Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಅಭಿವೃದ್ಧಿಗೆ ಅನುದಾನ ನೀಡಲು ಸಿದ್ಧ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇಂದು ಬೆಂಗಳೂರಿನ ಅರಣ್ಯ ಭವನದಲ್ಲಿ ಎಲ್ಲಾ ವೃತ್ತಗಳ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪ್ರಾದೇಶಿಕ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿದ ಸಿಎಂ ಬಿಎಸ್​​ವೈ

ಅರಣ್ಯ ಅಭಿವೃದ್ಧಿಗೆ ಅನುದಾನ ನೀಡಲು ಸಿದ್ಧ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪ್ರಾದೇಶಿಕ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿದ ಸಿಎಂ ಬಿಎಸ್​ವೈ
Follow us
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 24, 2021 | 3:41 PM

ಬೆಂಗಳೂರು: ಅರಣ್ಯ ಪ್ರದೇಶಗಳಲ್ಲಿ ಹಣ್ಣಿನ ಮರಗಳನ್ನು ಬೆಳೆಸಲು ಕ್ರಮ ತೆಗೆದುಕೊಳ್ಳಿ. ಇದರಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರವನ್ನು ಒದಗಿಸುವುದರ ಜೊತೆ ಅರಣ್ಯ ಪ್ರದೇಶದ ಹೆಚ್ಚಳ ಆಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಳೂರಿನ ಅರಣ್ಯ ಭವನದಲ್ಲಿ ಎಲ್ಲಾ ವೃತ್ತಗಳ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪ್ರಾದೇಶಿಕ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು.

ಅರಣ್ಯ ಅಭಿವೃದ್ಧಿಗೆ ಅರಣ್ಯವಾಸಿಗಳ ಮತ್ತು ರೈತರ ಸಹಕಾರ ಬಹಳ ಮುಖ್ಯ. ಅವರೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಿಕೊಳ್ಳುವುದು ಅರಣ್ಯ ಅಧಿಕಾರಿಗಳ ಕರ್ತವ್ಯ ಎಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಹಸಿರು ವಲಯ ಹೆಚ್ಚಳ ಮಾಡಬೇಕಿದೆ. ಈಗ ರಾಜ್ಯದಲ್ಲಿ ಹಸಿರುವಲಯ ಶೇ 22.8ರಷ್ಟಿದೆ. ಅದನ್ನು ಶೇ 33 ರಷ್ಟು ಹೆಚ್ಚಿಸಬೇಕು. ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಒದಗಿಸುವುದಾಗಿ ಅವರು ತಿಳಿಸಿದರು. ಬೇಸಿಗೆ ಸಮೀಪಿಸುತ್ತಿದೆ, ಕಾಡ್ಗಿಚ್ಚು ಹಬ್ಬಬಹುದು, ಅದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ, ಅರಣ್ಯ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

aravind limbavali and BS Yediyurappa

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪ್ರಾದೇಶಿಕ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿದ ಸಿಎಂ ಬಿಎಸ್​ವೈ ಮತ್ತು ಅರವಿಂದ ಲಿಂಬಾವಳಿ

ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಿಲ್ಲಬೇಕು ಕಾರ್ಯಾಗಾರದಲ್ಲಿ ಮಾತನಾಡಿದ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕು. ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಾರದು, ಗಣಿಗಾರಿಕೆಯಿಂದ ಪ್ರಾಣಿಗಳ ಆಹಾರ ಪದ್ಧತಿ ಬದಲಾಗಿದೆ, ಹಾಗೂ ಆ ಶಬ್ದಗಳಿಂದ ಹೆದರಿ ಅವು ಸಮೀಪ ಇರುವ ನಗರ ಪಟ್ಟಣ ಪ್ರದೇಶಗಳಿಗೆ ನುಗ್ಗುತ್ತಿದೆ ಇದರಿಂದ, ಅನೇಕ ರೀತಿಯ ಆಪತ್ತುಗಳು ಉಂಟಾಗುತ್ತಿವೆ ಎಂದು ಅವರು ಹೇಳಿದರು.

ಮಾನವ ಮತ್ತು ಪ್ರಾಣಿಗಳ ಸಂಘರ್ಷದ ಬಗ್ಗೆ ಅರಣ್ಯ ಇಲಾಖೆ ಹೆಚ್ಚು ಗಮನ ಹರಿಸಿದೆ. ಕಾಡುಪ್ರಾಣಿಗಳಿಂದ ಮನುಷ್ಯರು ಸಾವಿಗೀಡಾದಾಗ ನೀಡಲಾಗುತ್ತಿರುವ ಪರಿಹಾರವನ್ನು ಹೆಚ್ಚು ಮಾಡಬೇಕು. ದೊಡ್ಡ ಪ್ರಾಣಿಗಳು ಮತ್ತು ಸಣ್ಣ ಪ್ರಾಣಿಗಳು ಸತ್ತಾಗ ನಾವು ₹ 5, ₹ 10 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದೇವೆ. ಇದನ್ನು ಹೆಚ್ಚಿಸಬೇಕಿದೆ ಎಂದು ಹೇಳಿದರು.

ಕೆಳಹಂತದ ಅರಣ್ಯ ಇಲಾಖೆಯ ನೌಕರರು ಅರಣ್ಯ ಸಂರಕ್ಷಣೆಗೆ ವಾಹನ ಬಳಸಬೇಕಾದ್ದು ಅನಿವಾರ್ಯ. ಆದರೆ ನಾವು ಅವರಿಗೆ ವಾಹನ ಬದಗಿಸಿಲ್ಲ, ಅವರದ್ದೇ ಸ್ವಂತ ದ್ವಿಚಕ್ರ ವಾಹನ ಬಳಸುತ್ತಿದ್ದಾರೆ. ನಾವು ಕನಿಷ್ಠ ಇಂಧನ ಭತ್ಯೆಯನ್ನಾದರೂ ಕೊಡಬೇಕಿದೆ ಎಂದು ಅವರು ತಿಳಿಸಿದರು. ಕಾಡುಪ್ರಾಣಿಗಳು, ವಿಶೇಷವಾಗಿ ಕಾಡಾನೆಗಳು ನಗರಕ್ಕೆ ಬಾರದಂತೆ ಬ್ಯಾರಿಕೇಡ್ ನಿರ್ಮಿಸಲು ಅನುಮತಿ ಕೋರಿ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

aravind limbavali and BS Yediyurappa

ಇದನ್ನೂ ಓದಿ: ಅಧಿಕಾರಿಗಳು, ನೌಕರರ ವಿರುದ್ಧ ಅನಾಮಧೇಯ ದೂರು.. ಮುಖ್ಯಕಾರ್ಯದರ್ಶಿಗೆ ಪತ್ರ ಬರೆದ ಸಿಎಂ

Published On - 3:40 pm, Wed, 24 February 21

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ