AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಮಾಧ್ಯಮ ಸಂಯೋಜಕ ದಿ. ಗುರುಲಿಂಗಸ್ವಾಮಿ ಹೊಳಿಮಠ ಪತ್ನಿಗೆ ನೌಕರಿ ಮಂಜೂರು ಮಾಡಿದ ಸರ್ಕಾರ

ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿದ್ದ ದಿವಂಗತ ಗುರುಲಿಂಗಸ್ವಾಮಿ ಹೊಳಿಮಠ ಕುಟುಂಬಕ್ಕೆ ನೌಕರಿ ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಿಎಂ ಮಾಧ್ಯಮ ಸಂಯೋಜಕ ದಿ. ಗುರುಲಿಂಗಸ್ವಾಮಿ ಹೊಳಿಮಠ ಪತ್ನಿಗೆ ನೌಕರಿ ಮಂಜೂರು ಮಾಡಿದ ಸರ್ಕಾರ
ಗುರುಲಿಂಗಸ್ವಾಮಿ ಹೊಳಿಮಠ
TV9 Web
| Edited By: ವಿವೇಕ ಬಿರಾದಾರ|

Updated on:Sep 09, 2022 | 7:55 PM

Share

ಬೆಂಗಳೂರು: ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿದ್ದ ದಿವಂಗತ ಗುರುಲಿಂಗಸ್ವಾಮಿ ಹೊಳಿಮಠ ಕುಟುಂಬಕ್ಕೆ ನೌಕರಿ ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದಿ. ಗುರುಲಿಂಗಸ್ವಾಮಿ ಹೊಳಿಮಠ ಪತ್ನಿ ದೀಪಾ ಅವರಿಗೆ ಸಿಎಂ ಸಚಿವಾಲಯದಲ್ಲಿ ಸಿ ಗ್ರೂಪ್ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ  ಆ.23  ಸೋಮವಾರ ಮುಂಜಾನೆ ನಿಧನರಾದರು. 44 ವರ್ಷ ವಯಸ್ಸಿನ ಅವರಿಗೆ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ನಾಗರಬಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿದ್ದ ವಾಹನ ಆಸ್ಪತ್ರೆ ತಲುಪುವ ಒಳಗೆ ಪ್ರಾಣಪಕ್ಷಿ ಹಾರಿಹೋಗಿತ್ತು.

ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾದ ನಂತರ ಗುರುಲಿಂಗಸ್ವಾಮಿ ಅವರನ್ನು ಗೃಹ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಲಾಗಿತ್ತು. ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಗುರುಲಿಂಗಸ್ವಾಮಿ ಅವರನ್ನು ಮಾಧ್ಯಮ ಸಂಯೋಜಕರಾಗಿ ನೇಮಿಸಿಕೊಳ್ಳಲಾಯಿತು.

ಕಳೆದ ವರ್ಷ (2021ರ) ಆಗಸ್ಟ್​ 2ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ಗುರುಲಿಂಗಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಆಗಸ್ಟ್​ 18, 2021ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಲಾಗಿತ್ತು. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Fri, 9 September 22

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್