AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಅಲೆ ಭೀತಿಯಿದ್ರೂ ಎಡವಿತಾ ಸರ್ಕಾರ, ಜನರಿಲ್ಲ ಅನ್ನೋ ನೆಪಕ್ಕೆ ಕೋವಿಡ್ ಕೇರ್ ಸೆಂಟರ್ ಬಂದ್..

ಬೆಂಗಳೂರು: ಕೊರೊನಾ ದಾಳಿ ಇಡುತ್ತಿದ್ದ ಸಂದರ್ಭದಲ್ಲಿ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್​ಗಳನ್ನು ತೆರೆದಿತ್ತು. ಆದರೆ ಈಗ ಅದಕ್ಕೆ ಬೀಗ ಹಾಕಲು ಮುಂದಾಗಿದೆ. ಕೊರೊನಾ 2ನೇ ಅಲೆ ವಕ್ಕರಿಸಿರುವಾಗಲೇ ಕೇರ್ ಸೆಂಟರ್​ಗಳಿಗೆ ಬೀಗ ಏತಕ್ಕಾಗಿ ಹಾಕಲಾಗುತ್ತಿದೆ. ಕೊರೊನಾರ್ಭಟ ಹೊತ್ತಲ್ಲೇ ರೆಡಿ ಇರಬೇಕಿದ್ದ ಸರ್ಕಾರ ಮಾಡ್ತಿರೋದೇನು? ಎಂಬ ಪ್ರಶ್ನೆಗಳೆದ್ದಿವೆ. ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಸರ್ಕಾರ ನಿರ್ಮಿಸಿದ್ದ ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಸೋಂಕಿತರ ಆರೈಕೆಗೆ ಬೆಂಗಳೂರಿನಲ್ಲಿ 12 ಕೇರ್ […]

2ನೇ ಅಲೆ ಭೀತಿಯಿದ್ರೂ ಎಡವಿತಾ ಸರ್ಕಾರ, ಜನರಿಲ್ಲ ಅನ್ನೋ ನೆಪಕ್ಕೆ ಕೋವಿಡ್ ಕೇರ್ ಸೆಂಟರ್ ಬಂದ್..
ಆಯೇಷಾ ಬಾನು
ಆಯೇಷಾ ಬಾನು|

Updated on:Oct 30, 2020 | 8:25 AM

Share

ಬೆಂಗಳೂರು: ಕೊರೊನಾ ದಾಳಿ ಇಡುತ್ತಿದ್ದ ಸಂದರ್ಭದಲ್ಲಿ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್​ಗಳನ್ನು ತೆರೆದಿತ್ತು. ಆದರೆ ಈಗ ಅದಕ್ಕೆ ಬೀಗ ಹಾಕಲು ಮುಂದಾಗಿದೆ. ಕೊರೊನಾ 2ನೇ ಅಲೆ ವಕ್ಕರಿಸಿರುವಾಗಲೇ ಕೇರ್ ಸೆಂಟರ್​ಗಳಿಗೆ ಬೀಗ ಏತಕ್ಕಾಗಿ ಹಾಕಲಾಗುತ್ತಿದೆ. ಕೊರೊನಾರ್ಭಟ ಹೊತ್ತಲ್ಲೇ ರೆಡಿ ಇರಬೇಕಿದ್ದ ಸರ್ಕಾರ ಮಾಡ್ತಿರೋದೇನು? ಎಂಬ ಪ್ರಶ್ನೆಗಳೆದ್ದಿವೆ.

ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಸರ್ಕಾರ ನಿರ್ಮಿಸಿದ್ದ ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಸೋಂಕಿತರ ಆರೈಕೆಗೆ ಬೆಂಗಳೂರಿನಲ್ಲಿ 12 ಕೇರ್ ಸೆಂಟರ್ ನಿರ್ಮಾಣ ಮಾಡಲಾಗಿತ್ತು. 12 ಕೇರ್ ಸೆಂಟರ್​ಗಳಲ್ಲಿ ಸುಮಾರು 14 ಸಾವಿರ ಬೆಡ್ ವ್ಯವಸ್ಥೆ ಇತ್ತು. ಆದರೆ, ಕೇರ್ ಸೆಂಟರ್​ಗಳಿಗೆ ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಈಗಾಗಲೇ 8 ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲಾಗಿದೆ. ಉಳಿದ 4 ಕೇರ್ ಸೆಂಟರ್​ಗಳನ್ನು ಶೀಘ್ರವೇ ಕ್ಲೋಸ್ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಒಂದೆಡೆ ಯುರೋಪ್​ ರಾಷ್ಟ್ರಗಳಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಹೀಗಾಗಿ ಯುರೋಪ್​ ರಾಷ್ಟ್ರಗಳಲ್ಲಿ ಮತ್ತೆ ಲಾಕ್​ಡೌನ್​ ಮಾಡಲಾಗುತ್ತಿದೆ.

ಒಂದೆಡೆ ಕೊರೊನಾ ಅಬ್ಬರ, ಮತ್ತೊಂದ್ಕಡೆ ಎಡವಟ್ಟಿನ ನಿರ್ಧಾರ ಜೊತೆಗೆ ದೇಶದಲ್ಲಿ ಈಗ ಚಳಿಗಾಲ ಆರಂಭವಾಗುತ್ತಿದೆ. ಚಳಿಗಾಲ ಡೇಂಜರ್ ಅಂತಾ ಆರೋಗ್ಯ ಸಚಿವರೇ ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕೇರ್​ ಸೆಂಟರ್​ ಆರಂಭಿಸಬೇಕು. ಆದರೆ ರಾಜ್ಯದಲ್ಲಿ ಮಾತ್ರ ಕೊವಿಡ್​ ಕೇರ್​ ಸೆಂಟರ್ ಕ್ಲೋಸ್ ಮಾಡಲಾಗುತ್ತಿದೆ. ಎರಡನೇ ಅಲೆ ಹೇಗಿರಲಿದೆ ಎಂಬ ಯೋಚನೆಯೂ ಇಲ್ಲ. ಹೀಗಿರುವಾಗ ಕೇರ್ ಸೆಂಟರ್ ಮುಚ್ಚಬೇಕೇ ಎಂದು ಕೆಲವರು ಪ್ರಶ್ನಿಸಿದ್ದಾರೆ.

Published On - 8:25 am, Fri, 30 October 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ