AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. […]

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​
KUSHAL V
| Edited By: |

Updated on: Sep 28, 2020 | 12:27 PM

Share

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. ಈ ವೇಳೆ ಬಾಲಕಿಗೆ ದೆವ್ವ ಹಿಡಿದಿದೆ ಎಂದು‌ ನಂಬಿಸಿದ ರಾಕೇಶ, ಮಗುವಿಗೆ ಪೂಜೆ ಮಾಡುವುದಾಗಿ ಹೇಳಿ ಆಕೆಯನ್ನು ಕುಟೀರಕ್ಕೆ ಕರೆತಂದು ಕೋಲಿನಿಂದ ಹೊಡೆದಿದ್ದಾನೆ. ಕೋಲಿನ ಹೊಡೆತದಿಂದ ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ ಎಂದು ಹೇಳಲಾಗಿದೆ.

ಪ್ರಜ್ಞೆ ತಪ್ಪಿದ ಬಾಲಕಿಯನ್ನ ಪೂಜಾರಿ ರಾಕೇಶ ಪೋಷಕರಿಗೆ ಒಪ್ಪಿಸಿಬಿಟ್ಟಿದ್ದಾನೆ. ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದ ಹಿನ್ನೆಲೆಯಲ್ಲಿ ಪ್ರವೀಣ್ ಮತ್ತು ಶ್ಯಾಮಲಾ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರು. ಆದರೆ, ಆಸ್ಪತ್ರೆಗೆ ಹೋಗುವಾಗ ಪೂರ್ವಿಕಾ ಮಾರ್ಗಮಧ್ಯೆಯೇ ಅಸುನೀಗಿದ್ದಾಳೆ.

ಈ ಹಿನ್ನೆಲೆಯಲ್ಲಿ ಚಿಕ್ಕಜಾಜೂರು ಠಾಣೆ‌ಯಲ್ಲಿ ಪ್ರಕರಣ ದಾಖಲಾಗಿದೆ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶನನ್ನ (19) ಪೊಲೀಸರು ಬಂಧಿಸಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ