ಚಿಕಿತ್ಸೆ ಸಿಗದೆ ಸರ್ಕಾರಿ ನೌಕರ ಸಾವು

ಬೆಂಗಳೂರು: ಚಿಕಿತ್ಸೆ ಸಿಗದೆ ಕೊರೊನಾ ಶಂಕಿತ ಸರ್ಕಾರಿ ನೌಕರ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ(58) ಮೃತ ದುರ್ದೈವಿ. ಇವರು ಅಬಕಾರಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತ ಕುಮಾರಸ್ವಾಮಿ ಇಂದು ಬೆಳಗ್ಗೆ ಮನೆಯ ಬಳಿ ಕುಸಿದು ಬಿದ್ದಿದ್ದರು. ಕುಟುಂಬಸ್ಥರು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರನ್ನು ವಿಕ್ಟೋರಿಯಾಗೆ ಕರೆದೊಯ್ಯಲು ಸೂಚಿಸಿದ್ದಾರೆ. ಹೀಗಾಗಿ ಕುಟುಂಬಸ್ಥರು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬೆಡ್​ಗಳು ಖಾಲಿ‌ ಇಲ್ಲದ ಹಿನ್ನೆಲೆಯಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ವ್ಯಕ್ತಿ ಮೃತಪಟ್ಟಿದ್ದಾರೆ.

ಚಿಕಿತ್ಸೆ ಸಿಗದೆ ಸರ್ಕಾರಿ ನೌಕರ ಸಾವು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jul 15, 2020 | 12:27 PM

ಬೆಂಗಳೂರು: ಚಿಕಿತ್ಸೆ ಸಿಗದೆ ಕೊರೊನಾ ಶಂಕಿತ ಸರ್ಕಾರಿ ನೌಕರ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ(58) ಮೃತ ದುರ್ದೈವಿ. ಇವರು ಅಬಕಾರಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಮೃತ ಕುಮಾರಸ್ವಾಮಿ ಇಂದು ಬೆಳಗ್ಗೆ ಮನೆಯ ಬಳಿ ಕುಸಿದು ಬಿದ್ದಿದ್ದರು. ಕುಟುಂಬಸ್ಥರು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರನ್ನು ವಿಕ್ಟೋರಿಯಾಗೆ ಕರೆದೊಯ್ಯಲು ಸೂಚಿಸಿದ್ದಾರೆ. ಹೀಗಾಗಿ ಕುಟುಂಬಸ್ಥರು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬೆಡ್​ಗಳು ಖಾಲಿ‌ ಇಲ್ಲದ ಹಿನ್ನೆಲೆಯಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ವ್ಯಕ್ತಿ ಮೃತಪಟ್ಟಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us