ಗ್ರಾಹಕರಂತೆ ಬಂದು.. 59 ಗ್ರಾಂ ಚಿನ್ನಾಭರಣ ಕದ್ದು ಎಸ್ಕೇಪ್ ಆದ ಚಾಲಾಕಿಗಳು, ಯಾವೂರಲ್ಲಿ?
ಧಾರವಾಡ: ಗ್ರಾಹಕರ ಸೋಗಿನಲ್ಲಿ ಬಂದ ಖದೀಮರು ಹುಬ್ಬಳ್ಳಿಯ ಸ್ಟೇಷನ್ ರಸ್ತೆಯಲ್ಲಿರುವ ಆಭರಣ ಮಳಿಗೆ ಒಂದರಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಕಳ್ಳರು ನಗರದ ಪ್ರತಿಷ್ಠಿತ ಕಲ್ಯಾಣ್ ಜ್ಯುವೆಲ್ಲರಿ ಮಳಿಗೆಯಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 59 ಗ್ರಾಂನ ಚಿನ್ನಾಭರಣ ಕದ್ದಿದ್ದಾರೆ ಎಂದು ತಿಳಿದುಬಂದಿದೆ. ಚಿನ್ನ ಕೊಳ್ಳಲು ಗ್ರಾಹಕರಾಗಿ ಆಭರಣ ಮಳಿಗೆಗೆ ಬಂದ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. 40 ವರ್ಷದ ಇಬ್ಬರು ವ್ಯಕ್ತಿಗಳು ಸೇಲ್ಸ್ಮನ್ನ ಗಮನ ಬೇರೆಡೆ ಸೆಳೆದು 59 ಗ್ರಾಂ ಚಿನ್ನಾಭರಣ […]

ಧಾರವಾಡ: ಗ್ರಾಹಕರ ಸೋಗಿನಲ್ಲಿ ಬಂದ ಖದೀಮರು ಹುಬ್ಬಳ್ಳಿಯ ಸ್ಟೇಷನ್ ರಸ್ತೆಯಲ್ಲಿರುವ ಆಭರಣ ಮಳಿಗೆ ಒಂದರಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಕಳ್ಳರು ನಗರದ ಪ್ರತಿಷ್ಠಿತ ಕಲ್ಯಾಣ್ ಜ್ಯುವೆಲ್ಲರಿ ಮಳಿಗೆಯಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 59 ಗ್ರಾಂನ ಚಿನ್ನಾಭರಣ ಕದ್ದಿದ್ದಾರೆ ಎಂದು ತಿಳಿದುಬಂದಿದೆ.
ಚಿನ್ನ ಕೊಳ್ಳಲು ಗ್ರಾಹಕರಾಗಿ ಆಭರಣ ಮಳಿಗೆಗೆ ಬಂದ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. 40 ವರ್ಷದ ಇಬ್ಬರು ವ್ಯಕ್ತಿಗಳು ಸೇಲ್ಸ್ಮನ್ನ ಗಮನ ಬೇರೆಡೆ ಸೆಳೆದು 59 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Published On - 1:47 pm, Sun, 13 September 20




