AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಅಲೆ ಭೀತಿಯಿದ್ರೂ ಎಡವಿತಾ ಸರ್ಕಾರ, ಜನರಿಲ್ಲ ಅನ್ನೋ ನೆಪಕ್ಕೆ ಕೋವಿಡ್ ಕೇರ್ ಸೆಂಟರ್ ಬಂದ್..

ಬೆಂಗಳೂರು: ಕೊರೊನಾ ದಾಳಿ ಇಡುತ್ತಿದ್ದ ಸಂದರ್ಭದಲ್ಲಿ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್​ಗಳನ್ನು ತೆರೆದಿತ್ತು. ಆದರೆ ಈಗ ಅದಕ್ಕೆ ಬೀಗ ಹಾಕಲು ಮುಂದಾಗಿದೆ. ಕೊರೊನಾ 2ನೇ ಅಲೆ ವಕ್ಕರಿಸಿರುವಾಗಲೇ ಕೇರ್ ಸೆಂಟರ್​ಗಳಿಗೆ ಬೀಗ ಏತಕ್ಕಾಗಿ ಹಾಕಲಾಗುತ್ತಿದೆ. ಕೊರೊನಾರ್ಭಟ ಹೊತ್ತಲ್ಲೇ ರೆಡಿ ಇರಬೇಕಿದ್ದ ಸರ್ಕಾರ ಮಾಡ್ತಿರೋದೇನು? ಎಂಬ ಪ್ರಶ್ನೆಗಳೆದ್ದಿವೆ. ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಸರ್ಕಾರ ನಿರ್ಮಿಸಿದ್ದ ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಸೋಂಕಿತರ ಆರೈಕೆಗೆ ಬೆಂಗಳೂರಿನಲ್ಲಿ 12 ಕೇರ್ […]

2ನೇ ಅಲೆ ಭೀತಿಯಿದ್ರೂ ಎಡವಿತಾ ಸರ್ಕಾರ, ಜನರಿಲ್ಲ ಅನ್ನೋ ನೆಪಕ್ಕೆ ಕೋವಿಡ್ ಕೇರ್ ಸೆಂಟರ್ ಬಂದ್..
ಆಯೇಷಾ ಬಾನು
ಆಯೇಷಾ ಬಾನು|

Updated on:Oct 30, 2020 | 8:25 AM

Share

ಬೆಂಗಳೂರು: ಕೊರೊನಾ ದಾಳಿ ಇಡುತ್ತಿದ್ದ ಸಂದರ್ಭದಲ್ಲಿ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್​ಗಳನ್ನು ತೆರೆದಿತ್ತು. ಆದರೆ ಈಗ ಅದಕ್ಕೆ ಬೀಗ ಹಾಕಲು ಮುಂದಾಗಿದೆ. ಕೊರೊನಾ 2ನೇ ಅಲೆ ವಕ್ಕರಿಸಿರುವಾಗಲೇ ಕೇರ್ ಸೆಂಟರ್​ಗಳಿಗೆ ಬೀಗ ಏತಕ್ಕಾಗಿ ಹಾಕಲಾಗುತ್ತಿದೆ. ಕೊರೊನಾರ್ಭಟ ಹೊತ್ತಲ್ಲೇ ರೆಡಿ ಇರಬೇಕಿದ್ದ ಸರ್ಕಾರ ಮಾಡ್ತಿರೋದೇನು? ಎಂಬ ಪ್ರಶ್ನೆಗಳೆದ್ದಿವೆ.

ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಸರ್ಕಾರ ನಿರ್ಮಿಸಿದ್ದ ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಸೋಂಕಿತರ ಆರೈಕೆಗೆ ಬೆಂಗಳೂರಿನಲ್ಲಿ 12 ಕೇರ್ ಸೆಂಟರ್ ನಿರ್ಮಾಣ ಮಾಡಲಾಗಿತ್ತು. 12 ಕೇರ್ ಸೆಂಟರ್​ಗಳಲ್ಲಿ ಸುಮಾರು 14 ಸಾವಿರ ಬೆಡ್ ವ್ಯವಸ್ಥೆ ಇತ್ತು. ಆದರೆ, ಕೇರ್ ಸೆಂಟರ್​ಗಳಿಗೆ ಸೋಂಕಿತರು ಬಾರದ ಹಿನ್ನೆಲೆಯಲ್ಲಿ ಈಗಾಗಲೇ 8 ಕೊವಿಡ್ ಕೇರ್ ಸೆಂಟರ್​ಗಳನ್ನು ಕ್ಲೋಸ್ ಮಾಡಲಾಗಿದೆ. ಉಳಿದ 4 ಕೇರ್ ಸೆಂಟರ್​ಗಳನ್ನು ಶೀಘ್ರವೇ ಕ್ಲೋಸ್ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಒಂದೆಡೆ ಯುರೋಪ್​ ರಾಷ್ಟ್ರಗಳಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಹೀಗಾಗಿ ಯುರೋಪ್​ ರಾಷ್ಟ್ರಗಳಲ್ಲಿ ಮತ್ತೆ ಲಾಕ್​ಡೌನ್​ ಮಾಡಲಾಗುತ್ತಿದೆ.

ಒಂದೆಡೆ ಕೊರೊನಾ ಅಬ್ಬರ, ಮತ್ತೊಂದ್ಕಡೆ ಎಡವಟ್ಟಿನ ನಿರ್ಧಾರ ಜೊತೆಗೆ ದೇಶದಲ್ಲಿ ಈಗ ಚಳಿಗಾಲ ಆರಂಭವಾಗುತ್ತಿದೆ. ಚಳಿಗಾಲ ಡೇಂಜರ್ ಅಂತಾ ಆರೋಗ್ಯ ಸಚಿವರೇ ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕೇರ್​ ಸೆಂಟರ್​ ಆರಂಭಿಸಬೇಕು. ಆದರೆ ರಾಜ್ಯದಲ್ಲಿ ಮಾತ್ರ ಕೊವಿಡ್​ ಕೇರ್​ ಸೆಂಟರ್ ಕ್ಲೋಸ್ ಮಾಡಲಾಗುತ್ತಿದೆ. ಎರಡನೇ ಅಲೆ ಹೇಗಿರಲಿದೆ ಎಂಬ ಯೋಚನೆಯೂ ಇಲ್ಲ. ಹೀಗಿರುವಾಗ ಕೇರ್ ಸೆಂಟರ್ ಮುಚ್ಚಬೇಕೇ ಎಂದು ಕೆಲವರು ಪ್ರಶ್ನಿಸಿದ್ದಾರೆ.

Published On - 8:25 am, Fri, 30 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.