Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯೊಬ್ಬಳ ಸಾವಿನಿಂದ ರೊಚ್ಚಿಗೆದ್ದ ಗೀತಂ ವಿವಿ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಮೇಲೆ ಕಲ್ಲು ತೂರಾಟ

ಹಸೀನಾ ಅಕಸ್ಮಿಕವಾಗಿ ಬಿದ್ದು ಸತ್ತಿಲ್ಲ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಾದಿಸುತ್ತಿರುವ ವಿದ್ಯಾರ್ಥಿಗಳ ಗುಂಪೊಂದು ಹಾಸ್ಟೆಲ್ ನಲ್ಲಿ ದಾಂಧಲೆ ನಡೆಸಿ ಕಿಟಿಕಿ ಗಾಜುಗಳನ್ನು ಒಡೆದುಹಾಕಿದ್ದಾರೆ ಅಲ್ಲಿದ್ದ ಬೇರೆ ವಸ್ತುಗಳನ್ನು ಕೂಡ ನಾಶಮಾಡಿದ್ದಾರೆ.

ವಿದ್ಯಾರ್ಥಿನಿಯೊಬ್ಬಳ ಸಾವಿನಿಂದ ರೊಚ್ಚಿಗೆದ್ದ ಗೀತಂ ವಿವಿ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಮೇಲೆ ಕಲ್ಲು ತೂರಾಟ
ವಿದ್ಯಾರ್ಥಿಗಳಿಂದ ಕಲ್ಲು ತೂರಾಟ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Apr 28, 2022 | 5:55 PM

ಬೆಂಗಳೂರು: ಬುಧವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ (Gitam University) ಹಾಸ್ಟಲ್ ಕ್ಯಾಂಪಸ್ ನಲ್ಲಿ ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಓದುತ್ತಿದ್ದ ಉಗಾಂಡ ಮೂಲದ (Uganda origin) 24-ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು 6ನೇ ಮಹಡಿಯಿಂದ ಜಾರಿ ಬಿದ್ದು ಸಾವನನ್ನಪ್ಪಿದ ಬಳಿಕ ಅಲ್ಲಿರುವ ಇತರ ವಿದ್ಯಾರ್ಥಿಗಳು ಹಿಂಸಾಚಾರಕ್ಕಿಳಿದು ಹಾಸ್ಟೆಲ್ ಮೇಲೆ ಕಲ್ಲು ತೂರಾಟ ನಡೆಸಿದರು. ದಾಂಧಲೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸ್ ಲಾಠಿ ಚಾರ್ಜ್ ನಡೆಸಬೇಕಾಯಿತು. ನತದೃಷ್ಟ ವಿದ್ಯಾರ್ಥಿನಿಯನ್ನು ಹಸೀನಾ (Haseena) ಎಂದು ಗುರುತಿಸಲಾಗಿದೆ.

ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಬುಧವಾರ ರಾತ್ರಿ ಛಾವಣಿ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಹೋಗಿದ್ದ ಹಸೀನಾ ಒಂದು ಬಟ್ಟೆ ಪಕ್ಕದ ಕಟ್ಟಡದ ಅಸ್ಬೆಸ್ಟಸ್ ಶೀಟಿನ ಮೇಲೆ ಬಿದ್ದಿರುವುದನ್ನು ಕಂಡು ಅದನ್ನು ಎತ್ತಿಕೊಳ್ಳುವ ಪ್ರಯತ್ನದಲ್ಲಿ ಜಾರಿ ಬಿದ್ದುಬಿಟ್ಟಿದ್ದಾಳೆ. 6 ನೇ ಮಹಡಿಯಿಂದ ಆಕೆ 1 ನೇ ಮಹಡಿ ಮೇಲೆ ಬಿದ್ದಿದ್ದಾಳೆಂದು ವರದಿಯಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿನ ವೈದ್ಯರು ಅದಾಗಲೇ ಸತ್ತಿರುವಳೆಂದು ಘೋಷಿಸಿದರು.

ಹಸೀನಾ ಅಕಸ್ಮಿಕವಾಗಿ ಬಿದ್ದು ಸತ್ತಿಲ್ಲ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಾದಿಸುತ್ತಿರುವ ವಿದ್ಯಾರ್ಥಿಗಳ ಗುಂಪೊಂದು ಹಾಸ್ಟೆಲ್ ನಲ್ಲಿ ದಾಂಧಲೆ ನಡೆಸಿ ಕಿಟಿಕಿ ಗಾಜುಗಳನ್ನು ಒಡೆದುಹಾಕಿದ್ದಾರೆ ಅಲ್ಲಿದ್ದ ಬೇರೆ ವಸ್ತುಗಳನ್ನು ಕೂಡ ನಾಶಮಾಡಿದ್ದಾರೆ. ಪೊಲೀಸರು ಅವರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದರಾದರೂ ಅವರು ಕೇಳದೆ ದಾಂಧಲೆ ಮುಂದುವರಿಸಿದಾಗ ಲಾಠಿ ಪ್ರಹಾರ ಮಾಡಿದ್ದಾರೆ. ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಓಡುತ್ತಿರುವುದು ವಿಡಿಯೋನಲ್ಲಿ ಕಾಣುತ್ತಿದೆ.

ಇದನ್ನೂ ಓದಿ:  ಗೀತಂ ವಿವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ವಿದ್ಯಾರ್ಥಿಗಳ ನಡುವೆ ನಡೆದ ಐಪಿಎಲ್ ಗಲಾಟೆಯೇ ಸಾವಿಗೆ ಕಾರಣವಾಯ್ತ?

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್