AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ ಉದ್ಯೋಗಿಗಳಿಗೆ ಪತ್ರ​ ಬರೆದ ಸುಂದರ್​ ಪಿಚೈ; ಆ ಇ-ಮೇಲ್​ನಲ್ಲೇನಿದೆ?

ಸ್ಥಳೀಯ ಆಡಳಿತ ಸಂಸ್ಥೆಗಳು ಅವಕಾಶ ನೀಡಿದರೆ ನಾವು ನಮ್ಮ ಉದ್ಯೋಗಿಗಳನ್ನು ಮರಳಿ ಕಚೇರಿಗೆ ಕರೆಸಿಕೊಳ್ಳುತ್ತೇವೆ. ವಾಲೆಂಟರಿ ವರ್ಕ್​ ಫ್ರಮ್ ​ಹೋಂ ಆಯ್ಕೆ ಸೆ.1ರವರೆಗೆ ಮುಂದುವರಿಯಲಿದೆ ಎಂದು ಬರೆದಿದ್ದಾರೆ.

ಗೂಗಲ್​ ಉದ್ಯೋಗಿಗಳಿಗೆ ಪತ್ರ​ ಬರೆದ ಸುಂದರ್​ ಪಿಚೈ; ಆ ಇ-ಮೇಲ್​ನಲ್ಲೇನಿದೆ?
ಸುಂದರ್ ಪಿಚೈ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 8:02 PM

Share

ಬೆಂಗಳೂರು: ಗೂಗಲ್​ ಮುಖ್ಯಸ್ಥ ಸುಂದರ್ ಪಿಚೈ ಈಗ ತಮ್ಮ ಉದ್ಯೋಗಿಗಳಿಗೆ ಪ್ರಮುಖ ಇಮೇಲ್​ ಸಂದೇಶವೊಂದನ್ನು ರವಾನಿಸಿದ್ದಾರೆ. ಈ ಮೇಲ್​ನಲ್ಲಿ ಮನೆಯಿಂದಲೇ ಕೆಲಸ ಮಾಡುವ ಆಯ್ಕೆಯನ್ನು ಮುಂದುವರಿಸುವ ಬಗ್ಗೆ ತಿಳಿಸಿದ್ದಾರೆ.

ಡಿ.14ರಂದು ರವಾನಿಸಿರುವ ಪತ್ರದಲ್ಲಿ ಅವರು ಸೆಪ್ಟೆಂಬರ್ 2021ರವರೆಗೆ ವರ್ಕ್​ ಫ್ರಮ್ ಹೋಂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸ್ಥಳೀಯ ಆಡಳಿತ ಸಂಸ್ಥೆಗಳು ಅವಕಾಶ ನೀಡಿದರೆ ನಾವು ನಮ್ಮ ಉದ್ಯೋಗಿಗಳನ್ನು ಮರಳಿ ಕಚೇರಿಗೆ ಕರೆಸಿಕೊಳ್ಳುತ್ತೇವೆ. ವಾಲೆಂಟರಿ ವರ್ಕ್​ ಫ್ರಮ್ ​ಹೋಂ ಆಯ್ಕೆ ಸೆ.1ರವರೆಗೆ ಮುಂದುವರಿಯಲಿದೆ ಎಂದು ಬರೆದಿದ್ದಾರೆ.

ಈಗಾಗಲೇ ಟ್ವಿಟರ್​, ಫೇಸ್​ಬುಕ್​ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಕಾಯಂ ಆಗಿ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿವೆ. ಆದರೆ, ಗೂಗಲ್​ನಲ್ಲಿ ಆ ರೀತಿ ಯೋಜನೆ ತರುವ ಯಾವುದೇ ಆಲೋಚನೆ ಇಲ್ಲ ಎಂದು ಪಿಚೈ ಸ್ಪಷ್ಟನೆ ನೀಡಿದ್ದಾರೆ.

ಕಚೇರಿಯಿಂದ ಕೆಲಸ ಮಾಡುವುದರಿಂದ ಸಾಕಷ್ಟು ಲಾಭಗಳಿವೆ. ಆದರೆ, ಕೊರೊನಾ ತಂದ ತೊಂದರೆಯಿಂದ ನಾವು ಮನೆಯಿಂದಲೇ ಕೆಲಸ ಮಾಡುವ ಅನಿವಾರ್ಯೆತ ಬಂದೊದಗಿದೆ. ಆದಷ್ಟು ಬೇಗ ನಾವು ಉದ್ಯೋಗಿಗಳನ್ನು ಕಚೇರಿಗೆ ಕರೆಸಿಕೊಳ್ಳುವ ಆಲೋಚನೆಯಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಬಹುತೇಕ ಐಟಿ ಕಂಪೆನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿವೆ. ಕೆಲ ಸಂಸ್ಥೆಗಳು ಇದನ್ನು ಈಗಾಗಲೇ 2021ರ ಅಂತ್ಯದವರೆಗೆ ವಿಸ್ತರಣೆ ಮಾಡಿವೆ. ಇನ್ನೂ ಕೆಲ ಸಂಸ್ಥೆಗಳು ಶಾಶ್ವತವಾಗಿ ವರ್ಕ್​ ಫ್ರಮ್​ ಹೋಂ ಆಯ್ಕೆ ನೀಡಿವೆ.

ಲೊಕೇಶನ್ ಮಾಹಿತಿ ಸೋರಿಕೆಗೆ ಆಪಲ್-ಗೂಗಲ್ ಕಡಿವಾಣ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್