AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ

ಗದಗ: ಇಡೀ ದೇಶವನ್ನ ಬುಡಮೇಲು ಮಾಡಿರುವ ಕೊರೊನಾ ವಿರುದ್ಧದ ಹೋರಾಟಕ್ಕೆ ಕೊರೊನಾ ವಾರಿಯರ್ಸ್ ಮನೆ ಮಠ ಬಿಟ್ಟು ಶ್ರಮಿಸುತ್ತಿದ್ದಾರೆ. ಆದರೆ ಸರ್ಕಾರ ಅವರ ನೆರವಿಗೆ ನಿಲ್ಲುತಿಲ್ಲ. ಮೇ 27 ರಂದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಡ್ಯೂಟಿ ವೇಳೆ 108 ಆ್ಯಂಬುಲೆನ್ಸ್ ಚಾಲಕ ಉಮೇಶ್ ಹಡಗಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕೊರೊನಾ ವಾರಿಯರ್ ಮೃತಪಟ್ಟರೂ ಅಧಿಕಾರಿಗಳು ಕುಟುಂಬದ ನೆರವಿಗೆ ಬಂದಿಲ್ಲ. ತಾಳಿಯನ್ನು ಅಡವಿಟ್ಟು ಪತ್ನಿ ಮೃತ ಪತಿಯ ಕಾರ್ಯ ಮಾಡಿದ್ದಾರೆ. ಕೊರೊನಾ ವಾರಿಯರ್ ಮೃತಪಟ್ಟು 5 […]

ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ
ಆಯೇಷಾ ಬಾನು
|

Updated on:Jun 01, 2020 | 2:51 PM

Share

ಗದಗ: ಇಡೀ ದೇಶವನ್ನ ಬುಡಮೇಲು ಮಾಡಿರುವ ಕೊರೊನಾ ವಿರುದ್ಧದ ಹೋರಾಟಕ್ಕೆ ಕೊರೊನಾ ವಾರಿಯರ್ಸ್ ಮನೆ ಮಠ ಬಿಟ್ಟು ಶ್ರಮಿಸುತ್ತಿದ್ದಾರೆ. ಆದರೆ ಸರ್ಕಾರ ಅವರ ನೆರವಿಗೆ ನಿಲ್ಲುತಿಲ್ಲ.

ಮೇ 27 ರಂದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಡ್ಯೂಟಿ ವೇಳೆ 108 ಆ್ಯಂಬುಲೆನ್ಸ್ ಚಾಲಕ ಉಮೇಶ್ ಹಡಗಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕೊರೊನಾ ವಾರಿಯರ್ ಮೃತಪಟ್ಟರೂ ಅಧಿಕಾರಿಗಳು ಕುಟುಂಬದ ನೆರವಿಗೆ ಬಂದಿಲ್ಲ.

ತಾಳಿಯನ್ನು ಅಡವಿಟ್ಟು ಪತ್ನಿ ಮೃತ ಪತಿಯ ಕಾರ್ಯ ಮಾಡಿದ್ದಾರೆ. ಕೊರೊನಾ ವಾರಿಯರ್ ಮೃತಪಟ್ಟು 5 ದಿನಗಳಾಗಿದೆ. ಸೌಜನ್ಯಕ್ಕಾದರೂ ಮೃತನ ಮನೆಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಯಾರೂ ಭೇಟಿ ನೀಡಿಲ್ಲ. ಮೃತನ ಪತ್ನಿಗೆ ಸಾಂತ್ವನ ಹೇಳುವ ಕೆಲಸವನ್ನೂ ಮಾಡಿಲ್ಲ. ಮನೆ ಯಜಮಾನ ಕಳೆದುಕೊಂಡು ಕುಟುಂಬ ಕಣ್ಣೀರು ಹಾಕುತ್ತಿದೆ.

ಉಸ್ತುವಾರಿ ಸಚಿವ, ಕ್ಷೇತ್ರದ ಶಾಸಕ ಸಿಸಿ ಪಾಟೀಲ್ ಕೂಡ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಗದಗ ಡಿಹೆಚ್‌ಒ ಇದು ತನ್ನ ವ್ಯಾಪ್ತಿಗೆ ಬರಲ್ಲವೆಂದು ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ. ಡಿಹೆಚ್‌ಒ ಬೇಜವಾಬ್ದಾರಿ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು, ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಸಿಎಂ ಯಡಿಯೂರಪ್ಪ ಸಾಂತ್ವನ: ಮೃತನ ಪತ್ನಿಗೆ ಸಿಎಂ B.S.ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಸರ್ಕಾರದಿಂದ ಸಿಗಬೇಕಾದ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ. ಕೊರೊನಾ ವಾರಿಯರ್ ಕುಟುಂಬದ ಸಂಕಷ್ಟದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

Published On - 9:28 am, Mon, 1 June 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!