AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಅಲೆ ಭೀತಿಯಿದ್ರೂ ಎಡವಿತಾ ಸರ್ಕಾರ, ಜನರಿಲ್ಲ ಅನ್ನೋ ನೆಪಕ್ಕೆ ಕೋವಿಡ್ ಕೇರ್ ಸೆಂಟರ್ ಬಂದ್..

ಬೆಂಗಳೂರು: ಕೊರೊನಾ ದಾಳಿ ಇಡುತ್ತಿದ್ದ ಸಂದರ್ಭದಲ್ಲಿ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್​ಗಳನ್ನು ತೆರೆದಿತ್ತು. ಆದರೆ ಈಗ ಅದಕ್ಕೆ ಬೀಗ ಹಾಕಲು ಮುಂದಾಗಿದೆ. ಕೊರೊನಾ 2ನೇ ಅಲೆ ವಕ್ಕರಿಸಿರುವಾಗಲೇ ಕೇರ್ ಸೆಂಟರ್​ಗಳಿಗೆ ಬೀಗ ಏತಕ್ಕಾಗಿ ಹಾಕಲಾಗುತ್ತಿದೆ. ಕೊರೊನಾರ್ಭಟ ಹೊತ್ತಲ್ಲೇ ರೆಡಿ ಇರಬೇಕಿದ್ದ ಸರ್ಕಾರ ಮಾಡ್ತಿರೋದೇನು? ಎಂಬ ಪ್ರಶ್ನೆಗಳೆದ್ದಿವೆ. ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಸರ್ಕಾರ ನಿರ್ಮಿಸಿದ್ದ ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಸೋಂಕಿತರ ಆರೈಕೆಗೆ ಬೆಂಗಳೂರಿನಲ್ಲಿ 12 ಕೇರ್ […]

2ನೇ ಅಲೆ ಭೀತಿಯಿದ್ರೂ ಎಡವಿತಾ ಸರ್ಕಾರ, ಜನರಿಲ್ಲ ಅನ್ನೋ ನೆಪಕ್ಕೆ ಕೋವಿಡ್ ಕೇರ್ ಸೆಂಟರ್ ಬಂದ್..
ಆಯೇಷಾ ಬಾನು
|

Updated on:Oct 30, 2020 | 8:25 AM

Share

ಬೆಂಗಳೂರು: ಕೊರೊನಾ ದಾಳಿ ಇಡುತ್ತಿದ್ದ ಸಂದರ್ಭದಲ್ಲಿ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್​ಗಳನ್ನು ತೆರೆದಿತ್ತು. ಆದರೆ ಈಗ ಅದಕ್ಕೆ ಬೀಗ ಹಾಕಲು ಮುಂದಾಗಿದೆ. ಕೊರೊನಾ 2ನೇ ಅಲೆ ವಕ್ಕರಿಸಿರುವಾಗಲೇ ಕೇರ್ ಸೆಂಟರ್​ಗಳಿಗೆ ಬೀಗ ಏತಕ್ಕಾಗಿ ಹಾಕಲಾಗುತ್ತಿದೆ. ಕೊರೊನಾರ್ಭಟ ಹೊತ್ತಲ್ಲೇ ರೆಡಿ ಇರಬೇಕಿದ್ದ ಸರ್ಕಾರ ಮಾಡ್ತಿರೋದೇನು? ಎಂಬ ಪ್ರಶ್ನೆಗಳೆದ್ದಿವೆ.

ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಸರ್ಕಾರ ನಿರ್ಮಿಸಿದ್ದ ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಸೋಂಕಿತರ ಆರೈಕೆಗೆ ಬೆಂಗಳೂರಿನಲ್ಲಿ 12 ಕೇರ್ ಸೆಂಟರ್ ನಿರ್ಮಾಣ ಮಾಡಲಾಗಿತ್ತು. 12 ಕೇರ್ ಸೆಂಟರ್​ಗಳಲ್ಲಿ ಸುಮಾರು 14 ಸಾವಿರ ಬೆಡ್ ವ್ಯವಸ್ಥೆ ಇತ್ತು. ಆದರೆ, ಕೇರ್ ಸೆಂಟರ್​ಗಳಿಗೆ ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಈಗಾಗಲೇ 8 ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲಾಗಿದೆ. ಉಳಿದ 4 ಕೇರ್ ಸೆಂಟರ್​ಗಳನ್ನು ಶೀಘ್ರವೇ ಕ್ಲೋಸ್ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಒಂದೆಡೆ ಯುರೋಪ್​ ರಾಷ್ಟ್ರಗಳಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಹೀಗಾಗಿ ಯುರೋಪ್​ ರಾಷ್ಟ್ರಗಳಲ್ಲಿ ಮತ್ತೆ ಲಾಕ್​ಡೌನ್​ ಮಾಡಲಾಗುತ್ತಿದೆ.

ಒಂದೆಡೆ ಕೊರೊನಾ ಅಬ್ಬರ, ಮತ್ತೊಂದ್ಕಡೆ ಎಡವಟ್ಟಿನ ನಿರ್ಧಾರ ಜೊತೆಗೆ ದೇಶದಲ್ಲಿ ಈಗ ಚಳಿಗಾಲ ಆರಂಭವಾಗುತ್ತಿದೆ. ಚಳಿಗಾಲ ಡೇಂಜರ್ ಅಂತಾ ಆರೋಗ್ಯ ಸಚಿವರೇ ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕೇರ್​ ಸೆಂಟರ್​ ಆರಂಭಿಸಬೇಕು. ಆದರೆ ರಾಜ್ಯದಲ್ಲಿ ಮಾತ್ರ ಕೊವಿಡ್​ ಕೇರ್​ ಸೆಂಟರ್ ಕ್ಲೋಸ್ ಮಾಡಲಾಗುತ್ತಿದೆ. ಎರಡನೇ ಅಲೆ ಹೇಗಿರಲಿದೆ ಎಂಬ ಯೋಚನೆಯೂ ಇಲ್ಲ. ಹೀಗಿರುವಾಗ ಕೇರ್ ಸೆಂಟರ್ ಮುಚ್ಚಬೇಕೇ ಎಂದು ಕೆಲವರು ಪ್ರಶ್ನಿಸಿದ್ದಾರೆ.

Published On - 8:25 am, Fri, 30 October 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!