AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್ಸ್​ನಲ್ಲಿ ಮರುಕಳಿಸಿದ ಅಮಾನವೀಯ ಘಟನೆ: ಬೆಡ್​ನಿಂದ ರೋಗಿ ಕೆಳಗೆ ಬಿದ್ದರೂ ಡೋಂಟ್​ಕೇರ್

ಗದಗ: ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಡ್​ನಿಂದ ರೋಗಿಯೊಬ್ಬ ಕೆಳಗೆ ಬಿದ್ದರೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವಹಿಸಿರುವುದು ಕಂಡು ಬಂದಿದೆ. ತುರ್ತು ಚಿಕಿತ್ಸಾ ಘಟಕದ ವಾರ್ಡ್​ನಲ್ಲೇ ರೋಗಿ ನರಳಾಡ್ತಿದ್ದಾರೆ. ಆದರೆ ವೈದ್ಯರು, ಸಿಬ್ಬಂದಿ ಅಲ್ಲೇ ಓಡಾಡುತ್ತಿದ್ರೂ ಕ್ಯಾರೆ ಎಂದಿಲ್ಲ. ಆಸ್ಪತ್ರೆ ಸಿಬ್ಬಂದಿ ಟಿವಿ9 ಕ್ಯಾಮರಾ ಕಂಡು ಓಡೋಡಿ ಬಂದು ರೋಗಿಯನ್ನ ಬೆಡ್ ಮೇಲೆ ಹಾಕಿದ್ದಾರೆ. ವೈದ್ಯರ ಮೇಲೆ ನಂಬಿಕೆ ಇಟ್ಟು ರೋಗಿಗಳು ಆಸ್ಪತ್ರೆಗೆ ಹೋಗ್ತಾರೆ. ಆದರೆ ಅಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಆಗಬಾರದ ಅನಾಹುತ ಸಂಭವಿಸುತ್ತೆ. ನಿನ್ನೆ […]

ಜಿಮ್ಸ್​ನಲ್ಲಿ ಮರುಕಳಿಸಿದ ಅಮಾನವೀಯ ಘಟನೆ: ಬೆಡ್​ನಿಂದ ರೋಗಿ ಕೆಳಗೆ ಬಿದ್ದರೂ ಡೋಂಟ್​ಕೇರ್
ಆಯೇಷಾ ಬಾನು
ಆಯೇಷಾ ಬಾನು|

Updated on:Oct 30, 2020 | 8:01 AM

Share

ಗದಗ: ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಡ್​ನಿಂದ ರೋಗಿಯೊಬ್ಬ ಕೆಳಗೆ ಬಿದ್ದರೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವಹಿಸಿರುವುದು ಕಂಡು ಬಂದಿದೆ. ತುರ್ತು ಚಿಕಿತ್ಸಾ ಘಟಕದ ವಾರ್ಡ್​ನಲ್ಲೇ ರೋಗಿ ನರಳಾಡ್ತಿದ್ದಾರೆ. ಆದರೆ ವೈದ್ಯರು, ಸಿಬ್ಬಂದಿ ಅಲ್ಲೇ ಓಡಾಡುತ್ತಿದ್ರೂ ಕ್ಯಾರೆ ಎಂದಿಲ್ಲ. ಆಸ್ಪತ್ರೆ ಸಿಬ್ಬಂದಿ ಟಿವಿ9 ಕ್ಯಾಮರಾ ಕಂಡು ಓಡೋಡಿ ಬಂದು ರೋಗಿಯನ್ನ ಬೆಡ್ ಮೇಲೆ ಹಾಕಿದ್ದಾರೆ.

ವೈದ್ಯರ ಮೇಲೆ ನಂಬಿಕೆ ಇಟ್ಟು ರೋಗಿಗಳು ಆಸ್ಪತ್ರೆಗೆ ಹೋಗ್ತಾರೆ. ಆದರೆ ಅಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಆಗಬಾರದ ಅನಾಹುತ ಸಂಭವಿಸುತ್ತೆ. ನಿನ್ನೆ ಕೂಡ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ತಾಯಿ ಮಗುವಿಗೆ ಚಿಕಿತ್ಸೆ ನೀಡುವಲ್ಲಿ ಅಮಾನವೀಯವಾಗಿ ವರ್ತಿಸಿತ್ತು. ಇಂದೂ ಕೂಡ ಇಂತಹ ಘಟನೆ ಮರುಕಳಿಸಿದೆ.

ರೋಗಿಯನ್ನ ಬೆಡ್ ಮೇಲೆ ಮಲಗಿಸಿದಾಗ ಆತನ ಆರೋಗ್ಯ ನೋಡಿಕೊಳ್ಳಲು ಯಾವ ಸಿಬ್ಬಂದಿಯೂ ಇರುವುದಿಲ್ಲ. ಇದರಿಂದ ರೋಗಿಗಳು ಬಹಳಷ್ಟು ನೋವನ್ನು ಅನುಭವಿಸುತ್ತಿದ್ದಾರೆ. ಡ್ಯೂಟಿ ಡಾಕ್ಟರ್ ಇಲ್ಲದೇ ಇರೋದೇ ಘಟನೆಗೆ ಕಾರಣ ಎಂದು ಜಿಮ್ಸ್ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ರೋಗಿಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸುಟ್ಟ ಗಾಯದಿಂದ ತಾಯಿ, ಮಗು ಚೀರಾಟ: ತುರ್ತು ಚಿಕಿತ್ಸೆಗೆ ಸತಾಯಿಸಿದ ಜಿಮ್ಸ್ ವಿರುದ್ಧ ಸಂಬಂಧಿಕರ ಆಕ್ರೋಶ

Published On - 7:59 am, Fri, 30 October 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ