AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. […]

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​
KUSHAL V
| Updated By: ಸಾಧು ಶ್ರೀನಾಥ್​|

Updated on: Sep 28, 2020 | 12:27 PM

Share

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. ಈ ವೇಳೆ ಬಾಲಕಿಗೆ ದೆವ್ವ ಹಿಡಿದಿದೆ ಎಂದು‌ ನಂಬಿಸಿದ ರಾಕೇಶ, ಮಗುವಿಗೆ ಪೂಜೆ ಮಾಡುವುದಾಗಿ ಹೇಳಿ ಆಕೆಯನ್ನು ಕುಟೀರಕ್ಕೆ ಕರೆತಂದು ಕೋಲಿನಿಂದ ಹೊಡೆದಿದ್ದಾನೆ. ಕೋಲಿನ ಹೊಡೆತದಿಂದ ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ ಎಂದು ಹೇಳಲಾಗಿದೆ.

ಪ್ರಜ್ಞೆ ತಪ್ಪಿದ ಬಾಲಕಿಯನ್ನ ಪೂಜಾರಿ ರಾಕೇಶ ಪೋಷಕರಿಗೆ ಒಪ್ಪಿಸಿಬಿಟ್ಟಿದ್ದಾನೆ. ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದ ಹಿನ್ನೆಲೆಯಲ್ಲಿ ಪ್ರವೀಣ್ ಮತ್ತು ಶ್ಯಾಮಲಾ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರು. ಆದರೆ, ಆಸ್ಪತ್ರೆಗೆ ಹೋಗುವಾಗ ಪೂರ್ವಿಕಾ ಮಾರ್ಗಮಧ್ಯೆಯೇ ಅಸುನೀಗಿದ್ದಾಳೆ.

ಈ ಹಿನ್ನೆಲೆಯಲ್ಲಿ ಚಿಕ್ಕಜಾಜೂರು ಠಾಣೆ‌ಯಲ್ಲಿ ಪ್ರಕರಣ ದಾಖಲಾಗಿದೆ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶನನ್ನ (19) ಪೊಲೀಸರು ಬಂಧಿಸಿದ್ದಾರೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ