AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. […]

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​
KUSHAL V
| Edited By: |

Updated on: Sep 28, 2020 | 12:27 PM

Share

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. ಈ ವೇಳೆ ಬಾಲಕಿಗೆ ದೆವ್ವ ಹಿಡಿದಿದೆ ಎಂದು‌ ನಂಬಿಸಿದ ರಾಕೇಶ, ಮಗುವಿಗೆ ಪೂಜೆ ಮಾಡುವುದಾಗಿ ಹೇಳಿ ಆಕೆಯನ್ನು ಕುಟೀರಕ್ಕೆ ಕರೆತಂದು ಕೋಲಿನಿಂದ ಹೊಡೆದಿದ್ದಾನೆ. ಕೋಲಿನ ಹೊಡೆತದಿಂದ ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ ಎಂದು ಹೇಳಲಾಗಿದೆ.

ಪ್ರಜ್ಞೆ ತಪ್ಪಿದ ಬಾಲಕಿಯನ್ನ ಪೂಜಾರಿ ರಾಕೇಶ ಪೋಷಕರಿಗೆ ಒಪ್ಪಿಸಿಬಿಟ್ಟಿದ್ದಾನೆ. ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದ ಹಿನ್ನೆಲೆಯಲ್ಲಿ ಪ್ರವೀಣ್ ಮತ್ತು ಶ್ಯಾಮಲಾ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರು. ಆದರೆ, ಆಸ್ಪತ್ರೆಗೆ ಹೋಗುವಾಗ ಪೂರ್ವಿಕಾ ಮಾರ್ಗಮಧ್ಯೆಯೇ ಅಸುನೀಗಿದ್ದಾಳೆ.

ಈ ಹಿನ್ನೆಲೆಯಲ್ಲಿ ಚಿಕ್ಕಜಾಜೂರು ಠಾಣೆ‌ಯಲ್ಲಿ ಪ್ರಕರಣ ದಾಖಲಾಗಿದೆ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶನನ್ನ (19) ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ