AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. […]

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​
KUSHAL V
| Edited By: |

Updated on: Sep 28, 2020 | 12:27 PM

Share

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. ಈ ವೇಳೆ ಬಾಲಕಿಗೆ ದೆವ್ವ ಹಿಡಿದಿದೆ ಎಂದು‌ ನಂಬಿಸಿದ ರಾಕೇಶ, ಮಗುವಿಗೆ ಪೂಜೆ ಮಾಡುವುದಾಗಿ ಹೇಳಿ ಆಕೆಯನ್ನು ಕುಟೀರಕ್ಕೆ ಕರೆತಂದು ಕೋಲಿನಿಂದ ಹೊಡೆದಿದ್ದಾನೆ. ಕೋಲಿನ ಹೊಡೆತದಿಂದ ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ ಎಂದು ಹೇಳಲಾಗಿದೆ.

ಪ್ರಜ್ಞೆ ತಪ್ಪಿದ ಬಾಲಕಿಯನ್ನ ಪೂಜಾರಿ ರಾಕೇಶ ಪೋಷಕರಿಗೆ ಒಪ್ಪಿಸಿಬಿಟ್ಟಿದ್ದಾನೆ. ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದ ಹಿನ್ನೆಲೆಯಲ್ಲಿ ಪ್ರವೀಣ್ ಮತ್ತು ಶ್ಯಾಮಲಾ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರು. ಆದರೆ, ಆಸ್ಪತ್ರೆಗೆ ಹೋಗುವಾಗ ಪೂರ್ವಿಕಾ ಮಾರ್ಗಮಧ್ಯೆಯೇ ಅಸುನೀಗಿದ್ದಾಳೆ.

ಈ ಹಿನ್ನೆಲೆಯಲ್ಲಿ ಚಿಕ್ಕಜಾಜೂರು ಠಾಣೆ‌ಯಲ್ಲಿ ಪ್ರಕರಣ ದಾಖಲಾಗಿದೆ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶನನ್ನ (19) ಪೊಲೀಸರು ಬಂಧಿಸಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!