AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯೊಬ್ಬಳ ಸಾವಿನಿಂದ ರೊಚ್ಚಿಗೆದ್ದ ಗೀತಂ ವಿವಿ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಮೇಲೆ ಕಲ್ಲು ತೂರಾಟ

ಹಸೀನಾ ಅಕಸ್ಮಿಕವಾಗಿ ಬಿದ್ದು ಸತ್ತಿಲ್ಲ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಾದಿಸುತ್ತಿರುವ ವಿದ್ಯಾರ್ಥಿಗಳ ಗುಂಪೊಂದು ಹಾಸ್ಟೆಲ್ ನಲ್ಲಿ ದಾಂಧಲೆ ನಡೆಸಿ ಕಿಟಿಕಿ ಗಾಜುಗಳನ್ನು ಒಡೆದುಹಾಕಿದ್ದಾರೆ ಅಲ್ಲಿದ್ದ ಬೇರೆ ವಸ್ತುಗಳನ್ನು ಕೂಡ ನಾಶಮಾಡಿದ್ದಾರೆ.

ವಿದ್ಯಾರ್ಥಿನಿಯೊಬ್ಬಳ ಸಾವಿನಿಂದ ರೊಚ್ಚಿಗೆದ್ದ ಗೀತಂ ವಿವಿ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಮೇಲೆ ಕಲ್ಲು ತೂರಾಟ
ವಿದ್ಯಾರ್ಥಿಗಳಿಂದ ಕಲ್ಲು ತೂರಾಟ
TV9 Web
| Edited By: |

Updated on: Apr 28, 2022 | 5:55 PM

Share

ಬೆಂಗಳೂರು: ಬುಧವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ (Gitam University) ಹಾಸ್ಟಲ್ ಕ್ಯಾಂಪಸ್ ನಲ್ಲಿ ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಓದುತ್ತಿದ್ದ ಉಗಾಂಡ ಮೂಲದ (Uganda origin) 24-ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು 6ನೇ ಮಹಡಿಯಿಂದ ಜಾರಿ ಬಿದ್ದು ಸಾವನನ್ನಪ್ಪಿದ ಬಳಿಕ ಅಲ್ಲಿರುವ ಇತರ ವಿದ್ಯಾರ್ಥಿಗಳು ಹಿಂಸಾಚಾರಕ್ಕಿಳಿದು ಹಾಸ್ಟೆಲ್ ಮೇಲೆ ಕಲ್ಲು ತೂರಾಟ ನಡೆಸಿದರು. ದಾಂಧಲೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸ್ ಲಾಠಿ ಚಾರ್ಜ್ ನಡೆಸಬೇಕಾಯಿತು. ನತದೃಷ್ಟ ವಿದ್ಯಾರ್ಥಿನಿಯನ್ನು ಹಸೀನಾ (Haseena) ಎಂದು ಗುರುತಿಸಲಾಗಿದೆ.

ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಬುಧವಾರ ರಾತ್ರಿ ಛಾವಣಿ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಹೋಗಿದ್ದ ಹಸೀನಾ ಒಂದು ಬಟ್ಟೆ ಪಕ್ಕದ ಕಟ್ಟಡದ ಅಸ್ಬೆಸ್ಟಸ್ ಶೀಟಿನ ಮೇಲೆ ಬಿದ್ದಿರುವುದನ್ನು ಕಂಡು ಅದನ್ನು ಎತ್ತಿಕೊಳ್ಳುವ ಪ್ರಯತ್ನದಲ್ಲಿ ಜಾರಿ ಬಿದ್ದುಬಿಟ್ಟಿದ್ದಾಳೆ. 6 ನೇ ಮಹಡಿಯಿಂದ ಆಕೆ 1 ನೇ ಮಹಡಿ ಮೇಲೆ ಬಿದ್ದಿದ್ದಾಳೆಂದು ವರದಿಯಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತಾದರೂ ಅಲ್ಲಿನ ವೈದ್ಯರು ಅದಾಗಲೇ ಸತ್ತಿರುವಳೆಂದು ಘೋಷಿಸಿದರು.

ಹಸೀನಾ ಅಕಸ್ಮಿಕವಾಗಿ ಬಿದ್ದು ಸತ್ತಿಲ್ಲ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಾದಿಸುತ್ತಿರುವ ವಿದ್ಯಾರ್ಥಿಗಳ ಗುಂಪೊಂದು ಹಾಸ್ಟೆಲ್ ನಲ್ಲಿ ದಾಂಧಲೆ ನಡೆಸಿ ಕಿಟಿಕಿ ಗಾಜುಗಳನ್ನು ಒಡೆದುಹಾಕಿದ್ದಾರೆ ಅಲ್ಲಿದ್ದ ಬೇರೆ ವಸ್ತುಗಳನ್ನು ಕೂಡ ನಾಶಮಾಡಿದ್ದಾರೆ. ಪೊಲೀಸರು ಅವರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದರಾದರೂ ಅವರು ಕೇಳದೆ ದಾಂಧಲೆ ಮುಂದುವರಿಸಿದಾಗ ಲಾಠಿ ಪ್ರಹಾರ ಮಾಡಿದ್ದಾರೆ. ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಓಡುತ್ತಿರುವುದು ವಿಡಿಯೋನಲ್ಲಿ ಕಾಣುತ್ತಿದೆ.

ಇದನ್ನೂ ಓದಿ:  ಗೀತಂ ವಿವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ವಿದ್ಯಾರ್ಥಿಗಳ ನಡುವೆ ನಡೆದ ಐಪಿಎಲ್ ಗಲಾಟೆಯೇ ಸಾವಿಗೆ ಕಾರಣವಾಯ್ತ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?