AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಮತ್ತೆ ಗಗನಕ್ಕೆ, ಬೆಳ್ಳಿ ಬೆಲೆಯೂ ಏರಿದೆ.. ಬೆಂಗಳೂರಲ್ಲಿ ಚಿನ್ನದ ದರ ಎಷ್ಟಿದೆ ಗೊತ್ತಾ?

Gold Rate: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದ್ದು, 22 ಕ್ಯಾರೆಟ್​ನ 10 ಗ್ರಾಂ ಚಿನ್ನ 44,290 ರೂ. ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,890 ರೂ. ಗೆ ತಲುಪಿದೆ.

Gold Rate: ಚಿನ್ನದ ಬೆಲೆ ಮತ್ತೆ ಗಗನಕ್ಕೆ, ಬೆಳ್ಳಿ ಬೆಲೆಯೂ ಏರಿದೆ.. ಬೆಂಗಳೂರಲ್ಲಿ ಚಿನ್ನದ ದರ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: |

Updated on:Mar 05, 2021 | 6:41 PM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳ ಹಿಂದೆ ಇಳಿಕೆಯತ್ತ ಮುಖ ಮಾಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಏರಿಕೆಯಾಗಿದೆ. ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,000 ರೂ. ದಾಟಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದ್ದು, 22 ಕ್ಯಾರೆಟ್​ನ 10 ಗ್ರಾಂ ಚಿನ್ನ 44,290 ರೂ. ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,890 ರೂ. ಗೆ ತಲುಪಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, 10 ಗ್ರಾಂ ಬೆಳ್ಳಿ ಬೆಲೆ ಇಂದು 710 ರೂ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ, ಮಧುರೈ, ಜೈಪುರ, ಅಹಮದಾಬಾದ್, ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ನಿನ್ನೆ 695 ಇದ್ದ 10 ಗ್ರಾಂ ಬೆಳ್ಳಿ ಬೆಲೆ ಇಂದು 710 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಬೆಳ್ಳಿಯ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಇಂದು 710 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 740 ರೂ. ದಾಟಿದೆ.

ಕೊರೊನಾ ಮಹಾಮಾರಿಯ ನಂತರ ಎಲ್ಲಾ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಹಾಗಾಗಿ ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

ಇಂದಿನ ಚಿನ್ನದ ದರ..

ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

Published On - 6:36 pm, Tue, 16 February 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ