ: ದೇಗುಲದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಘಾಟಿ ಸುಬ್ರಹ್ಮಣ್ಯ ದೇವಾಲಯ ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ಮಾಡುವ 6 ಜನರಿಗೆ ಕೊರೊನಾ ವಕ್ಕರಿಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಅಂದ್ರೆ ಎರಡು ದಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬಂದ್ ಮಾಡಲಾಗಿದೆ. ದೇವಸ್ಥಾನದ ಸಿಬ್ಬಂದಿಗೆ ನೆನ್ನೆ ಸಂಜೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಎಲ್ಲಾ ಮುಂಜಾಗ್ರತಾ […]
ಆಯೇಷಾ ಬಾನು
Updated on:
Oct 22, 2020 | 10:40 AM
ದೇವನಹಳ್ಳಿ: ದೇಗುಲದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಘಾಟಿ ಸುಬ್ರಹ್ಮಣ್ಯ ದೇವಾಲಯ ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ಮಾಡುವ 6 ಜನರಿಗೆ ಕೊರೊನಾ ವಕ್ಕರಿಸಿದೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಅಂದ್ರೆ ಎರಡು ದಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬಂದ್ ಮಾಡಲಾಗಿದೆ. ದೇವಸ್ಥಾನದ ಸಿಬ್ಬಂದಿಗೆ ನೆನ್ನೆ ಸಂಜೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಕ್ತರು ದೇವಸ್ಥಾನಕ್ಕೆ ಆಗಮಿಸದಂತೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
Ayesha Banu
ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.