AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಮತ್ತೆ ಗಗನಕ್ಕೆ, ಬೆಳ್ಳಿ ಬೆಲೆಯೂ ಏರಿದೆ.. ಬೆಂಗಳೂರಲ್ಲಿ ಚಿನ್ನದ ದರ ಎಷ್ಟಿದೆ ಗೊತ್ತಾ?

Gold Rate: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದ್ದು, 22 ಕ್ಯಾರೆಟ್​ನ 10 ಗ್ರಾಂ ಚಿನ್ನ 44,290 ರೂ. ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,890 ರೂ. ಗೆ ತಲುಪಿದೆ.

Gold Rate: ಚಿನ್ನದ ಬೆಲೆ ಮತ್ತೆ ಗಗನಕ್ಕೆ, ಬೆಳ್ಳಿ ಬೆಲೆಯೂ ಏರಿದೆ.. ಬೆಂಗಳೂರಲ್ಲಿ ಚಿನ್ನದ ದರ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: |

Updated on:Mar 05, 2021 | 6:41 PM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳ ಹಿಂದೆ ಇಳಿಕೆಯತ್ತ ಮುಖ ಮಾಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಏರಿಕೆಯಾಗಿದೆ. ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,000 ರೂ. ದಾಟಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದ್ದು, 22 ಕ್ಯಾರೆಟ್​ನ 10 ಗ್ರಾಂ ಚಿನ್ನ 44,290 ರೂ. ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,890 ರೂ. ಗೆ ತಲುಪಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, 10 ಗ್ರಾಂ ಬೆಳ್ಳಿ ಬೆಲೆ ಇಂದು 710 ರೂ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ, ಮಧುರೈ, ಜೈಪುರ, ಅಹಮದಾಬಾದ್, ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ನಿನ್ನೆ 695 ಇದ್ದ 10 ಗ್ರಾಂ ಬೆಳ್ಳಿ ಬೆಲೆ ಇಂದು 710 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಬೆಳ್ಳಿಯ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಇಂದು 710 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 740 ರೂ. ದಾಟಿದೆ.

ಕೊರೊನಾ ಮಹಾಮಾರಿಯ ನಂತರ ಎಲ್ಲಾ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಹಾಗಾಗಿ ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

ಇಂದಿನ ಚಿನ್ನದ ದರ..

ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

Published On - 6:36 pm, Tue, 16 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್