AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ ಉದ್ಯೋಗಿಗಳಿಗೆ ಪತ್ರ​ ಬರೆದ ಸುಂದರ್​ ಪಿಚೈ; ಆ ಇ-ಮೇಲ್​ನಲ್ಲೇನಿದೆ?

ಸ್ಥಳೀಯ ಆಡಳಿತ ಸಂಸ್ಥೆಗಳು ಅವಕಾಶ ನೀಡಿದರೆ ನಾವು ನಮ್ಮ ಉದ್ಯೋಗಿಗಳನ್ನು ಮರಳಿ ಕಚೇರಿಗೆ ಕರೆಸಿಕೊಳ್ಳುತ್ತೇವೆ. ವಾಲೆಂಟರಿ ವರ್ಕ್​ ಫ್ರಮ್ ​ಹೋಂ ಆಯ್ಕೆ ಸೆ.1ರವರೆಗೆ ಮುಂದುವರಿಯಲಿದೆ ಎಂದು ಬರೆದಿದ್ದಾರೆ.

ಗೂಗಲ್​ ಉದ್ಯೋಗಿಗಳಿಗೆ ಪತ್ರ​ ಬರೆದ ಸುಂದರ್​ ಪಿಚೈ; ಆ ಇ-ಮೇಲ್​ನಲ್ಲೇನಿದೆ?
ಸುಂದರ್ ಪಿಚೈ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 8:02 PM

Share

ಬೆಂಗಳೂರು: ಗೂಗಲ್​ ಮುಖ್ಯಸ್ಥ ಸುಂದರ್ ಪಿಚೈ ಈಗ ತಮ್ಮ ಉದ್ಯೋಗಿಗಳಿಗೆ ಪ್ರಮುಖ ಇಮೇಲ್​ ಸಂದೇಶವೊಂದನ್ನು ರವಾನಿಸಿದ್ದಾರೆ. ಈ ಮೇಲ್​ನಲ್ಲಿ ಮನೆಯಿಂದಲೇ ಕೆಲಸ ಮಾಡುವ ಆಯ್ಕೆಯನ್ನು ಮುಂದುವರಿಸುವ ಬಗ್ಗೆ ತಿಳಿಸಿದ್ದಾರೆ.

ಡಿ.14ರಂದು ರವಾನಿಸಿರುವ ಪತ್ರದಲ್ಲಿ ಅವರು ಸೆಪ್ಟೆಂಬರ್ 2021ರವರೆಗೆ ವರ್ಕ್​ ಫ್ರಮ್ ಹೋಂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸ್ಥಳೀಯ ಆಡಳಿತ ಸಂಸ್ಥೆಗಳು ಅವಕಾಶ ನೀಡಿದರೆ ನಾವು ನಮ್ಮ ಉದ್ಯೋಗಿಗಳನ್ನು ಮರಳಿ ಕಚೇರಿಗೆ ಕರೆಸಿಕೊಳ್ಳುತ್ತೇವೆ. ವಾಲೆಂಟರಿ ವರ್ಕ್​ ಫ್ರಮ್ ​ಹೋಂ ಆಯ್ಕೆ ಸೆ.1ರವರೆಗೆ ಮುಂದುವರಿಯಲಿದೆ ಎಂದು ಬರೆದಿದ್ದಾರೆ.

ಈಗಾಗಲೇ ಟ್ವಿಟರ್​, ಫೇಸ್​ಬುಕ್​ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಕಾಯಂ ಆಗಿ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿವೆ. ಆದರೆ, ಗೂಗಲ್​ನಲ್ಲಿ ಆ ರೀತಿ ಯೋಜನೆ ತರುವ ಯಾವುದೇ ಆಲೋಚನೆ ಇಲ್ಲ ಎಂದು ಪಿಚೈ ಸ್ಪಷ್ಟನೆ ನೀಡಿದ್ದಾರೆ.

ಕಚೇರಿಯಿಂದ ಕೆಲಸ ಮಾಡುವುದರಿಂದ ಸಾಕಷ್ಟು ಲಾಭಗಳಿವೆ. ಆದರೆ, ಕೊರೊನಾ ತಂದ ತೊಂದರೆಯಿಂದ ನಾವು ಮನೆಯಿಂದಲೇ ಕೆಲಸ ಮಾಡುವ ಅನಿವಾರ್ಯೆತ ಬಂದೊದಗಿದೆ. ಆದಷ್ಟು ಬೇಗ ನಾವು ಉದ್ಯೋಗಿಗಳನ್ನು ಕಚೇರಿಗೆ ಕರೆಸಿಕೊಳ್ಳುವ ಆಲೋಚನೆಯಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಬಹುತೇಕ ಐಟಿ ಕಂಪೆನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿವೆ. ಕೆಲ ಸಂಸ್ಥೆಗಳು ಇದನ್ನು ಈಗಾಗಲೇ 2021ರ ಅಂತ್ಯದವರೆಗೆ ವಿಸ್ತರಣೆ ಮಾಡಿವೆ. ಇನ್ನೂ ಕೆಲ ಸಂಸ್ಥೆಗಳು ಶಾಶ್ವತವಾಗಿ ವರ್ಕ್​ ಫ್ರಮ್​ ಹೋಂ ಆಯ್ಕೆ ನೀಡಿವೆ.

ಲೊಕೇಶನ್ ಮಾಹಿತಿ ಸೋರಿಕೆಗೆ ಆಪಲ್-ಗೂಗಲ್ ಕಡಿವಾಣ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ