AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯ ಜಾತಿ ಯುವಕನ ಜೊತೆ ಪ್ರೀತಿ: ಯುವತಿಯ ಮರ್ಯಾದಾ ಹತ್ಯೆ ಶಂಕೆ!

ಮೈಸೂರು: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಮಗಳನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಮೈಸೂರು ತಾಲೂಕಿನ ದೊಡ್ಡ ಕಾನ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೊಡ್ಡ ಕಾನ್ಯ ಗ್ರಾಮದ ಮೀನಾಕ್ಷಿ (22) ಸಾವಿಗೀಡಾಗಿರುವ ಯುವತಿಯಾಗಿದ್ದು, ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇನ್ನು ಯುವತಿ ಬದುಕಿದ್ದ ವೇಳೆ, ತಾನು ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮನೆಯವರು ಹಿಂಸೆ ನೀಡುತ್ತಿದ್ದಾರೆಂದು ಮೈಸೂರು SP ಹಾಗೂ ಒಡನಾಡಿ ಸಂಸ್ಥೆಗೆ ಇ-ಮೇಲ್ ಮೂಲಕ ದೂರು ನೀಡಿದ್ದಳಂತೆ. ಯುವತಿ ದೂರು […]

ಅನ್ಯ ಜಾತಿ ಯುವಕನ ಜೊತೆ ಪ್ರೀತಿ: ಯುವತಿಯ ಮರ್ಯಾದಾ ಹತ್ಯೆ ಶಂಕೆ!
ಸಾಧು ಶ್ರೀನಾಥ್​
|

Updated on:Sep 04, 2020 | 2:04 PM

Share

ಮೈಸೂರು: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಮಗಳನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಮೈಸೂರು ತಾಲೂಕಿನ ದೊಡ್ಡ ಕಾನ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ದೊಡ್ಡ ಕಾನ್ಯ ಗ್ರಾಮದ ಮೀನಾಕ್ಷಿ (22) ಸಾವಿಗೀಡಾಗಿರುವ ಯುವತಿಯಾಗಿದ್ದು, ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇನ್ನು ಯುವತಿ ಬದುಕಿದ್ದ ವೇಳೆ, ತಾನು ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮನೆಯವರು ಹಿಂಸೆ ನೀಡುತ್ತಿದ್ದಾರೆಂದು ಮೈಸೂರು SP ಹಾಗೂ ಒಡನಾಡಿ ಸಂಸ್ಥೆಗೆ ಇ-ಮೇಲ್ ಮೂಲಕ ದೂರು ನೀಡಿದ್ದಳಂತೆ.

ಯುವತಿ ದೂರು ನೀಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನನ್ನ ಅಣ್ಣ ತೀವ್ರ ಹಲ್ಲೆ ಮಾಡಿ ಕತ್ತು ಹಿಸುಕಿ ಸಾಯಿಸಲು ಯತ್ನಿಸಿದ. ಆದರೆ ಇದನ್ನು ನಮ್ಮ ಮನೆಯವರು ತಡೆಯಲಿಲ್ಲ. ನಾನು ಗೃಹ ಬಂಧನಲ್ಲಿರುವೆ, ನನಗೆ ಜೀವ ಭಯವಿದೆ. ನನ್ನನ್ನು ಕಾಪಾಡಿ ಎಂದು ಜೂನ್ 16 ಹಾಗೂ ಆಗಸ್ಟ್ 6ರಂದು ಎರಡು ಬಾರಿ SPಗೆ ಮೃತ ಮೀನಾಕ್ಷಿ ಇ-ಮೇಲ್ ಮೂಲಕ ದೂರು ನೀಡಿದ್ದಳಂತೆ.

ಕಳೆದ ಬುಧವಾರ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಮನೆಯಲ್ಲೇ ಪತ್ತೆಯಾಗಿದ್ದು, ಅನ್ಯ ಜಾತಿ ಯುವಕನನ್ನು ಮದುವೆ ಆಗುತ್ತೇನೆಂದು ಪಟ್ಟು ಹಿಡಿದಿದ್ದಕ್ಕೆ ಹೆತ್ತವರೇ ಮೀನಾಕ್ಷಿಯನ್ನ ಹತ್ಯೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅನುಮಾನಾಸ್ಪದ ಸಾವು ಎಂದು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 2:03 pm, Fri, 4 September 20

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್