AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿಯೂ ಚಲಾವಣೆಯಲ್ಲಿತ್ತು ಚಿನ್ನದ ನಾಣ್ಯ, ಅದೀಗ ಹೊನ್ನಾಳಿಯಲ್ಲಿ ಪತ್ತೆಯಾಯ್ತು!

ಈ ಬಂಗಾರ ನಾಣ್ಯಗಳು ಮೈಸೂರು ಸಂಸ್ಥಾನದ ಮೂರನೇ ಕೃಷ್ಣರಾಜ ಒಡೆಯರ ಕಾಲದಲ್ಲಿ ಅಂದ್ರೆ ಕ್ರಿ.ಶ. 1810-1868 ಚಲಾವಣೆಯಲ್ಲಿ ಇತ್ತು ಎಂದು ಗೊತ್ತಾಗಿದೆ. ನಾಣ್ಯದ ಒಂದು ಮುಖದಲ್ಲಿ ಶಿವ ಮತ್ತು ವಾರ್ವತಿ ಕುಳಿತಿರುವ ಮುದ್ರಿಕೆ ಇದೆ.

ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿಯೂ ಚಲಾವಣೆಯಲ್ಲಿತ್ತು ಚಿನ್ನದ ನಾಣ್ಯ, ಅದೀಗ ಹೊನ್ನಾಳಿಯಲ್ಲಿ ಪತ್ತೆಯಾಯ್ತು!
ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿ ಇದ್ದ ಚಿನ್ನದ ನಾಣ್ಯ
ಸಾಧು ಶ್ರೀನಾಥ್​
| Edited By: |

Updated on: Feb 25, 2021 | 10:25 AM

Share

ದಾವಣಗೆರೆ: ಕರ್ನಾಟಕದ ಇತಿಹಾಸದಲ್ಲಿ ವಿಜಯನಗರ ಸಾಮ್ರಾಜ್ಯದ ಅಂದ್ರೆ ಅದೊಂದು ಸಮೃದ್ಧ ಕಾಲ ಎಂದು ಹೇಳಲಾಗುತ್ತಿದೆ. ಕಾರಣ ಆ ಕಾಲದಲ್ಲಿ ಮುತ್ತು ರತ್ನಗಳನ್ನ ಬೀದಿ ಬೀದಿಗಳಲ್ಲಿ ಅಳೆಯಲಾಗುತ್ತಿತ್ತು ಎಂಬುದು ಇತಿಹಾಸದಿಂದ ಗೊತ್ತಾಗುತ್ತದೆ‌‌. ಅದೇ ರೀತಿ ಮೈಸೂರು ಅರಸರ ಕಾಲದಲ್ಲಿಯೂ ಕೂಡಾ ಚಿನ್ನದ ನಾಣ್ಯಗಳು ಚಲಾವಣೆಯಲ್ಲಿ ಇದ್ದವು ಎಂಬುದಾಗಿ ಗೊತ್ತಾಗುತ್ತದೆ.ಇಂತಹ ಚಿನ್ನದ ನಾಣ್ಯ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದಲ್ಲಿ ಪತ್ತೆಯಾಗಿದೆ. ಒಡೆಯರ ಹತ್ತೂರು ಗ್ರಾಮದ ಹೊಸಮನೆ ವಂಶಸ್ಥರಿಗೆ ಅರಸರಿಂದ ಪಾರಂಪರಿಕವಾಗಿ ಬಂದಿರುವ ನಾಣ್ಯ ಇದಾಗಿದೆ. ಈ ಚಿನ್ನದ ನಾಣ್ಯಕ್ಕೆ ಮನೆಯಲ್ಲಿ ಪೂಜೆ ಮಾಡಲಾಗುತ್ತಿದೆ.

ಈ ಬಂಗಾರ ನಾಣ್ಯಗಳು ಮೈಸೂರು ಸಂಸ್ಥಾನದ ಮೂರನೇ ಕೃಷ್ಣರಾಜ ಒಡೆಯರ ಕಾಲದಲ್ಲಿ ಅಂದ್ರೆ ಕ್ರಿ.ಶ. 1810-1868 ಚಲಾವಣೆಯಲ್ಲಿ ಇತ್ತು ಎಂದು ಗೊತ್ತಾಗಿದೆ. ನಾಣ್ಯದ ಒಂದು ಮುಖದಲ್ಲಿ ಶಿವ ಮತ್ತು ವಾರ್ವತಿ ಕುಳಿತಿರುವ ಮುದ್ರಿಕೆ ಇದೆ. ಇನ್ನೊಂದು‌ ಮುಖದಲ್ಲಿ ದೇವನಾಗರಿಕ ಲಿಪಿಯಲ್ಲಿ ಶ್ರೀಕೃಷ್ಣ ರಾಜ ಎಂದು ಬರೆಯಲಾಗಿದೆ. 3.34 ಗ್ರಾಂ ತೂಕದ ಈ ನಾಣ್ಯ 12.02 ಮಿ.ಮೀ ಸುತ್ತಳತೆ ಹೊಂದಿದೆ. ಇತಿಹಾಸ ತಜ್ಞ ಪ್ರವೀಣ ದೊಡ್ಡಗೌಡ್ರ ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: ವಾಣಿ ವಿಲಾಸ್ ಕಾಲೇಜು ಬಳಿ ಪಾಯ ತೆಗೆಯುವ ವೇಳೆ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆ

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?