AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ

ಗದಗ: ಇಡೀ ದೇಶವನ್ನ ಬುಡಮೇಲು ಮಾಡಿರುವ ಕೊರೊನಾ ವಿರುದ್ಧದ ಹೋರಾಟಕ್ಕೆ ಕೊರೊನಾ ವಾರಿಯರ್ಸ್ ಮನೆ ಮಠ ಬಿಟ್ಟು ಶ್ರಮಿಸುತ್ತಿದ್ದಾರೆ. ಆದರೆ ಸರ್ಕಾರ ಅವರ ನೆರವಿಗೆ ನಿಲ್ಲುತಿಲ್ಲ. ಮೇ 27 ರಂದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಡ್ಯೂಟಿ ವೇಳೆ 108 ಆ್ಯಂಬುಲೆನ್ಸ್ ಚಾಲಕ ಉಮೇಶ್ ಹಡಗಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕೊರೊನಾ ವಾರಿಯರ್ ಮೃತಪಟ್ಟರೂ ಅಧಿಕಾರಿಗಳು ಕುಟುಂಬದ ನೆರವಿಗೆ ಬಂದಿಲ್ಲ. ತಾಳಿಯನ್ನು ಅಡವಿಟ್ಟು ಪತ್ನಿ ಮೃತ ಪತಿಯ ಕಾರ್ಯ ಮಾಡಿದ್ದಾರೆ. ಕೊರೊನಾ ವಾರಿಯರ್ ಮೃತಪಟ್ಟು 5 […]

ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ
ಆಯೇಷಾ ಬಾನು
|

Updated on:Jun 01, 2020 | 2:51 PM

Share

ಗದಗ: ಇಡೀ ದೇಶವನ್ನ ಬುಡಮೇಲು ಮಾಡಿರುವ ಕೊರೊನಾ ವಿರುದ್ಧದ ಹೋರಾಟಕ್ಕೆ ಕೊರೊನಾ ವಾರಿಯರ್ಸ್ ಮನೆ ಮಠ ಬಿಟ್ಟು ಶ್ರಮಿಸುತ್ತಿದ್ದಾರೆ. ಆದರೆ ಸರ್ಕಾರ ಅವರ ನೆರವಿಗೆ ನಿಲ್ಲುತಿಲ್ಲ.

ಮೇ 27 ರಂದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಡ್ಯೂಟಿ ವೇಳೆ 108 ಆ್ಯಂಬುಲೆನ್ಸ್ ಚಾಲಕ ಉಮೇಶ್ ಹಡಗಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕೊರೊನಾ ವಾರಿಯರ್ ಮೃತಪಟ್ಟರೂ ಅಧಿಕಾರಿಗಳು ಕುಟುಂಬದ ನೆರವಿಗೆ ಬಂದಿಲ್ಲ.

ತಾಳಿಯನ್ನು ಅಡವಿಟ್ಟು ಪತ್ನಿ ಮೃತ ಪತಿಯ ಕಾರ್ಯ ಮಾಡಿದ್ದಾರೆ. ಕೊರೊನಾ ವಾರಿಯರ್ ಮೃತಪಟ್ಟು 5 ದಿನಗಳಾಗಿದೆ. ಸೌಜನ್ಯಕ್ಕಾದರೂ ಮೃತನ ಮನೆಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಯಾರೂ ಭೇಟಿ ನೀಡಿಲ್ಲ. ಮೃತನ ಪತ್ನಿಗೆ ಸಾಂತ್ವನ ಹೇಳುವ ಕೆಲಸವನ್ನೂ ಮಾಡಿಲ್ಲ. ಮನೆ ಯಜಮಾನ ಕಳೆದುಕೊಂಡು ಕುಟುಂಬ ಕಣ್ಣೀರು ಹಾಕುತ್ತಿದೆ.

ಉಸ್ತುವಾರಿ ಸಚಿವ, ಕ್ಷೇತ್ರದ ಶಾಸಕ ಸಿಸಿ ಪಾಟೀಲ್ ಕೂಡ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಗದಗ ಡಿಹೆಚ್‌ಒ ಇದು ತನ್ನ ವ್ಯಾಪ್ತಿಗೆ ಬರಲ್ಲವೆಂದು ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ. ಡಿಹೆಚ್‌ಒ ಬೇಜವಾಬ್ದಾರಿ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು, ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಸಿಎಂ ಯಡಿಯೂರಪ್ಪ ಸಾಂತ್ವನ: ಮೃತನ ಪತ್ನಿಗೆ ಸಿಎಂ B.S.ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಸರ್ಕಾರದಿಂದ ಸಿಗಬೇಕಾದ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ. ಕೊರೊನಾ ವಾರಿಯರ್ ಕುಟುಂಬದ ಸಂಕಷ್ಟದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

Published On - 9:28 am, Mon, 1 June 20

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ