AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. […]

ದೆವ್ವ ಬಿಡಿಸಲು ಕೋಲಿನಿಂದ ಹೊಡೆತ, ಬಾಲಕಿಯ ಸಾವು: ಪೂಜಾರಿ ಅರೆಸ್ಟ್​
KUSHAL V
| Edited By: |

Updated on: Sep 28, 2020 | 12:27 PM

Share

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಪೂಜಾರಿಯೊಬ್ಬ 3 ವರ್ಷದ ಬಾಲಕಿಯನ್ನು ಕೊಲೆಗೈದಿದ್ದಾನೆ ಎಂಬ ಆರೋಪವನ್ನು ಆಕೆಯ ಪೋಷಕರು ಮಾಡಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ. ಪ್ರವೀಣ್ ಮತ್ತು ಶ್ಯಾಮಲಾ ದಂಪತಿಯ 3 ವರ್ಷದ ಹೆಣ್ಣುಮಗು ಪೂರ್ವಿಕಾಳನ್ನ ಪೂಜಾರಿ ರಾಕೇಶ ಕೊಲೆಗೈದಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೂರು ದಿನದಿಂದ ಮಗು ಸರಿಯಾಗಿ ನಿದ್ದೆ ಮತ್ತು ಊಟ ಮಾಡುತ್ತಿಲ್ಲ ಎಂದು ಆಕೆಯನ್ನು ಚೌಡಮ್ಮನ ದೇಗುಲದ ಪೂಜಾರಿ ರಾಕೇಶನ ಬಳಿ ಕರೆದುಕೊಂಡು ಹೋಗಿದ್ದರಂತೆ. ಈ ವೇಳೆ ಬಾಲಕಿಗೆ ದೆವ್ವ ಹಿಡಿದಿದೆ ಎಂದು‌ ನಂಬಿಸಿದ ರಾಕೇಶ, ಮಗುವಿಗೆ ಪೂಜೆ ಮಾಡುವುದಾಗಿ ಹೇಳಿ ಆಕೆಯನ್ನು ಕುಟೀರಕ್ಕೆ ಕರೆತಂದು ಕೋಲಿನಿಂದ ಹೊಡೆದಿದ್ದಾನೆ. ಕೋಲಿನ ಹೊಡೆತದಿಂದ ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ ಎಂದು ಹೇಳಲಾಗಿದೆ.

ಪ್ರಜ್ಞೆ ತಪ್ಪಿದ ಬಾಲಕಿಯನ್ನ ಪೂಜಾರಿ ರಾಕೇಶ ಪೋಷಕರಿಗೆ ಒಪ್ಪಿಸಿಬಿಟ್ಟಿದ್ದಾನೆ. ಪೂರ್ವಿಕಾ ಪ್ರಜ್ಞೆತಪ್ಪಿ ಬಿದ್ದ ಹಿನ್ನೆಲೆಯಲ್ಲಿ ಪ್ರವೀಣ್ ಮತ್ತು ಶ್ಯಾಮಲಾ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರು. ಆದರೆ, ಆಸ್ಪತ್ರೆಗೆ ಹೋಗುವಾಗ ಪೂರ್ವಿಕಾ ಮಾರ್ಗಮಧ್ಯೆಯೇ ಅಸುನೀಗಿದ್ದಾಳೆ.

ಈ ಹಿನ್ನೆಲೆಯಲ್ಲಿ ಚಿಕ್ಕಜಾಜೂರು ಠಾಣೆ‌ಯಲ್ಲಿ ಪ್ರಕರಣ ದಾಖಲಾಗಿದೆ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶನನ್ನ (19) ಪೊಲೀಸರು ಬಂಧಿಸಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ