AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಲ್ಲಿ ಅಂತ್ಯವಾದ ಗ್ರಾ.ಪಂ. ಚುನಾವಣಾ ವಿಜಯೋತ್ಸವ: ಗೆದ್ದ ಅಭ್ಯರ್ಥಿಯ ಸಂಬಂಧಿ ಸಾವು

ಗ್ರಾಮ ಪಂಚಾಯಿತಿ ಚುನಾವಣಾ ವಿಜಯೋತ್ಸವ ಕೊಲೆಯಲ್ಲಿ ಅಂತ್ಯವಾಗಿದೆ. ಗೆದ್ದ ಅಭ್ಯರ್ಥಿಯ ಸಂಬಂಧಿ ಮೃತಪಟ್ಟಿದ್ದಾನೆ.

ಕೊಲೆಯಲ್ಲಿ ಅಂತ್ಯವಾದ ಗ್ರಾ.ಪಂ. ಚುನಾವಣಾ ವಿಜಯೋತ್ಸವ: ಗೆದ್ದ ಅಭ್ಯರ್ಥಿಯ ಸಂಬಂಧಿ ಸಾವು
ಸಂಗ್ರಹ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Dec 31, 2020 | 1:09 PM

Share

ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣಾ ವಿಜಯೋತ್ಸವ ಕೊಲೆಯಲ್ಲಿ ಅಂತ್ಯವಾಗಿದೆ. ಗೆದ್ದ ಅಭ್ಯರ್ಥಿಯ ಸಂಬಂಧಿ ಮೃತಪಟ್ಟಿದ್ದಾನೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾಪುರ ಗ್ರಾಮದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಮತ್ತು ತದನಂತರ ನಿನ್ನೆಯ ಫಲಿತಾಂಶ ಘೋಷಣೆ ಸಂದರ್ಭದಲ್ಲಿ ಈ ದುರಂತ ಘಟನೆ ನಡೆದಿದ್ದು, ರೊಚ್ಚಿಗೆದ್ದ ಪರಸ್ಪರ ಗುಂಪುಗಳು ಬಡಿದಾಟದಲ್ಲಿ ತೊಡಗಿ, ಒಬ್ಬ ವ್ಯಕ್ತಿಯ ಸಾವಿನಲ್ಲಿ ಅಂತ್ಯವಾಗಿದೆ.

ಬಶೀರ ಮುಲ್ಲಾ, ಶಬ್ಬೀರ ಮುಲ್ಲಾ ಗ್ರಾ. ಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು. ಚುನಾಚಣೆಯಲ್ಲಿ ಬಶೀರ ಮುಲ್ಲಾ ಗೆಲುವು ಸಾಧಿಸಿದ್ದು, ಶಬ್ಬೀರ ಮುಲ್ಲಾಗೆ ಸೋಲುಂಟಾಗಿತ್ತು. ಗೆದ್ದ ಅಭ್ಯರ್ಥಿಯು ಸೋತ ಅಭ್ಯರ್ಥಿ ಮನೆ ಮುಂದೆ ವಿಜಯೋತ್ಸವ ಮಾಡಿದ್ದ. ಈ ವಿಜಯೋತ್ಸವ ಹಿನ್ನೆಲೆ ಪರಸ್ಪರ ಗುಂಪುಗಳು ಮಾರಕಾಸ್ತ್ರಗಳಿಂದ ತೀವ್ರವಾಗಿ ಕಾದಾಟದಲ್ಲಿ ತೊಡಗಿದ್ದವು. ಆ ವೇಳೆ, ಗೆದ್ದ ಬಶೀರ ಮುಲ್ಲಾನ ಸಹೋದರ ಶಾನೂರ ಮುಲ್ಲಾ(50) ಸಾವಿಗೀಡಾಗಿದ್ದಾನೆ.

ಶಬ್ಬೀರ ಮುಲ್ಲಾ ಸಂಬಂಧಿಕರು ಮಾರಕಾಸ್ತ್ರಗಳಿಂದ ಶಾನೂರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಒಂದು ಗಂಟೆಯಲ್ಲಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮ.. ಬೆಂಬಲಿಗರು, ಕುಟುಂಬಸ್ಥರ ನಡುವೆ ಮಾರಾಮಾರಿ

Published On - 1:08 pm, Thu, 31 December 20

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!