ನಾಯಿಗಳ ಹಸಿವು ತಣಿಸಿ‌ ನಿಜ‌ ಮಾನವೀಯತೆ ಮೆರೆಯುತಿರುವ ಮಹಾಮಾತೆ.. ಎಲ್ಲಿ?

ಉಡುಪಿ: ಲಾಕ್‌ಡೌನ್‌ ಹಾಗೂ ಕೊರೊನಾ ಸಾಂಕ್ರಮಿಕ ರೋಗದಿಂದ ಸಂಕಷ್ಟಕ್ಕೀಡಾದ ಜನರ ಕಷ್ಟವನ್ನೇ ಕೇಳೋರಿಲ್ಲ. ಇಂತಹ ಸಂದರ್ಭದಲ್ಲಿ ಬೀದಿ ನಾಯಿಗಳ ಹಸಿವನ್ನು ತಣಿಸಿ‌ ನಿಜ‌ ಮಾನವೀಯತೆ ಮೆರೆಯುತ್ತಿದ್ದಾರೆ ಕುಂದಾಪುರದ ಹಂಗ್ಳೂರಿನ ಹುಡುಗಿ ಮೋನಿಶಾ ಗೇಬ್ರಿಯಲ್. ಲಾಕ್ ಡೌನ್ ಆದಾಗ ಇವರ ಸೇವೆ ಆರಂಭವಾಗಿದೆ. ಬೀದಿಯಲ್ಲಿ ಅಡ್ಡಾಡುವ ನಾಯಿಗಳು ಹೋಟೆಲ್ ಗಳು ಮುಚ್ಚಿದ ನಂತ್ರ ಆಹಾರಕ್ಕೆ ಸಂಕಟ ಪಡುತ್ತಿದ್ದವು. ಅದರಲ್ಲೂ ಬೀದಿನಾಯಿಗಳು ಹಸಿವೆಯಲ್ಲೇ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು, ಈ ಪರಿಸ್ಥಿತಿ ನೋಡಲಾಗದೆ ಲಾಕ್‌ಡೌನ್ ಆರಂಭವಾದಾಗಿನಿಂದ ಕಳೆದ ಸುಮಾರು 120 ದಿನದಿಂದ […]

ನಾಯಿಗಳ ಹಸಿವು ತಣಿಸಿ‌ ನಿಜ‌ ಮಾನವೀಯತೆ ಮೆರೆಯುತಿರುವ ಮಹಾಮಾತೆ.. ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: Jul 30, 2020 | 3:05 PM

ಉಡುಪಿ: ಲಾಕ್‌ಡೌನ್‌ ಹಾಗೂ ಕೊರೊನಾ ಸಾಂಕ್ರಮಿಕ ರೋಗದಿಂದ ಸಂಕಷ್ಟಕ್ಕೀಡಾದ ಜನರ ಕಷ್ಟವನ್ನೇ ಕೇಳೋರಿಲ್ಲ. ಇಂತಹ ಸಂದರ್ಭದಲ್ಲಿ ಬೀದಿ ನಾಯಿಗಳ ಹಸಿವನ್ನು ತಣಿಸಿ‌ ನಿಜ‌ ಮಾನವೀಯತೆ ಮೆರೆಯುತ್ತಿದ್ದಾರೆ ಕುಂದಾಪುರದ ಹಂಗ್ಳೂರಿನ ಹುಡುಗಿ ಮೋನಿಶಾ ಗೇಬ್ರಿಯಲ್.

ಲಾಕ್ ಡೌನ್ ಆದಾಗ ಇವರ ಸೇವೆ ಆರಂಭವಾಗಿದೆ. ಬೀದಿಯಲ್ಲಿ ಅಡ್ಡಾಡುವ ನಾಯಿಗಳು ಹೋಟೆಲ್ ಗಳು ಮುಚ್ಚಿದ ನಂತ್ರ ಆಹಾರಕ್ಕೆ ಸಂಕಟ ಪಡುತ್ತಿದ್ದವು. ಅದರಲ್ಲೂ ಬೀದಿನಾಯಿಗಳು ಹಸಿವೆಯಲ್ಲೇ ಸಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು, ಈ ಪರಿಸ್ಥಿತಿ ನೋಡಲಾಗದೆ ಲಾಕ್‌ಡೌನ್ ಆರಂಭವಾದಾಗಿನಿಂದ ಕಳೆದ ಸುಮಾರು 120 ದಿನದಿಂದ ನಿರಂತರವಾಗಿ ತಮ್ಮ ಸ್ಥಳೀಯ ಪ್ರದೇಶದಲ್ಲಿ ನಾಯಿಗೆ ರುಚಿಕರ ಹಾಗೂ ಶುದ್ದ ಆಹಾರವನ್ನು ನೀಡುತ್ತಾ ಬಂದಿದ್ದಾರೆ ಮೋನಿಶಾ.

ಇವರ ಈ ಸೇವೆಗೆ ಅವರ ಸ್ನೇಹಿತ ಅರವಿಂದ್ ಫರ್ನಾಂಡಿಸ್ ಕೂಡ ಕೈ ಜೋಡಿಸಿದ್ದಾರೆ. ಇಂಗ್ಲೆಂಡಿನ ಲ್ಯಾಂಕಸ್ಟರ್ ಯುನಿವರ್ಸಿಟಿಯಲ್ಲಿ ವಕೀಲ ಪದವಿ ಪಡೆದಿರುವ ಈಕೆ, ಮುಂದೆ ತಮ್ಮ ಊರಲ್ಲಿ ಹೊಸ ಉದ್ಯಮ ಪ್ರಾರಂಭ ಮಾಡುವ ಯೋಚನೆಯಲ್ಲೂ ಇದ್ದಾರೆ. ಸಾಕು ಪ್ರಾಣಿಗಳ ರಕ್ಷಣೆಗಾಗಿ ಒಂದು ಎನ್‌ಜಿಓ ಆರಂಭಿಸಿ, ಬೀದಿ ನಾಯಿಗಳನ್ನು ರಕ್ಷಣೆ ಮಾಡಲು ಸಮೀಪದ ಜಾಗದಲ್ಲಿ ಆರೈಕೆ  ಕೇಂದ್ರವೊಂದನ್ನು ವ್ಯವಸ್ಥೆ ಮಾಡಬೇಕು ಎನ್ನುವ ಕನಸು ಇವರದ್ದು.

ಪ್ರತಿದಿನ ಬೆಳಗ್ಗೆ ಏಳು ಗಂಟೆಯಿಂದಲೇ ಪ್ರಾಣಿಗೆ ಅನ್ನ ಬೇಯಿಸುವ ಕೆಲಸ ಪ್ರಾರಂಭ ಮಾಡುತ್ತಾರೆ. ಮೊನಿಶಾ ಅವರ ತಂದೆ-ತಾಯಿಯೂ ಕೂಡ ಸಹಕಾರ ಕೊಡುತ್ತಾರಂತೆ. ಪ್ರತಿದಿನ ಬೇರೆ ಬೇರೆ ಆಹಾರ ಪದಾರ್ಥದೊಂದಿಗೆ, ಕೋಳಿ ಮಾಂಸವನ್ನು ಆಹಾರವಾಗಿ ಬೀದಿ ನಾಯಿಗಳಿಗೆ ನೀಡಲಾಗುತ್ತದೆ. ನಾಯಿಗಳಿಗೆ ಬಡಿಸಲು ಹೊಸ ತಟ್ಟೆಗಳನ್ನು ಖರೀದಿಸಿ, ಊಟ ಆದಮೇಲೆ ಮನೆಗೆ ತಂದು ತಾವೇ ಶುಚಿಗೊಳಿಸುತ್ತಾರೆ.

ಪ್ರತಿದಿನ ಬೀದಿ ನಾಯಿಗಳಿಗಾಗಿಯೇ 15 ಕಿಲೋದಷ್ಟು ಅನ್ನ ಬೇಯಿಸುತ್ತಾರೆ. ಮಳೆ ಬಂದಾಗಲೂ ಈ ಸೇವಾ ಕಾರ್ಯಕ್ಕೆ ವಿರಾಮ ನೀಡಲ್ಲ. ಇವರ ಸೇವೆಯನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಕೆಲವರು ಅಕ್ಕಿ, ಹಾಲು, ಆಹಾರ ಪದಾರ್ಥ ಬಿಸ್ಕತ್ತು ನೀಡಿ ಸಹಾಯ ಮಾಡಿದ್ದುಂಟು.
-ಹರೀಶ್ ಪಾಲೆಚ್ಚಾರ್

Published On - 6:10 pm, Tue, 28 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us