AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Search ಸ್ಥಳೀಯ ಭಾಷೆಯಲ್ಲಿ ಹುಡುಕಾಟಕ್ಕೆ ಹೊಸ ಅನ್ವೇಷಣೆ ಮಾಡಿದ ಗೂಗಲ್.. ಆದ್ರೆ ಕನ್ನಡಕ್ಕಿಲ್ಲ ಆದ್ಯತೆ!

ಮುಂದಿನ ದಿನಗಳಲ್ಲಿ ನೀವು ಯಾವುದಾದರೂ ವಿಚಾರವನ್ನು ಇಂಗ್ಲಿಷ್​ನಲ್ಲಿ ಸರ್ಚ್​ ಮಾಡಿದಿರಿ ಎಂದಿಟ್ಟುಕೊಳ್ಳಿ. ಅಗ ಅದಕ್ಕೆ ಸಂಬಂಧಿಸಿದ ಸ್ಥಳೀಯ ಭಾಷೆಯ ವಿಚಾರಗಳನ್ನೂ ಗೂಗಲ್ ತೋರಿಸಲಿದೆ.

Google Search ಸ್ಥಳೀಯ ಭಾಷೆಯಲ್ಲಿ ಹುಡುಕಾಟಕ್ಕೆ ಹೊಸ ಅನ್ವೇಷಣೆ ಮಾಡಿದ ಗೂಗಲ್.. ಆದ್ರೆ ಕನ್ನಡಕ್ಕಿಲ್ಲ ಆದ್ಯತೆ!
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 6:06 PM

Share

ಬಳಕೆದಾರರಿಗೆ ಅನುಕೂಲ ಮಾಡಿಕೊಡಲು ಸದಾ ಹೊಸ ಹೊಸ ಅನ್ವೇಷಣೆಗಳನ್ನು ಗೂಗಲ್​ ಪರಿಚಯಿಸುತ್ತಲೇ ಇದೆ. ಈಗ ಗೂಗಲ್ ಸ್ಥಳೀಯ ಭಾಷೆಗೆ ಒತ್ತು ನೀಡಲು ಮುಂದಾಗಿದೆ. ಗೂಗಲ್​​ ಸರ್ಚ್​, ಗೂಗಲ್​ ಅಸಿಸ್ಟಂಟ್​, ಗೂಗಲ್ ಮ್ಯಾಪ್​, ಗೂಗಲ್​ ಲೆನ್ಸ್​​ನಲ್ಲಿ ನೀವು ಭಾರತದ ಸ್ಥಳೀಯ ಭಾಷೆಯನ್ನು ಬಳಕೆ ಮಾಡಿ ಹುಡುಕುವ ಅವಕಾಶವನ್ನು ಕಲ್ಪಿಸಿದೆ.

ನೀವು ಗೂಗಲ್​ನಲ್ಲಿ ಟೈಪ್ ಮಾಡಿದ ಯಾವುದೇ ಇಂಗ್ಲಿಷ್​ ಪ್ರಶ್ನೆಯನ್ನು ಹಿಂದಿಗೆ ಬದಲಾಯಿಸಲು ಗೂಗಲ್ ಬಳಕೆದಾರರಿಗೆ ಸಹಾಯ ಮಾಡುತ್ತಿದೆ. ಈಗ ಅದೇ ಸೇವೆ ಭಾರತದ ನಾಲ್ಕು ಸ್ಥಳೀಯ ಭಾಷೆಗಳಿಗೆ ವಿಸ್ತರಣೆ ಆಗಿದೆ. ತಮಿಳು, ತೆಲುಗು, ಬೆಂಗಾಲಿ ಹಾಗೂ ಮರಾಠಿ ಭಾಷೆಗಳನ್ನು ಗೂಗಲ್​ ಸೇರ್ಪಡೆ ಮಾಡುತ್ತಿದೆ. ಹೀಗಾಗಿ, ಈ ನಾಲ್ಕು ಭಾಷೆಯವರಿಗೆ ಸ್ಥಳೀಯ ಭಾಷೆಯಲ್ಲಿ ಗೂಗಲ್​ ಸರ್ಚ್​ ಮಾಡಲು ಸಹಕಾರಿ ಆಗಲಿದೆ.

ಮುಂದಿನ ದಿನಗಳಲ್ಲಿ ನೀವು ಯಾವುದಾದರೂ ವಿಚಾರವನ್ನು ಇಂಗ್ಲಿಷ್​ನಲ್ಲಿ ಸರ್ಚ್​ ಮಾಡಿದಿರಿ ಎಂದಿಟ್ಟುಕೊಳ್ಳಿ. ಆಗ ಅದಕ್ಕೆ ಸಂಬಂಧಿಸಿದ ಸ್ಥಳೀಯ ಭಾಷೆಯ ವಿಚಾರಗಳನ್ನೂ ಗೂಗಲ್ ತೋರಿಸಲಿದೆ. ಸ್ಥಳೀಯ ಭಾಷೆಯಲ್ಲಿ ಸರ್ಚ್​ ಮಾಡಿದರೆ ನಿಮಗೆ ಇಂಗ್ಲಿಷ್​ನಲ್ಲೂ ಫಲಿತಾಂಶ ದೊರೆಯಲಿದೆ.

ನೀವು ಗೂಗಲ್​ನಲ್ಲಿ ಮೂರು ಅಥವಾ ಮೂರಕ್ಕಿಂತ ಹೆಚ್ಚು ಬಾರಿ ಸ್ಥಳೀಯ ಭಾಷೆಯನ್ನು ಬಳಕೆ ಮಾಡಿ ಸರ್ಚ್​ ಮಾಡಿದರೆ, ಗೂಗಲ್​ ಅದನ್ನು ಪಟ್ಟಿ ಮಾಡಿಕೊಳ್ಳಲಿದೆ. ಮುಂದಿನ ದಿನಗಳಲ್ಲಿ ಗೂಗಲ್ ಅದೇ ಭಾಷೆಯಲ್ಲಿ ಹೆಚ್ಚು ಸರ್ಚ್​ ರಿಸಲ್ಟ್​ ತೋರಿಸಲಿದೆ.

ಗೂಗಲ್​ ಮ್ಯಾಪ್​ನಲ್ಲಿ ಸ್ಥಳೀಯ ಭಾಷೆ ಗೂಗಲ್​ ಮ್ಯಾಪ್​ನಲ್ಲೂ ಸ್ಥಳೀಯ ಭಾಷೆ ಬಳಕೆ ಮಾಡೋಕೆ ಗೂಗಲ್​ ಹೆಚ್ಚು ಆದ್ಯತೆ ನೀಡುತ್ತಿದೆ. ಸದ್ಯ, 9 ಭಾರತೀಯ ಭಾಷೆಗಳಲ್ಲಿ ಗೂಗಲ್​ ಮ್ಯಾಪ್​ ಸೇವೆ ಒದಗಿಸುತ್ತಿದೆ. ಗೂಗಲ್​ ಮ್ಯಾಪ್​ ಸೆಟ್ಟಿಂಗ್​ಗೆ ತೆರಳಿ ಅಲ್ಲಿ, ನಿಮಗೆ ಬೇಕಾದ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಮೂಲಕ ನೀವು ಆಯ್ಕೆ ಮಾಡಿಕೊಂಡ ಭಾಷೆಯಲ್ಲೇ ಸಹಾಯ ಪಡೆಯಬಹುದು.

ಕನ್ನಡಕ್ಕಿಲ್ಲ ಆದ್ಯತೆ ಈ ಬಾರಿ ಕನ್ನಡಕ್ಕೆ ಗೂಗಲ್​ ಹೆಚ್ಚು ಆದ್ಯತೆ ನೀಡಿಲ್ಲ. ಈ ಕಾರಣಕ್ಕೆ ಹೊಸ ಆವಿಷ್ಕಾರದಲ್ಲಿ ಕನ್ನಡ ಸೇರ್ಪಡೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಕನ್ನಡವನ್ನು ಸೇರ್ಪಡೆ ಮಾಡುವ ಸಾಧ್ಯತೆ ಇದೆ.

ಗೂಗಲ್​ ಉದ್ಯೋಗಿಗಳಿಗೆ ಪತ್ರ​ ಬರೆದ ಸುಂದರ್​ ಪಿಚೈ; ಆ ಇ-ಮೇಲ್​ನಲ್ಲೇನಿದೆ?

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ