AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತಿಗೆ ಕೈ ಹಾಕಿ ಸರಗಳ್ಳತನ, ವೃದ್ಧೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್​ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ. ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ ತರಲು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ಹಿಂಬದಿಯಿಂದ ಬಂದು ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ […]

ಕತ್ತಿಗೆ ಕೈ ಹಾಕಿ ಸರಗಳ್ಳತನ, ವೃದ್ಧೆ ಆಸ್ಪತ್ರೆಗೆ ದಾಖಲು
ಆಯೇಷಾ ಬಾನು
|

Updated on: Oct 27, 2020 | 7:07 AM

Share

ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್​ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ.

ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ ತರಲು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ಹಿಂಬದಿಯಿಂದ ಬಂದು ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ ಕಸಿದು ಕಳ್ಳ ಪರಾರಿಯಾಗಿದ್ದಾನೆ. ಆರೋಪಿ ಚಿನ್ನದ ಸರ ಕಸಿದ ರಭಸಕ್ಕೆ ವೃದ್ಧೆ ರಸ್ತೆ ಮೇಲೆ ಬಿದ್ದಿದ್ದಾರೆ.

ಈ ಪರಿಣಾಮ ವೃದ್ಧೆಯ ಮೊಣಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಗಾಯಾಳು ವೃದ್ಧೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ದುಷ್ಕೃತ್ಯ ಏರಿಯಾದ ಸಿಸಿಕ್ಯಾಮಾರದಲ್ಲಿ ಸೆರೆಯಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!