AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಹಸಿವು ತಣಿಸಿ‌ ನಿಜ‌ ಮಾನವೀಯತೆ ಮೆರೆಯುತಿರುವ ಮಹಾಮಾತೆ.. ಎಲ್ಲಿ?

ಉಡುಪಿ: ಲಾಕ್‌ಡೌನ್‌ ಹಾಗೂ ಕೊರೊನಾ ಸಾಂಕ್ರಮಿಕ ರೋಗದಿಂದ ಸಂಕಷ್ಟಕ್ಕೀಡಾದ ಜನರ ಕಷ್ಟವನ್ನೇ ಕೇಳೋರಿಲ್ಲ. ಇಂತಹ ಸಂದರ್ಭದಲ್ಲಿ ಬೀದಿ ನಾಯಿಗಳ ಹಸಿವನ್ನು ತಣಿಸಿ‌ ನಿಜ‌ ಮಾನವೀಯತೆ ಮೆರೆಯುತ್ತಿದ್ದಾರೆ ಕುಂದಾಪುರದ ಹಂಗ್ಳೂರಿನ ಹುಡುಗಿ ಮೋನಿಶಾ ಗೇಬ್ರಿಯಲ್. ಲಾಕ್ ಡೌನ್ ಆದಾಗ ಇವರ ಸೇವೆ ಆರಂಭವಾಗಿದೆ. ಬೀದಿಯಲ್ಲಿ ಅಡ್ಡಾಡುವ ನಾಯಿಗಳು ಹೋಟೆಲ್ ಗಳು ಮುಚ್ಚಿದ ನಂತ್ರ ಆಹಾರಕ್ಕೆ ಸಂಕಟ ಪಡುತ್ತಿದ್ದವು. ಅದರಲ್ಲೂ ಬೀದಿನಾಯಿಗಳು ಹಸಿವೆಯಲ್ಲೇ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು, ಈ ಪರಿಸ್ಥಿತಿ ನೋಡಲಾಗದೆ ಲಾಕ್‌ಡೌನ್ ಆರಂಭವಾದಾಗಿನಿಂದ ಕಳೆದ ಸುಮಾರು 120 ದಿನದಿಂದ […]

ನಾಯಿಗಳ ಹಸಿವು ತಣಿಸಿ‌ ನಿಜ‌ ಮಾನವೀಯತೆ ಮೆರೆಯುತಿರುವ ಮಹಾಮಾತೆ.. ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 30, 2020 | 3:05 PM

Share

ಉಡುಪಿ: ಲಾಕ್‌ಡೌನ್‌ ಹಾಗೂ ಕೊರೊನಾ ಸಾಂಕ್ರಮಿಕ ರೋಗದಿಂದ ಸಂಕಷ್ಟಕ್ಕೀಡಾದ ಜನರ ಕಷ್ಟವನ್ನೇ ಕೇಳೋರಿಲ್ಲ. ಇಂತಹ ಸಂದರ್ಭದಲ್ಲಿ ಬೀದಿ ನಾಯಿಗಳ ಹಸಿವನ್ನು ತಣಿಸಿ‌ ನಿಜ‌ ಮಾನವೀಯತೆ ಮೆರೆಯುತ್ತಿದ್ದಾರೆ ಕುಂದಾಪುರದ ಹಂಗ್ಳೂರಿನ ಹುಡುಗಿ ಮೋನಿಶಾ ಗೇಬ್ರಿಯಲ್.

ಲಾಕ್ ಡೌನ್ ಆದಾಗ ಇವರ ಸೇವೆ ಆರಂಭವಾಗಿದೆ. ಬೀದಿಯಲ್ಲಿ ಅಡ್ಡಾಡುವ ನಾಯಿಗಳು ಹೋಟೆಲ್ ಗಳು ಮುಚ್ಚಿದ ನಂತ್ರ ಆಹಾರಕ್ಕೆ ಸಂಕಟ ಪಡುತ್ತಿದ್ದವು. ಅದರಲ್ಲೂ ಬೀದಿನಾಯಿಗಳು ಹಸಿವೆಯಲ್ಲೇ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು, ಈ ಪರಿಸ್ಥಿತಿ ನೋಡಲಾಗದೆ ಲಾಕ್‌ಡೌನ್ ಆರಂಭವಾದಾಗಿನಿಂದ ಕಳೆದ ಸುಮಾರು 120 ದಿನದಿಂದ ನಿರಂತರವಾಗಿ ತಮ್ಮ ಸ್ಥಳೀಯ ಪ್ರದೇಶದಲ್ಲಿ ನಾಯಿಗೆ ರುಚಿಕರ ಹಾಗೂ ಶುದ್ದ ಆಹಾರವನ್ನು ನೀಡುತ್ತಾ ಬಂದಿದ್ದಾರೆ ಮೋನಿಶಾ.

ಇವರ ಈ ಸೇವೆಗೆ ಅವರ ಸ್ನೇಹಿತ ಅರವಿಂದ್ ಫರ್ನಾಂಡಿಸ್ ಕೂಡ ಕೈ ಜೋಡಿಸಿದ್ದಾರೆ. ಇಂಗ್ಲೆಂಡಿನ ಲ್ಯಾಂಕಸ್ಟರ್ ಯುನಿವರ್ಸಿಟಿಯಲ್ಲಿ ವಕೀಲ ಪದವಿ ಪಡೆದಿರುವ ಈಕೆ, ಮುಂದೆ ತಮ್ಮ ಊರಲ್ಲಿ ಹೊಸ ಉದ್ಯಮ ಪ್ರಾರಂಭ ಮಾಡುವ ಯೋಚನೆಯಲ್ಲೂ ಇದ್ದಾರೆ. ಸಾಕು ಪ್ರಾಣಿಗಳ ರಕ್ಷಣೆಗಾಗಿ ಒಂದು ಎನ್‌ಜಿಓ ಆರಂಭಿಸಿ, ಬೀದಿ ನಾಯಿಗಳನ್ನು ರಕ್ಷಣೆ ಮಾಡಲು ಸಮೀಪದ ಜಾಗದಲ್ಲಿ ಆರೈಕೆ  ಕೇಂದ್ರವೊಂದನ್ನು ವ್ಯವಸ್ಥೆ ಮಾಡಬೇಕು ಎನ್ನುವ ಕನಸು ಇವರದ್ದು.

ಪ್ರತಿದಿನ ಬೆಳಗ್ಗೆ ಏಳು ಗಂಟೆಯಿಂದಲೇ ಪ್ರಾಣಿಗೆ ಅನ್ನ ಬೇಯಿಸುವ ಕೆಲಸ ಪ್ರಾರಂಭ ಮಾಡುತ್ತಾರೆ. ಮೊನಿಶಾ ಅವರ ತಂದೆ-ತಾಯಿಯೂ ಕೂಡ ಸಹಕಾರ ಕೊಡುತ್ತಾರಂತೆ. ಪ್ರತಿದಿನ ಬೇರೆ ಬೇರೆ ಆಹಾರ ಪದಾರ್ಥದೊಂದಿಗೆ, ಕೋಳಿ ಮಾಂಸವನ್ನು ಆಹಾರವಾಗಿ ಬೀದಿ ನಾಯಿಗಳಿಗೆ ನೀಡಲಾಗುತ್ತದೆ. ನಾಯಿಗಳಿಗೆ ಬಡಿಸಲು ಹೊಸ ತಟ್ಟೆಗಳನ್ನು ಖರೀದಿಸಿ, ಊಟ ಆದಮೇಲೆ ಮನೆಗೆ ತಂದು ತಾವೇ ಶುಚಿಗೊಳಿಸುತ್ತಾರೆ.

ಪ್ರತಿದಿನ ಬೀದಿ ನಾಯಿಗಳಿಗಾಗಿಯೇ 15 ಕಿಲೋದಷ್ಟು ಅನ್ನ ಬೇಯಿಸುತ್ತಾರೆ. ಮಳೆ ಬಂದಾಗಲೂ ಈ ಸೇವಾ ಕಾರ್ಯಕ್ಕೆ ವಿರಾಮ ನೀಡಲ್ಲ. ಇವರ ಸೇವೆಯನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಕೆಲವರು ಅಕ್ಕಿ, ಹಾಲು, ಆಹಾರ ಪದಾರ್ಥ ಬಿಸ್ಕತ್ತು ನೀಡಿ ಸಹಾಯ ಮಾಡಿದ್ದುಂಟು. -ಹರೀಶ್ ಪಾಲೆಚ್ಚಾರ್

Published On - 6:10 pm, Tue, 28 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್