AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಮಾಧ್ಯಮ ಸಂಯೋಜಕ ದಿ. ಗುರುಲಿಂಗಸ್ವಾಮಿ ಹೊಳಿಮಠ ಪತ್ನಿಗೆ ನೌಕರಿ ಮಂಜೂರು ಮಾಡಿದ ಸರ್ಕಾರ

ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿದ್ದ ದಿವಂಗತ ಗುರುಲಿಂಗಸ್ವಾಮಿ ಹೊಳಿಮಠ ಕುಟುಂಬಕ್ಕೆ ನೌಕರಿ ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಿಎಂ ಮಾಧ್ಯಮ ಸಂಯೋಜಕ ದಿ. ಗುರುಲಿಂಗಸ್ವಾಮಿ ಹೊಳಿಮಠ ಪತ್ನಿಗೆ ನೌಕರಿ ಮಂಜೂರು ಮಾಡಿದ ಸರ್ಕಾರ
ಗುರುಲಿಂಗಸ್ವಾಮಿ ಹೊಳಿಮಠ
TV9 Web
| Edited By: |

Updated on:Sep 09, 2022 | 7:55 PM

Share

ಬೆಂಗಳೂರು: ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿದ್ದ ದಿವಂಗತ ಗುರುಲಿಂಗಸ್ವಾಮಿ ಹೊಳಿಮಠ ಕುಟುಂಬಕ್ಕೆ ನೌಕರಿ ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದಿ. ಗುರುಲಿಂಗಸ್ವಾಮಿ ಹೊಳಿಮಠ ಪತ್ನಿ ದೀಪಾ ಅವರಿಗೆ ಸಿಎಂ ಸಚಿವಾಲಯದಲ್ಲಿ ಸಿ ಗ್ರೂಪ್ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ  ಆ.23  ಸೋಮವಾರ ಮುಂಜಾನೆ ನಿಧನರಾದರು. 44 ವರ್ಷ ವಯಸ್ಸಿನ ಅವರಿಗೆ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ನಾಗರಬಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿದ್ದ ವಾಹನ ಆಸ್ಪತ್ರೆ ತಲುಪುವ ಒಳಗೆ ಪ್ರಾಣಪಕ್ಷಿ ಹಾರಿಹೋಗಿತ್ತು.

ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾದ ನಂತರ ಗುರುಲಿಂಗಸ್ವಾಮಿ ಅವರನ್ನು ಗೃಹ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಲಾಗಿತ್ತು. ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಗುರುಲಿಂಗಸ್ವಾಮಿ ಅವರನ್ನು ಮಾಧ್ಯಮ ಸಂಯೋಜಕರಾಗಿ ನೇಮಿಸಿಕೊಳ್ಳಲಾಯಿತು.

ಕಳೆದ ವರ್ಷ (2021ರ) ಆಗಸ್ಟ್​ 2ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ಗುರುಲಿಂಗಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಆಗಸ್ಟ್​ 18, 2021ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಲಾಗಿತ್ತು. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Fri, 9 September 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​